ಶಿರಸಿ: `ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತವಾಗಿ ಸರಕಾರಿ ಜಮೀನು ಸಾಗುವಳಿ ಮಾಡಿಕೊಂಡಿರುವ 620 ರೈತರಿದ್ದು, ಒಂದು ತಿಂಗಳ ಒಳಗಾಗಿ ಅವರಿಗೆ ಹಕ್ಕು ಪತ್ರ ವಿತರಿಸುತ್ತೇವೆ. ನೂರಾರು ವರ್ಷಗಳಿಂದ ವಾಸವಿದ್ದರೂ ದಾಖಲೆಗಳಿಲ್ಲದ ಗ್ರಾಮಗಳನ್ನು ಕಂದಾಯ ವ್ಯಾಪ್ತಿಗೆ ಸೇರಿಸಿ, ಪ್ರತಿಯೊಬ್ಬರಿಗೂ ಹಕ್ಕು ಕೊಡುತ್ತೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಶಿರಸಿಯಲ್ಲಿ ಮಾತನಾಡಿದ ಅವರು `ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ 8 ಹಾಗೂ ಹಳಿಯಾಳದಲ್ಲಿ 8 ಗ್ರಾಮಗಳಿಗೆ ಸೂಕ್ತ ದಾಖಲೆಗಳಿಲ್ಲ. ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತಿದ್ದೇವೆ. ಅಲ್ಲಿ ವಾಸಿಸುವ 1125 ಕುಟುಂಬಕ್ಕೂ ವರದ ಒಳಗೆ ಹಕ್ಕು ಪತ್ರ ನೀಡುತ್ತೇವೆ. ಬಾಕಿ 300 ಕುಟುಂಬಗಳು ಕನಿಷ್ಠ ಶುಲ್ಕ ತುಂಬಬೇಕಿದ್ದು ಅವರಿಗೂ ಹಕ್ಕು ಸಿಗಲಿದೆ’ ಎಂದರು.
`ಮುAದಿನ ಆರು ತಿಂಗಳ ಒಳಗೆ ಲಕ್ಷಾಂತರ ಸಂಖ್ಯೆಯ ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲಾಗುತ್ತದೆ. ಬಗರುಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿAದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಅರಣ್ಯ ಹೊರತುಪಡಿಸಿ ಸುಮಾರು ವಷÀðಗಳಿಂದ ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಊರಾಗಿ ಬೆಳೆದು ದಾಖಲೆಯಲ್ಲಿ ಗ್ರಾಮವಾಗದ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ’ ಎಂದು ಘೋಷಿಸಿದರು. `ತ್ರಿಶಂಕು ಪರಿಸ್ಥಿತಿಯಲ್ಲಿರುವ 3800 ತಾಂಡಾ, ಹಟ್ಟಿ ವಸತಿ ಪ್ರದೇಶಗಳಲ್ಲಿ ವಾಸಿಸುವ 1.5 ಲಕ್ಷ ಕುಟುಂಬಗಳಿಗೆ ಶಾಶ್ವತ ಹಕ್ಕುಪತ್ರ ನೀಡುತ್ತೇವೆ’ ಎಂದರು.
ಅರಣ್ಯ ಹಕ್ಕು ಅರ್ಜಿ ವಿಲೇವಾರಿ:
`ಅರಣ್ಯ ಹಕ್ಕು ಅರ್ಜಿಗಳು ದೊಡ್ಡ ಸಂಖ್ಯೆಯಲ್ಲಿ ವಿಲೇವಾರಿ ಆಗಬೇಕಾಗಿದೆ. ಜಿಪಂ, ತಾಪಂ ಸದಸ್ಯರು ಇಲ್ಲ ಎಂದು ಅರಣ್ಯ ಹಕ್ಕು ಸಮಿತಿ ಸ್ಥಗಿತವಾಗಬಾರದು ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದ್ದರಿಂದ ಸ್ಥಳಿಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳಿಲ್ಲದ್ದಿದ್ದರೂ ಆಯಾ ಆಡಳಿತಾಧಿಕಾರಿಗಳೇ ಇದರ ಸದಸ್ಯರನ್ನಾಗಿ ಮಾಡಿಕೊಂಡು ಅರಣ್ಯ ಹಕ್ಕು ಸಮಿತಿ ಕೆಲಸ ಮಾಡಬೇಕು’ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸಹಾಯಕ ಆಯುಕ್ತೆ ಕೆ ವಿ ಕಾವ್ಯಾರಾಣಿ ಇದ್ದರು.




