6
  • Latest

ರಸ್ತೆ ಸುರಕ್ಷತೆಗೆ ಅಧಿಕಾರಿಗಳ ಅಸಡ್ಡೆ: ಜಿಲ್ಲಾಧಿಕಾರಿಗೆ ದೂರು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಸುರಕ್ಷತೆಗೆ ಅಧಿಕಾರಿಗಳ ಅಸಡ್ಡೆ: ಜಿಲ್ಲಾಧಿಕಾರಿಗೆ ದೂರು

AchyutKumar by AchyutKumar
in ಸ್ಥಳೀಯ

ಕುಮಟಾ: ನಿತ್ಯ ಅಪಘಾತವಾಗುವ ಸ್ಥಳದ ಬಗ್ಗೆ ಮುನ್ನಚ್ಚರಿಕೆವಹಿಸಿ ನಾಮಫಲಕ ಅಳವಡಿಸುವಂತೆ ಮನವಿ ಮಾಡಿದರೂ ನಿರ್ಲಕ್ಷಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರವರು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ.

ADVERTISEMENT

ಅಘನಾಶಿನಿ ಬಳಿಯ ಜನತಾ ಪ್ಲಾಟಿನ ಶಾಲಾ ಆವರಣ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಕ್ರಮ ಜರುಗಿಸುವಂತೆ ಈ ಮೊದಲು ಊರಿನವರು ಅಧಿಕಾರಿಗಳ ಬಳಿ ಮನವಿ ಮಾಡಿದ್ದರು. `ರಸ್ತೆಯಲ್ಲಿ ಹಂಪ್ ಇಲ್ಲದ ಕಾರಣ ವಾಹನ ಸವಾರರು ವೇಗವಾಗಿ ಬರುತ್ತಿದ್ದು, ನಿತ್ಯ ಅಪಘಾತವಾಗುತ್ತಿದೆ. ಇಲ್ಲಿ ಶಾಲೆಯೂ ಇದ್ದು, ಶಾಲೆ ಇರುವ ಬಗ್ಗೆ ಸೂಚನಾ ಫಲಕ ಅಳವಡಿಸಬೇಕು’ ಎಂದು ಆಗ್ರಹಿಸಿದ್ದರು. ಆದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಮನವಿ ಆಲಿಸಿರಲಿಲ್ಲ.

ನಿತ್ಯ ಒಂದಿಲ್ಲೊoದು ಅಪಘಾತ ನಡೆಯುವುದರಿಂದ ಜನ ಮಾತ್ರವಲ್ಲದೇ ಜಾನುವಾರುಗಳಿಗೆ ಸಹ ಸಮಸ್ಯೆ ಆಗಿತ್ತು. ಈ ಬಗ್ಗೆ ವಿವರಿಸಿದರೂ ಕುಮಟಾ ಲೋಕೋಪಯೋಗಿ ಇಲಾಖೆ ಸ್ಪಂದಿಸಿರಲಿಲ್ಲ. ಹೀಗಾಗಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ. `ನಾಲ್ಕು ತಿಂಗಳ ಹಿಂದೆಯೇ ಸಮಸ್ಯೆ ಬಗ್ಗೆ ವಿವರಿಸಿದರೂ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ನಿಯಮಗಳ ಪ್ರಕಾರ ಹಿಂಬರಹವನ್ನು ಸಹ ನೀಡಿಲ್ಲ. ಕುಮಟಾ ಪಟ್ಟಣದಿಂದ 2ಕಿಮೀ ದೂರವಿರುವ ರಸ್ತೆಯಿಂದ ಅಘನಾಶಿನಿ ಕೊನೆಯವರೆಗೆ ತಲುಪಿ ತದಡಿ ಬಾರ್ಜಿನ ಮೂಲಕ ಗೋಕರ್ಣ ತಲುಪಬಹುದಾಗಿದ್ದು, ನಿತ್ಯ ಸಾವಿರಾರು ಜನ ಓಡಾಡುವ ರಸ್ತೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ’ ಎಂದವರು ದೂರಿದ್ದಾರೆ.

Advertisement. Scroll to continue reading.

`ಈ ಭಾಗದಲ್ಲಿ 40ಕ್ಕೂ ಅಧಿಕ ರೆಸಾರ್ಟಗಳಿವೆ. ನಾನಾ ಭಾಗದ ಜನ ಇಲ್ಲಿಗೆ ಬರುತ್ತಾರೆ. ಸರಿಯಾದ ಸೂಚನಾ ಫಲಕ ಇಲ್ಲದ ಕಾರಣ ಅವರು ಸಮಸ್ಯೆ ಅನುಭವಿಸುತ್ತಿದ್ದು, ಅಪಘಾತದಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹಿಂದಿನ ಸಿಪಿಐ ತಿಮ್ಮಪ್ಪ ನಾಯ್ಕ ಅವರಿಗೆ ಸಹ ಮನವರಿಕೆ ಮಾಡಲಾಗಿದ್ದು, ಅವರು ಯಾವುದೇ ಕ್ರಮ ಜರುಗಿಸಿರಲಿಲ್ಲ’ ಎಂದು ಆಗ್ನೇಲ್ ರೋಡ್ರಿಗ್ಸ ದೂರಿದ್ದಾರೆ. `ಈ ರಸ್ತೆಗೆ ಅಗತ್ಯವಿರುವ ಕಡೆ ನಾಮಫಲಕ ಅಳವಡಿಸದೇ ಇದ್ದಲ್ಲಿ ರಸ್ತೆ ತಡೆ ನಡೆಸಿ ಹೋರಾಟ ಮಾಡುವುದು ನಿಶ್ಚಿತ’ ಎಂದವರು ಎಚ್ಚರಿಸಿದ್ದಾರೆ.

Advertisement. Scroll to continue reading.

 

Previous Post

ಕಾನೂನು ಮಾಹಿತಿ | ನಾಯಿ ಕಚ್ಚಿದರೂ ಸಿಗುತ್ತೆ ಪರಿಹಾರ!

Next Post

ಸರ್ಕಾರಿ ಕಂಪ್ಯುಟರ್ ಮೇಲೆ ಚೀನಾ ದಾಳಿ: ಕಣ್ಣಿಗೆ ಕಾಣದ ವೈರಸ್ ವಿರುದ್ಧ ಅಧಿಕಾರಿ ದೂರು!

Next Post

ಸರ್ಕಾರಿ ಕಂಪ್ಯುಟರ್ ಮೇಲೆ ಚೀನಾ ದಾಳಿ: ಕಣ್ಣಿಗೆ ಕಾಣದ ವೈರಸ್ ವಿರುದ್ಧ ಅಧಿಕಾರಿ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ