6
  • Latest

ಶಾಸಕ ಹೆಬ್ಬಾರ್’ಗೆ ಹವ್ಯಕ ಸಂಘದ ಶ್ರೀರಕ್ಷೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಾಸಕ ಹೆಬ್ಬಾರ್’ಗೆ ಹವ್ಯಕ ಸಂಘದ ಶ್ರೀರಕ್ಷೆ!

AchyutKumar by AchyutKumar
in ರಾಜಕೀಯ

ಯಲ್ಲಾಪುರ: `ಹವ್ಯಕ ಸಮುದಾಯದ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಪ ಪಂ ಸದಸ್ಯ ಸೋಮೇಶ್ವರ ನಾಯ್ಕ ನಿಂದಿಸಿದ್ದು, ಸೋಮೇಶ್ವರ ನಾಯ್ಕರನ್ನು ಗಡಿಪಾರು ಮಾಡಬೇಕು’ ಎಂದು ತಾಲೂಕಾ ಹವ್ಯಕರ ಸಂಘ ಆಗ್ರಹಿಸಿದೆ. ತಾಲೂಕಾ ಹವ್ಯಕ ಸಂಘದ ಅಧ್ಯಕ್ಷ ಡಿ ಶಂಕರ ಭಟ್ಟ ನೇತ್ರತ್ವದಲ್ಲಿ ಸಂಘಟನೆ ಸದಸ್ಯರು ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಪತ್ರ ರವಾನಿಸಿದ್ದಾರೆ.

ಈ ಪತ್ರದ ಪ್ರತಿಯನ್ನು ಗೃಹಸಚಿವರು, ಜಿಲ್ಲಾಧಿಕಾರಿ, ಲೋಕಾಯುಕ್ತರು, ಪೊಲೀಸ್ ಅಧಿಕಾರಿಗಳು, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ಸೇನೆ ಹಾಗೂ ವಿವಿಧ ಸಂಘಟನೆಯವರಿಗೂ ರವಾನಿಸಿರುವುದಾಗಿ ಹವ್ಯಕ ಸಂಘದವರು ಹೇಳಿಕೊಂಡಿದ್ದಾರೆ. `ಯಲ್ಲಾಪುರ ಪಟ್ಟಣ ಪಂಚಾಯತದ ರವೀಂದ್ರ ನಗರ ಪ್ರತಿನಿಧಿಸುವ ಸೋಮೇಶ್ವರ ನಾಯ್ಕ ವಾಟ್ಸಪ್ ಸ್ಟೇಟಸ್ಸಿನಲ್ಲಿ ಶಿವರಾಮ ಹೆಬ್ಬಾರ್ ಅವರ ವಿರುದ್ಧ ಅಸಂವಿಧಾನಾತ್ಮಕ ಪದ ಪ್ರಯೋಗ ನಡೆಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದಿರುವ ಅವರ ನಡೆಯನ್ನು ಖಂಡಿಸುತ್ತೇವೆ’ ಎಂದು ಈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

`ಸೋಮೇಶ್ವರ ನಾಯ್ಕ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗಬಾರದು. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಹವ್ಯಕರನ್ನು ನಿಂದಿಸಿ ಮಾನಸಿಕ ಹಿಂಸೆ ನೀಡುವವರ ವಿರುದ್ಧ ಕ್ರಮಜರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದು ನಿಶ್ಚಿತ’ ಎಂದು ಈ ಪತ್ರದಲ್ಲಿ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿ ಮೂಲಕ ಈ ಪತ್ರವನ್ನು ರವಾನಿಸಿದ್ದಾರೆ. ಪ್ರಮುಖರಾದ ಮುರುಳಿ ಹೆಗಡೆ, ಗೋಪಾಲಕೃಷ್ಣ ಬಟ್ಟ ಹಂಡ್ರಮನೆ, ಪ್ರಶಾಂತ ಹೆಗಡೆ, ಗಣಪತಿ ಮುದ್ದೇಪಾಲ್, ಎಂ ಆರ್ ಹೆಗಡೆ, ಎನ್ ಕೆ ಭಟ್ಟ, ನರಸಿಂಹ ಭಟ್ಟ ಬೋಳಪಾಲ್ ಇತರರು ಇದ್ದರು.

 

ShareSendTweetShare
Previous Post

ಮೊದಲು ತಲೆನೋವು.. ನಂತರ ಅಸ್ವಸ್ಥ.. ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮಹಿಳೆ ಸಾವು!

Next Post

ಶಿಖಾರಿಗೆ ಹೋದವರಿಗೆ ಸೆರೆಮನೆ ವಾಸ!

Next Post

ಶಿಖಾರಿಗೆ ಹೋದವರಿಗೆ ಸೆರೆಮನೆ ವಾಸ!

ಸಹೋದರರ ಕಾಳಗ | ತಮ್ಮ ಕಾಲು ಕಡಿದ.. ಅಣ್ಣ ತಲೆ ಉರುಳಿಸಿದ: ಶವದ ಮುಂದೆ ಬೀಡಿ ಸೇದುತ್ತಿದ್ದ ಕೊಲೆಗಾರ!

ಕಾಸು ಕೊಟ್ಟರೂ ಮುಂದೆ ಚಲಿಸದ ಬೆಂಗಳೂರು ಬಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.