6
  • Latest
Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

ದತ್ತ ಜಯಂತಿ | ಸುಂದರ ಪರಿಸರದಲ್ಲಿ ಭವ್ಯ ಮಂದಿರ: ಲೋಕಾರ್ಪಣೆಗೆ ದಿನಗಣನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದತ್ತ ಜಯಂತಿ | ಸುಂದರ ಪರಿಸರದಲ್ಲಿ ಭವ್ಯ ಮಂದಿರ: ಲೋಕಾರ್ಪಣೆಗೆ ದಿನಗಣನೆ!

AchyutKumar by AchyutKumar
November 19, 2024
in ಸ್ಥಳೀಯ
ದತ್ತ ಮಂದಿರ

ದತ್ತ ಮಂದಿರ

advt advt advt
ADVERTISEMENT

ಯಲ್ಲಾಪುರ: ನಾಯ್ಕನಕೆರೆ ಪರಿಸರದಲ್ಲಿ ನಿರ್ಮಾಣವಾಗುತ್ತಿರುವ ದತ್ತಮಂದಿರ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಡಿಸೆಂಬರ್ 14ರ ದತ್ತ ಜಯಂತಿ ದಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ಈ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಡಿಸೆಂಬರ್ 13ರಿಂದ 15ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗರ್ಭಗುಡಿಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ. ನವೆಂಬರ 27ರಿಂದ ಯಲ್ಲಾಪುರ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರಥಯಾತ್ರೆ ಆಯೋಜಿಸಲಾಗಿದೆ. ತಾಲೂಕಿನ ವಿವಿಧ ದೇವಸ್ಥಾನಗಳ ತೀರ್ಥ ಸಂಗ್ರಹವೂ ನಡೆಯಲಿದೆ. ಈಗಾಗಲೇ ದ್ವಾದಶ ಜ್ಯೋತಿರ್ಲಿಂಗಗಳ ತೀರ್ಥವನ್ನು ತರಲಾಗಿದ್ದು ವಿವಿಧ ದೇವಾಲಯಗಳ ತೀರ್ಥವನ್ನು ದತ್ತಗುರುವಿನ ನೂತನ ಮೂರ್ತಿ ಪ್ರತಿಷ್ಠಾಪನೆಗೆ ಬಳಸಲಾಗುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಶ್ರೀ ದತ್ತಗುರುವಿನ ರಥಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡುವದರ ಜೊತೆ ಅಕ್ಕಿ-ಕಾಯಿ-ಬೆಲ್ಲ-ಬೇಳೆಗಳನ್ನು ಸಹ ನೀಡಲು ಅವಕಾಶವಿದೆ. ಲೋಕಾರ್ಪಣೆಯ ಮೂರೂ ದಿವಸ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳ ಜೊತೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ವಿವಿಧ ಸಮಾಜದ 12 ಉಪಸಮಿತಿಗಳು ಕೆಲಸ ನಿರ್ವಹಿಸುತ್ತಿವೆ.

Advertisement. Scroll to continue reading.

ದತ್ತ ಮಂದಿರ ಲೋಕಾರ್ಪಣಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಶಿವರಾಮ ಹೆಬ್ಬಾರ್ ಮಂಗಳವಾರ ಕ್ಷೇತ್ರಕ್ಕೆ ಭೇಟಿ ನೀಡಿ ಕೆಲಸ ಕಾರ್ಯಗಳ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಅವರು `ರಾಜ್ಯದಲ್ಲೇ ಈ ಮಂದಿರ ಹೆಸರುಗಳಿಸುವುದರಲ್ಲಿ ಸಂಶಯವಿಲ್ಲ. ದತ್ತನ ಸನ್ನಿಧಾನಕ್ಕಾಗಿ ಭಕ್ತರು ಗಾಣಗಾಪುರಕ್ಕೆ ತೆರಳುತ್ತಿದ್ದರು. ಮುಂದಿನ ದಿನಗಳಲ್ಲಿ ಗಾಣಗಾಪುರದ ಜನರೇ ಈ ಮಂದಿರಕ್ಕೆ ಭೇಟಿ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ’ ಎಂದರು.

ನಿರ್ಮಾಣ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಲೋಕಾರ್ಪಣಾ ಸಮಿತಿಯ ಅಧ್ಯಕ್ಷ ಪ್ರಮೋದ ಹೆಗಡೆ, ನಿರ್ಮಾಣ ಹಾಗೂ ಲೋಕಾರ್ಪಣಾ ಸಮಿತಿಯ ಪ್ರಮುಖರಾದ ಶ್ರೀರಂಗ ಕಟ್ಟಿ, ಪ್ರಮುಖರಾದ ಮಹೇಶ ಚಿಟ್ನಳ್ಳಿ, ಎಸ್.ವಿ.ಯಾಜಿ, ಶಾಂತಾರಾಮ ಹೆಗಡೆ, ವೇಣುಗೋಪಾಲ ಮದ್ಗುಣಿ, ನಾಗೇಶ ಯಲ್ಲಾಪುರಕರ್, ಮುರಳಿ ಹೆಗಡೆ, ಸಿ.ಜಿ.ಹೆಗಡೆ, ಮಹೇಶ ಗೌಳಿ, ನಾಗರಾಜ ಮದ್ಗುಣಿ, ಪ್ರಸಾದ ಹೆಗಡೆ, ರಮೇಶ ಹೆಗಡೆ, ನಾರಾಯಣ ನಾಯಕ, ಕೆ.ಟಿ.ಭಟ್ಟ, ಶಿವಾನಂದ ಹೆಗಡೆ ಇತರರಿದ್ದರು.

ShareSendTweetShare
ADVERTISEMENT
Previous Post

ಮಣಿಪಾಲ್’ಗೆ ಹೋದರೂ ಬದುಕದ ಮೀನುಗಾರ

Next Post

ಹೊಲಿಗೆ ಶಿಬಿರಕ್ಕೆ ಚಾಲನೆ: ಮಹಿಳಾ ಸ್ವಾವಲಂಬನೆಗೆ ರೋಟರಿ ಗವರ್ನರ್ ಕರೆ

Next Post

ಹೊಲಿಗೆ ಶಿಬಿರಕ್ಕೆ ಚಾಲನೆ: ಮಹಿಳಾ ಸ್ವಾವಲಂಬನೆಗೆ ರೋಟರಿ ಗವರ್ನರ್ ಕರೆ

ಮದ್ಯದ ದಾಸ | 25ರ ವಯಸ್ಸಿಗೆ ಮುಗಿದ ಆಯಸ್ಸು!

ಪೂಜಾರಿಗೆ ಸಿಗದ ತಂಗಿಮನೆ ತುತ್ತಿನ ಭಾಗ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.