6
  • Latest

ನಿವೃತ್ತಿ ಅಂಚಿನಲ್ಲಿರುವವರಿಗೆ ಈ ಇಲಾಖೆ: ಹಿರಿಯ ನಾಗರಿಕರ ಸೇವೆಗಿಲ್ಲ ನಿರ್ಧಿಷ್ಟ ಅಧಿಕಾರಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ನಿವೃತ್ತಿ ಅಂಚಿನಲ್ಲಿರುವವರಿಗೆ ಈ ಇಲಾಖೆ: ಹಿರಿಯ ನಾಗರಿಕರ ಸೇವೆಗಿಲ್ಲ ನಿರ್ಧಿಷ್ಟ ಅಧಿಕಾರಿ!

AchyutKumar by AchyutKumar
in ವಿಡಿಯೋ

ಕಾರವಾರ: ಕಳೆದ ಎಂಟು ವರ್ಷಗಳಿಂದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಗೆ ಪೂರ್ಣಾವಧಿ ಅಧಿಕಾರಿಗಳಿಲ್ಲ. ಆಗಾಗ ನಿವೃತ್ತಿ ಅಂಚಿನಲ್ಲಿರುವವರನ್ನು ಸರ್ಕಾರ ಈ ಇಲಾಖೆಗೆ ನೇಮಿಸುತ್ತಿದ್ದು, ವರ್ಷ ಕಳೆಯುವದರೊಳಗೆ ಆ ಹುದ್ದೆ ಖಾಲಿಯಾಗುತ್ತಿದೆ. ಇದರಿಂದ ಹಿರಿಯ ನಾಗರಿಕರು ತಮ್ಮ ಕೆಲಸ ಕಾರ್ಯಗಳಿಗೆ ಅನಗತ್ಯ ಅಲೆದಾಟ ನಡೆಸುತ್ತಿದ್ದಾರೆ.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಅಧೀನದಲ್ಲಿ ಹಿರಿಯ ನಾಗರಿಕರ ಇಲಾಖೆಯೂ ಬರುತ್ತದೆ. ವಿಕಲಚೇತನರಿಗೆ ಸಹ ಇದೇ ಇಲಾಖೆ ಆಸರೆ. ಅದಾಗಿಯೂ ಸರ್ಕಾರ ಈ ಇಲಾಖೆಗೆ ಸಮರ್ಥ ಅಧಿಕಾರಿಗಳ ನೇಮಕಕ್ಕೆ ಆಸಕ್ತಿ ತೋರಿಲ್ಲ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಅಧಿಕಾರಿಯಾಗಿ ಲಲಿತಾ ಪಟಗಾರ್ ಎಂಬಾತರು ಈ ಇಲಾಖೆಯ ಅಧಿಕಾರವಹಿಸಿಕೊಂಡು ವರ್ಷದೊಳಗೆ ನಿವೃತ್ತರಾದರು. ಅದಾದ ಮೇಲೆ ಗಂಗಪ್ಪ ಎಂಬಾತರು ಆಗಮಿಸಿ ವರ್ಷದೊಳಗೆ ವರ್ಗಾವಣೆಯಾದರು. ಅದಾದ ನಂತರ ಸತೀಶ ನಾಯ್ಕ ಎಂಬಾತರು ಆಗಮಿಸಿದ್ದು, ಅವರು ವರ್ಷದೊಳಗೆ ನಿವೃತ್ತಿ ಹೊಂದಿದರು. ನಂತರ ಈ ಸ್ಥಾನಕ್ಕೆ ಶಿಲ್ಪಾ ದೊಡ್ಮನಿ ಎಂಬಾತರು ಆಗಮಿಸಿದ್ದು ಅವರನ್ನು ಸಹ ವರ್ಷದೊಳಗೆ ಸರ್ಕಾರ ವರ್ಗಾಯಿಸಿತು. ಪ್ರಸ್ತುತ ರಾಘವೇಂದ್ರ ಭಟ್ಟ ಎಂಬಾತರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಅಧಿಕಾರಿಯಾಗಿದ್ದು, ಅವರು ಬೇರೆ ಬೇರೆ ಇಲಾಖೆಯ ಮೂರು ಕಡೆ ಪ್ರಭಾರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.

ಅಂಕೋಲಾ ಸೇರಿ ಮೂರು ಕಡೆ ಪ್ರಭಾರಿಯಾಗಿರುವ ಕಾರಣ ರಾಘವೇಂದ್ರ ಭಟ್ಟ ಅವರು ಸಹ ಕಚೇರಿಯಲ್ಲಿ ಹಿರಿಯ ನಾಗರಿಕರಿಗೆ ಸಿಗುತ್ತಿಲ್ಲ. ಹೀಗಾಗಿ ಹಿರಿಯ ನಾಗರಿಕರು ಸಮಸ್ಯೆ ಹೇಳಿಕೊಳ್ಳಲು ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದು, ಸಮಸ್ಯೆಗೆ ಸ್ಪಂದಿಸುವವರೇ ಇಲ್ಲವಾಗಿದೆ. ಈ ಹಿನ್ನಲೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಪೂರ್ಣಾವಧಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಅಧಿಕಾರಿ ನೇಮಕಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜಿಲ್ಲಾಡಳಿತದ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಿಗೆ ಈ ಬಗ್ಗೆ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಹಿರಿಯ ನಾಗರಿಕ ಜೋನ್ ಬೇರೆಟ್ಟ್ ಹಾಗೂ ಈಶ್ವರ್ ನಾಯ್ಕ ಹಾಜರಿದ್ದು ಸಮಸ್ಯೆ ವಿವರಿಸಿದರು.

Advertisement. Scroll to continue reading.

ಕೇಂದ್ರದವರು ಈ ಬಗ್ಗೆ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Previous Post

ನಿನ್ನೆ ಮೊನ್ನೆಯವರೆಗೂ ಕಾನ್ಸ್ಟೇಬಲ್.. ಇದೀಗ ಪಿಎಸ್‌ಐ!

Next Post

ಮಕ್ಕಳ ಜೊತೆ ಕುಣಿದ ಶಿಕ್ಷಿಕಿ: ಸರ್ಕಾರಿ ಶಾಲೆ ಮಕ್ಕಳು ನಾವು!

Next Post

ಮಕ್ಕಳ ಜೊತೆ ಕುಣಿದ ಶಿಕ್ಷಿಕಿ: ಸರ್ಕಾರಿ ಶಾಲೆ ಮಕ್ಕಳು ನಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ