ಭಟ್ಕಳ: ಮೂರು ದಶಕಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ರಾಧಾಕೃಷ್ಣ ಭಟ್ಟ ಅವರ ಸೇವೆ ಗುರುತಿಸಿದ ಅಖಿಲ ಹವ್ಯಕ ಮಹಾಸಭಾ ಡಿ 8ರಂದು ಅವರಿಗೆ ಸನ್ಮಾನಿಸುತ್ತಿದೆ.
ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗ `ಪ್ರತಿಬಿಂಬ-ಸನ್ಮಾನ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಈ ಸನ್ಮಾನ ನಡೆಯಲಿದೆ. 1989ರಲ್ಲಿ ಪತ್ರಕರ್ತರಾಗಿ ಬರೆಯಲು ಶುರು ಮಾಡಿದ ರಾಧಾಕೃಷ್ಣ ಭಟ್ಟ ಅವರು ಉದಯವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಭಟ್ಕಳ ಪ್ರತಿನಿಧಿಯಾಗಿದ್ದಾರೆ. 1993ರಲ್ಲಿ ಭಟ್ಕಳ ತಾಲೂಕಾ ಪತ್ರಕರ್ತರ ಸಂಘ ಸ್ಥಾಪಿಸಿ ಅದರ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
2018ರಿಂದ 2022ರವರೆಗೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಮಾಜದಲ್ಲಿನ ಆಗು-ಹೋಗುಗಳ ಜೊತೆಗೆ ಅಭಿವೃದ್ಧಿ ಪರ ಪತ್ರಿಕೋದ್ಯಮ ನಡೆಸಿದವರಲ್ಲಿ ರಾಧಾಕೃಷ್ಣ ಭಟ್ಟ ಅವರು ಮುಂಚೂಣಿಯಲ್ಲಿದ್ದಾರೆ. ಅವರ ಸೇವೆ ಗುರುತಿಸಿ ಈಗಾಗಲೇ ಹತ್ತು ಹಲವು ಪುರಸ್ಕಾರಗಳು ದೊರೆತಿವೆ.




