6
  • Latest

ಜಯ ಕರ್ನಾಟಕ | ಅಕ್ರಮ ಕಟ್ಟಡದ ವಿರುದ್ಧ ಜನಪರ ವೇದಿಕೆ ಹೋರಾಟ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಯ ಕರ್ನಾಟಕ | ಅಕ್ರಮ ಕಟ್ಟಡದ ವಿರುದ್ಧ ಜನಪರ ವೇದಿಕೆ ಹೋರಾಟ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ನಗರದಲ್ಲಿನ ಅಕ್ರಮ ಕಟ್ಟಡಗಳಿಂದ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ವಿರುದ್ಧ ಜಯ ಕರ್ನಾಟಕ ಜನಪರ ವೇದಿಕೆ ಸಿಡಿದೆದ್ದಿದೆ. ಎರಡು ಬಾರಿ ಎಚ್ಚರಿಕೆ ನೀಡಿದರೂ ಕ್ರಮ ಜರುಗಿಸದ ಕಾರಣ ಕಾನೂನು ಹೋರಾಟ ನಡೆಸುವ ಬಗ್ಗೆ ಇನ್ನೊಮ್ಮೆ ಎಚ್ಚರಿಕೆ ನೀಡಿದೆ.

`ಕಟ್ಟಡ ದುರಸ್ಥಿ ನೆಪದಲ್ಲಿ ನಗರಸಭೆ ಪರವಾನಿಗೆ ಪಡೆದು ಅಕ್ರಮವಾಗಿ ಹೊಸ ಕಟ್ಟಡ ನಿರ್ಮಿಸುವವರ ಸಂಖ್ಯೆ ಹೆಚ್ಚಾಗಿದೆ. ಪಾದಚಾರಿಗಳು ಓಡಾಡುವ ಮಾರ್ಗ, ಚರಂಡಿ ಅತಿಕ್ರಮಿಸಿ ಕಟ್ಟಡ ನಿರ್ಮಿಸುತ್ತಿದ್ದು, ಇದರಿಂದ ಅನೇಕರಿಗೆ ಸಮಸ್ಯೆಯಾಗುತ್ತಿದೆ. ಆಯುಷ್ ಆಸ್ಪತ್ರೆ ಮುಂದಿನ ಪಿಕಳೆ ರಸ್ತೆ ತಿರುವಿನ ಸರ್ವೇ ನಂ 607ರಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರುವುದರಿಂದ ಅಪಘಾತದ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಎರಡು ಬಾರಿ ದೂರು ನೀಡಿದರೂ ಕ್ರಮವಾಗಿಲ್ಲ’ ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ ಅರ್ಗೇಕರ್ ಅಸಮಧಾನ ವ್ಯಕ್ತಪಡಿಸಿದರು.

ADVERTISEMENT
ADVERTISEMENT

`ಈ ಹಿಂದೆ ಪತ್ರ ನೀಡಿದಾಗ 10 ದಿನದ ಒಳಗೆ ಅಕ್ರಮ ಕಟ್ಟಡ ತೆರವು ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. ಅದಾದ ನಂತರ ಕಟ್ಟಡ ದುರಸ್ಥಿಗೆ ಅನುಮತಿ ಪಡೆದ ಬಗ್ಗೆ ತಿಳಿಸಲಾಗಿದ್ದು, ಈ ಹಿಂದೆ ಕಟ್ಟಡವೇ ಇಲ್ಲದ ಜಾಗದಲ್ಲಿ ಕಟ್ಟಡ ದುರಸ್ಥಿ ಹೆಸರಿನಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ತಿರುವಿನಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವಾಗುತ್ತಿರುವುದರಿಂದ ದೊಡ್ಡ ವಾಹನಗಳ ಓಡಾಟಕ್ಕೆ ಅಡಚಣೆಯಾಗಿದೆ. ಅಪಾಯದ ಸಾಧ್ಯತೆಯೂ ಹೆಚ್ಚಿದೆ’ ಎಂದು ಸಂಘಟನೆಯ ರೋಷನ್ ಹರಿಕಂತ್ರ ಹಾಗೂ ಸುದೇಶ ನಾಯ್ಕ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರ ಬಳಿ ದೂರಿದರು.

Advertisement. Scroll to continue reading.
Advertisement. Scroll to continue reading.

`ಈ ಕಟ್ಟಡ ಕಾರವಾರ ಕೋಡಿಭಾಗಕ್ಕೆ ಹೋಗುವ ಮುಖ್ಯ ರಸ್ತೆಗೆ ಹೊಂದಿಕೊoಡಿದೆ. ಜನ ಸಾಮಾನ್ಯರು ಸಣ್ಣ ಮನೆ ನಿರ್ಮಿಸಿದರೂ ತೊಂದರೆ ಕೊಡುವ ಅಧಿಕಾರಿಗಳು ದೊಡ್ಡ ಕಟ್ಟಡದವರು ಅತಿಕ್ರಮಣ ಮಾಡಿದರೂ ಅವರ ತಂಟೆಗೆ ಹೋಗುತ್ತಿಲ್ಲ. ಸರ್ಕಾರಿ ನಿಯಮಗಳನ್ನು ಪಾಲಿಸದವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಪ್ರಮುಖರಾದ ಸುನಿಲ್ ತಾಂಡೇಲ್, ನಂದೇಶ್ ಮಾಜಾಳಿಕರ್ ಹಾಗೂ ದಿಲೀಪ್ ನಾಗೇಕರ್ ವಿವರಿಸಿದರು.

`ಅಕ್ರಮ ನಡೆಸಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು. ಅಕ್ರಮ ಕಟ್ಟಡವನ್ನು ತೆರವು ಮಾಡಬೇಕು. ಇಲ್ಲವಾದಲ್ಲಿ ನಾವೆಲ್ಲರೂ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರಸಭೆ ಎದುರು ಪ್ರತಿಭಟಿಸುವುದು ಅನಿವಾರ್ಯ’ ಎಂದು ಸಂಘಟನೆ ತಾಲೂಕು ಅಧ್ಯಕ್ಷ ಮೋಹನ ಉಳ್ವೇಕರ್, ಪದಾಧಿಕಾರಿಗಳಾದ ವಿನಯ್ ನಾಯ್ಕ, ಕಾರ್ತಿಕ್ ಹರಿಕಂತ್ರ, ಗಜಾನನ ಗುನಗಿ, ಶ್ರೀನಿವಾಸ್ ಹರಿಕಂತ್ರ ಎಚ್ಚರಿಸಿದರು.

ಈ ಬಗ್ಗೆ ನಗರಸಭೆ ಪೌರಾಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಸಲ್ಲಿಸಿದರು.

ShareSendTweetShare
ADVERTISEMENT
Previous Post

ಪುಂಡ ಪೋಕರಿಗಳ ಮೇಲೆ ಪೊಲೀಸರ ನಿಗಾ: ದಂಡ ತುಂಬುವ ಬದಲು ಇನ್ಸುರೆನ್ಸ ಮಾಡಿಸಿ!

Next Post

ಕೈಗಾ | ನಿವೃತ್ತ ಸಂಪರ್ಕಾಧಿಕಾರಿಗೆ ದೆಹಲಿಯಲ್ಲಿ ಗೌರವ!

Next Post

ಕೈಗಾ | ನಿವೃತ್ತ ಸಂಪರ್ಕಾಧಿಕಾರಿಗೆ ದೆಹಲಿಯಲ್ಲಿ ಗೌರವ!

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.