ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಸೀಬರ್ಡ ನೌಕಾನೆಲೆ ಸಂತರಸ್ತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಲು ಒತ್ತಾಯಿಸಿದರು.
ನವದೆಹಲಿಗೆ ತೆರಳಿದ ಕಾಗೇರಿ ಕಾರವಾರದ ಸೀಬರ್ಡ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವರಿಗೆ ಮನವರಿಕೆ ಮಾಡಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಅವರು ವಿಸ್ತಾರವಾಗಿ ವಿವರಿಸಿದರು. `ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ನಾನಾ ಸಮಸ್ಯೆಗಳ ಕಾರಣ ನಿಧಾನವಾಗುತ್ತಿರುವ ಕಡತಗಳನ್ನು ವಿಲೇವಾರಿ ನಡೆಸಬೇಕು’ ಎಂದು ಆಗ್ರಹಿಸಿದರು.
`ನೌಕಾನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಸಿ ಬರ್ಡ್ ನೌಕನೆಲೆಯಲ್ಲಿ ನಡೆಯುವ ಉದ್ಯೋಗ ಪರೀಕ್ಷಾ ಕೇಂದ್ರವನ್ನು ಕಾರವಾರದಲ್ಲಿಯೇ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಈ ಎಲ್ಲಾ ಸಮಸ್ಯೆ ಬಗೆಹರಿಸುವ `ಚಿಂತನೆ’ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ಭರವಸೆ ನೀಡಿದರು.




