6
  • Latest

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತ: ಐಆರ್‌ಬಿ ವಿರುದ್ಧ ದಿಢೀರ್ ಪ್ರತಿಭಟನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತ: ಐಆರ್‌ಬಿ ವಿರುದ್ಧ ದಿಢೀರ್ ಪ್ರತಿಭಟನೆ

AchyutKumar by AchyutKumar
in ಸ್ಥಳೀಯ

ಕಾರವಾರ: ರಾಷ್ಟೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಅಮದಳ್ಳಿಯಲ್ಲಿ ಎರಡು ಕಾರುಗಳ ನಡುವೆ ಶುಕ್ರವಾರ ಸಂಜೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಜಖಂ ಆಗಿದ್ದು, ಐ ಆರ್ ಬಿ ಕಂಪನಿ ವಿರುದ್ಧ ಸಿಡಿದೆದ್ದ ಜನ ಹೆದ್ದಾರಿ ಮೇಲೆ ದಿಢೀರ್ ಪ್ರತಿಭಟನೆ ನಡೆಸಿದರು.

ADVERTISEMENT

ರಸ್ತೆ ಅಪಘಾತದಲ್ಲಿ ಜಖಂ ಆದ ಕಾರುಗಳನ್ನು ತೆರವು ಮಾಡಲು ಅವಕಾಶ ನೀಡದ ಜನ ಐ ಆರ್ ಬಿ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು. `ಸ್ಥಳದಲ್ಲಿ ಸೂಕ್ತ ಸೇತುವೆ ನಿರ್ಮಿಸದ ಕಾರಣ ಈ ಅಪಘಾತ ನಡೆದಿದೆ. ಅಪಘಾತಕ್ಕೆ ಕಾರಣವಾದ ಗುತ್ತಿಗೆ ಕಂಪನಿ ಐ ಆರ್ ಬಿ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆಯೂ ಅನೇಕರು ವಾಗ್ವಾದ ನಡೆಸಿದರು. ಪೊಲೀಸರು `ಹೆದ್ದಾರಿ ತಡೆ ಮಾಡಬೇಡಿ’ ಎಂದು ಮನವಿ ಮಾಡಿದರೂ ಅದಕ್ಕೆ ಪ್ರತಿಭಟನಾಕಾರರು ಒಪ್ಪಲಿಲ್ಲ. ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿದ ಕಂಪನಿಯವರು ಇಲ್ಲಿ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಲೇ ಇದ್ದರು.

Advertisement. Scroll to continue reading.

ಮುಕ್ಕಾಲು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆದ ಪರಿಣಾಮ ಹೆದ್ದಾರಿಯ ಎರಡು ಬದಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೊನೆಗೆ ಪೊಲೀಸರು ಪ್ರತಿಭಟನಕಾರರ ಮನವೊಲೈಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Advertisement. Scroll to continue reading.

ಕಳೆದ ಬಾರಿ ಅಪಘಾತವಾದಾಗ ಸಹ ಜನ ಪ್ರತಿಭಟಿಸಿದ್ದರು. ಆಗ ಒಂದು ತಿಂಗಳ ಒಳಗೆ ಸಮಸ್ಯೆ ಬಗೆಹರಿಸಿಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ನಂತರ ಯಾರೂ ಕ್ರಮ ಜರುಗಿಸಿರಲಿಲ್ಲ. ಇಲ್ಲಿನ ಸೇತುವೆ ನಡುವೆ ನೀರು ಸರಬರಾಜು ಘಟಕದ ವಾಲ್ ಬಂದಿದ್ದು, ರಸ್ತೆ ಮಾಡುವ ಮೊದಲು ಅದರ ಸ್ಥಳ ಬದಲಾವಣೆ ಮಾಡಿಲ್ಲ. ವಾಹನ ಸಂಚರಿಸುವಾಗ ದಿಢೀರ್ ಆಗಿ ವಾಲ್ ಎದುರಾಗುವುದರಿಂದ ವಾಹನವೂ ಚಾಲಕರ ನಿಯಂತ್ರಣ ತಪ್ಪಿ ಪದೇ ಪದೇ ಅಪಘಾತವಾಗುತ್ತಿದೆ.

ಅಪಘಾತ ಹಾಗೂ ಪ್ರತಿಭಟನೆಯ ವಿಡಿಯೋ ಇಲ್ಲಿ ನೋಡಿ..

 

Previous Post

ಶಾಸಕರಿಗೆ ಇಲ್ಲ ಅಧಿಕಾರದ ವ್ಯಾಮೋಹ: ಬಿಜೆಪಿ ಶಾಸಕರಿಗೆ ಬಿಜೆಪಿಯೇ ಶತ್ರು!

Next Post

ಸರಣಿ ಅಪಘಾತ: ಐದು ಆಸ್ಪತ್ರೆ ಸುತ್ತಿದರೂ ಬದುಕದ ಬಸ್ ಚಾಲಕ!

Next Post

ಸರಣಿ ಅಪಘಾತ: ಐದು ಆಸ್ಪತ್ರೆ ಸುತ್ತಿದರೂ ಬದುಕದ ಬಸ್ ಚಾಲಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ