6
  • Latest

ಗ್ರಾ ಪಂ ಅಧ್ಯಕ್ಷ ಚುನಾವಣೆ: ಎನಗೂ ಆಣೆ.. ರಂಗ ನಿನಗೂ ಆಣೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Monday, August 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾ ಪಂ ಅಧ್ಯಕ್ಷ ಚುನಾವಣೆ: ಎನಗೂ ಆಣೆ.. ರಂಗ ನಿನಗೂ ಆಣೆ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಹಾರವಾಡ ಗ್ರಾ ಪಂ ಚುನಾವಣೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವಿಷಯವಾಗಿ ಗ್ರಾ ಪಂ ಸದಸ್ಯರು ಆಣೆ-ಪ್ರಮಾಣ ಮಾಡಿದ ವಿಡಿಯೋ ವೈರಲ್ ಆಗಿದೆ.

ದುರ್ಗಾದೇವಿ ಆಲಯಕ್ಕೆ ಬರುವ ಗ್ರಾ ಪಂ ಸದಸ್ಯರು ಅಧ್ಯಕ್ಷ ಆಕಾಂಕ್ಷಿ ಬಳಿ `ನಿಮಗೆ ಮತ ಹಾಕುವೆ’ ಎಂದು ದೇವರ ಮುಂದೆ ಆಣೆ ಮಾಡಿದ್ದಾರೆ. ದೇವಾಲಯದಲ್ಲಿ ಸರತಿ ಸಾಲಿನಲ್ಲಿ ಬಂದು ಆಣೆ-ಪ್ರಮಾಣ ಮಾಡುತ್ತಿರುವ ವಿಡಿಯೋ ಇದೀಗ ಹರಿದಾಡುತ್ತಿದೆ. ಕೆಲವರು ಈ ವಿಡಿಯೋ `ಮೊದಲ ಅವಧಿಗೆ ಸೇರಿದ್ದು’ ಎನ್ನುತ್ತಿದ್ದಾರೆ. ಇನ್ನೂ ಕೆಲವರು ಇದು `ಮೊನ್ನೆ ನಡೆದ ಘಟನೆ’ ಎನ್ನುತ್ತಿದ್ದಾರೆ. ಆದರೆ, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ಕೆಲವರು ಸದಸ್ಯರಿಂದ ಆಣೆ-ಪ್ರಮಾಣ ಮಾಡಿಸಿದಂತೂ ಸತ್ಯ!

ಅಕ್ಟೋಬರ್ 15ರಂದು ಹಾರವಾಡ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆಯ ನಿಮಿತ್ತ ಚುನಾವಣೆ ನಡೆದಿತ್ತು. ಮಹಿಳಾ ಅಭ್ಯರ್ಥಿಗೆ ಮೀಸಲಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಮೋಹಿನಿ ಏಕನಾಥ ಗೌಡ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮಲ್ಲಿಕಾ ಬಲೆಗಾರ ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಮೋಹಿನಿ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿಂದೆಯೂ ಮಲ್ಲಿಕಾ ಬಲೆಗಾರ ಬಿಜೆಪಿ ಬೆಂಬಲಿತರಾಗಿ ಸ್ಪರ್ಧೆಗೆ ಇಳಿದಿದ್ದರು. ಈಗ ಆಯ್ಕೆಯಾದ ಮೋಹಿನಿ ಗೌಡ ಅವರ ತಂಡದ ಸದಸ್ಯರೊಬ್ಬರು ಮಲ್ಲಿಕಾ ವಿರುದ್ಧ ಸ್ಪರ್ಧಿಸಿ ವಿಜೇತರಾಗಿದ್ದರು.

ShareSendTweetShare
Previous Post

ಕಾರವಾರದ ವ್ಯಕ್ತಿ ಶಿರಸಿಯಲ್ಲಿ ಆತ್ಮಹತ್ಯೆ!

Next Post

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

Next Post

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

ಜೋರು ಮಳೆ.. ವ್ಯಾಪಕ ಕೊಳೆ!

ಪತ್ನಿ ಹೆಸರಲ್ಲಿ ಭೂಮಿ ಖರೀದಿಸಿದ್ದ ಬೆಂಗಳೂರು ಉದ್ಯಮಿ: ದುಷ್ಕರ್ಮಿಯಿಂದ ಬೆಳೆ ನಾಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.