ಹಳಿಯಾಳ: ಮುಂಡವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ಪ್ರಕರಣ ಮುಖ್ಯಮಂತ್ರಿ ಕಚೇರಿ ತಲುಪಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ಸೂಚನೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಶಾಲೆಗೆ ಕೆಇಬಿ ಅನುಮತಿ ಇಲ್ಲದೆ ವಿದ್ಯುತ್ ಸಂಪರ್ಕ ಪಡೆದಿರುವುದು ಖಚಿತವಾಗಿದೆ.
ಈ ತಂತಿ ಹಲವು ಕಡೆ ತುಂಡಾಗಿದ್ದು, ಗಂ ಟೇಪ್ ಹಚ್ಚಿ ಅಂಟಿಸಲಾಗಿತ್ತು. ಕೋತಿಗಳು ಅದರ ಮೇಲೆ ನಡೆದಾಡಿದ್ದರಿಂದ ತಂತಿ ನೆಲಕ್ಕೆ ಬಿದ್ದು ವಿದ್ಯುತ್ ಪ್ರವಹಿಸಿದ ಬಗ್ಗೆ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಇದನ್ನು ಓದಿ: ಅಕ್ರಮ ವಿದ್ಯುತ್ ಸಂಪರ್ಕ ಬಾಲಕಿ ಸಾವು
ಈ ವಿಷಯದಲ್ಲಿ ಶಾಲಾ ಮುಖ್ಯ ಶಿಕ್ಷಕ ನಿರ್ಲಕ್ಷ ಎದ್ದು ತೋರಿದ ಹಿನ್ನಲೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮುಖ್ಯ ಶಿಕ್ಷಕರ ಅಮಾನತಿಗೂ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ.




