ಕುಮಟಾ: ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿರುವ ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ವಿಭಾಗದಲ್ಲಿ ಸಹ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ.
ಸರಸ್ವತಿ ಪಿಯು ಕಾಲೇಜಿಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡುವ ಮೂಲಕ ಇಲ್ಲಿನ ಮಕ್ಕಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿ ವಿಭಾಗದ ಆಶು ಭಾಷಣದಲ್ಲಿ ಸುದರ್ಶನ ಹೆಗಡೆ ಪ್ರಥಮ ಸ್ಥಾನ, ಏಕಪಾತ್ರಾಭಿನಯದಲ್ಲಿ ದಿಶಾ ಹೆಗಡೆ ದ್ವಿತೀಯ ಸ್ಥಾನ, ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀಶ ಮತ್ತು ವಿಜೇತ ದೇಸಾಯಿ ತೃತೀಯ ಸ್ಥಾನ ಪಡೆದರು. ದ್ವಿತೀಯ ಪಿಯುಸಿ ಆಶುಭಾಷಣ ಸ್ಪರ್ಧೆಯಲ್ಲಿ ತೇಜಾ ಅವಧಾನಿ ದ್ವಿತೀಯ ಹಾಗೂ ಮಾನ್ಯಾ ಹೆಗಡೆ ತೃತೀಯ ಸ್ಥಾನ ಪಡೆದಿದ್ದಾರೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಈ ಕಾಲೇಜಿನ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಜಿ ಜಿ ಹೆಗಡೆ, ಪ್ರಾಚಾರ್ಯ ಡಿ. ಎನ್ ಭಟ್ಟ ಸಂತಸ ವ್ಯಕ್ತಪಡಿಸಿದರು.




