ಕುಮಟಾ: 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ಮಾನಸಿಕ ಅಸ್ವಸ್ಥರಿದ್ದಾರೆ. ಮಾನಸಿಕ ಅಸ್ವಸ್ಥತೆಯನ್ನು ದೂರ ಮಾಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕೇಂದ್ರಗಳಿರುವುದು ಬೆಂಗಳೂರು-ಬೆಳಗಾವಿಯಲ್ಲಿ ಮಾತ್ರ. ಹೀಗಾಗಿ `ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಇಂಥ ಕೇಂದ್ರ ಶುರು ಮಾಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.
`ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯರಿದ್ದಾರೆ. ಅವರಿಗೆ ಯೋಗ್ಯ ಚಿಕಿತ್ಸೆ ಹಾಗೂ ವಸತಿ ಸಿಗುತ್ತಿಲ್ಲ. ಮಾನಸಿಕ ಆಸ್ಪತ್ರೆಯಲ್ಲಿ ಗುಣಮುಖರಾದವರಿಗೆ ಆಪ್ತ ಸಮಾಲೋಚನೆ ಅಗತ್ಯವಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಮಾನಸ ಕೇಂದ್ರ ಸ್ಥಾಪಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಮನವಿ ಮಾಡಿದ್ದಾರೆ.
ಪ್ರಮುಖರಾದ ಸುಧಾಕರ ನಾಯ್ಕ, ನನ್ನೀ ಸಾಬ್ ಪರ್ವೀನ್, ಬಾನು ಲಕ್ಷ್ಮಿ ನಾಯ್ಕ, ಸ್ಟಿಪನ್ ನರೋನ ಸಹ ಇದಕ್ಕೆ ಸಮ್ಮತಿ ಸೂಚಿಸಿ ಪತ್ರಕ್ಕೆ ಸಹಿ ಹಾಕಿದರು.





