6
  • Latest

ಜನರ ಜೊತೆ ಗುತ್ತಿಗೆದಾರನ ದಿಮಾಕು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜನರ ಜೊತೆ ಗುತ್ತಿಗೆದಾರನ ದಿಮಾಕು!

AchyutKumar by AchyutKumar
in ರಾಜ್ಯ

ಶಿರಸಿ: ಹುಬ್ಬಳ್ಳಿ ರಸ್ತೆ ಕಾಮಗಾರಿ ವೇಳೆಯಲ್ಲಿನ ಅವ್ಯವಸ್ಥೆ ಖಂಡಿಸಿ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ರಸ್ತೆ ನಿರ್ವಹಣೆ ಹೊಣೆ ಹೊತ್ತ ಗುತ್ತಿಗೆದಾರ ಉದ್ದಟತನ ಮೆರೆದಿದ್ದಾನೆ. ಇದರಿಂದ ಸಾರ್ವಜನಿಕರು ಆಕ್ರೋಶಗೊಂಡು ಆತನನ್ನು ತರಾಟೆಗೆ ತೆಗೆದುಕೊಂಡರು. ಜನರಿಗೆ ತೊಂದರೆ ಆಗದಂತೆ ಕೆಲಸ ನಿರ್ವಹಿಸುವಂತೆ ಸೂಚಿಸಿ, ಕಾಮಗಾರಿ ಸ್ಥಗಿತಗೊಳಿಸಿದರು.

ADVERTISEMENT

ಚಿಪಗಿ ಬಳಿ ಸೋಮವಾರ ದೊಡ್ಡ ಯಂತ್ರಗಳ ಮೂಲಕ ಗುತ್ತಿಗೆದಾರ ರಸ್ತೆ ನಿರ್ವಹಣೆ ಕಾಮಗಾರಿ ನಡೆಸಲು ಆಗಮಿಸಿದ್ದು, ಇದರಿಂದ ಉಂಟಾದ ದೂಳಿನಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು. ದೂಳು ಬಾರದಂತೆ ನೀರು ಸಿಂಪಡಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಿದರೂ ಅದಕ್ಕೆ ಗುತ್ತಿಗೆದಾರ ಸಿದ್ದವಿರಲಿಲ್ಲ. ರಸ್ತೆ ಹೊಂಡಕ್ಕೆ ಮಣ್ಣು ತುಂಬುವ ಬದಲು ಮುರು ಡಾಂಬರೀಕರಣ ನಡೆಸಬೇಕು ಎಂದು ಜನ ಪಟ್ಟು ಹಿಡಿದರು.

`ಪ್ಯಾಚ್‌ವರ್ಕ ಮಾಡಿದರೂ ಒಂದೇ ಮಳೆಗೆ ಅದು ಕಿತ್ತು ಹೋಗುತ್ತದೆ. ಹೊಂಡಕ್ಕೆ ಮಣ್ಣು ತುಂಬಿದರೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು’ ಎಂದು ಜನ ವಾದಿಸಿದರು. `ರಸ್ತೆ ಹೊಂಡದ ಕಾರಣ ಪದೇ ಪದೇ ಇಲ್ಲಿ ಅಪಘಾತವಾಗುತ್ತಿದೆ. ದೂಳಿನಿಂದ ಅನೇಕರು ಆರೋಗ್ಯ ಹಾಳು ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.

Advertisement. Scroll to continue reading.

ಕೆಲಸ ಮಾಡಲು ಬಂದ ಗುತ್ತಿಗೆದಾರ ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸದ ಕಾರಣ ಮಾತಿಗೆ ಮಾತು ಬೆಳೆಯಿತು. ಆಗ ಗುತ್ತಿಗೆದಾರ ಕೆಲಸ ನಿಲ್ಲಿಸುವ ಬೆದರಿಕೆ ಒಡ್ಡಿದ್ದು, ಜನರೇ ಕೆಲಸ ನಿಲ್ಲಿಸುವಂತೆ ತಾಕೀತು ಮಾಡಿದರು. `ರಸ್ತೆ ಕಾಮಗಾರಿ ಮೊದಲೇ ವಿಳಂಭವಾಗಿದೆ. ರಸ್ತೆ ಡಾಂಬರೀಕರಣ ಮಾಡುವುದಾದರೆ ಮಾತ್ರ ಕೆಲಸ ಮಾಡಿ’ ಎಂದು ನೆರೆದಿದ್ದವರು ಸೂಚಿಸಿದರು.

Advertisement. Scroll to continue reading.
Previous Post

ಬೈಕ್ ಓಡಿಸಿದ್ದು ಬಾಲಕ.. ದಂಡ ಪಾವತಿಸಿದ್ದು ಪಾಲಕ!

Next Post

ಆನೆ ಬಂತು ಆನೆ!

Next Post

ಆನೆ ಬಂತು ಆನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ