ಭಟ್ಕಳ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವ ಮೇಲೆ ನಡೆದ ದೌರ್ಜನ್ಯ ಖಂಡಿಸಿ ವಿವಿಧ ಹಿಂದೂ ಸಂಘಟನೆಯವರು ಭಟ್ಕಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 8 ಸಾವಿರಕ್ಕೂ ಅಧಿಕ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು.
ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆಗೆ ಕರೆ ನೀಡಿದ್ದು ಚನ್ನಪಟ್ಟಣ ಹನುಮಂತ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಶುರುವಾಯಿತು. ರಿಕ್ಷಾ ಚಾಲಕರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೈದಾನ ಪ್ರತಿಭಟನಾಕಾರರು ಸಭೆ ಸೇರಿದರು. ಹಿಂದೂ ಸಮುದಾಯದವರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಎಲ್ಲರೂ ಒಕ್ಕೂರಲಿನಿಂದ ಖಂಡಿಸಿದರು.
ಮAಗಳೂರಿನ ವಜ್ರದೇಹಿ ಮಠದ ರಾಜಶೇಕರಾನಂದ ಸ್ವಾಮೀಜಿ `ಹಿಂದೂ ಸಮುದಾಯದವರು ಒಗ್ಗಟ್ಟಾಗಿರಬೇಕು. ಇಲ್ಲವಾದಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಇಲ್ಲಿನವರಿಗೂ ಬರಲಿದೆ’ ಎಂದು ಎಚ್ಚರಿಸಿದರು. ಹಿಂದೂ ಜಾಗರಣ ವೇಧಿಕೆ ದಕ್ಷಿಣ ಪ್ರಾಂತ್ಯ ಸಂಚಾಲಕ ಶ್ರೀಕಾಂತ್ ಶೆಟ್ಟಿ ಮಾತನಾಡಿ `ಹಿಂದೂಗಳ ತಾಳ್ಮೆ ಮತ್ತು ಸಹನೆ ಕೆಣಕಬೇಡಿ’ ಎಂದು ಎಚ್ಚರಿಕೆ ನೀಡಿದರು.
ವೇದಿಕೆಯಲ್ಲಿ ಶ್ರೀ ಶ್ರೀ ಶ್ರೀ ರಾಜಶೇಕರಾನಂದ ಸ್ವಾಮೀಜಿ ವಜ್ರದೇಹಿ ಮಠ , ಗುರುಪುರ ಮಂಗಳೂರು ಇವರ ದಿವ್ಯ ಉಪಸ್ಥಿತಿಯಲ್ಲಿ , ಹಿಂದೂ ಜಾಗರಣ ವೇಧಿಕೆ ದಕ್ಷಿಣ ಪ್ರಾಂತ್ಯ ಸಂಚಾಲಕ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವ ಹಿಂದೂ ಪರಿಷತ್ತಿನ ತಾಲೂಕ ಉಪಾಧ್ಯಕ್ಷ ಗೋವಿಂದ ಖಾರ್ವಿ ಉಪಸ್ಥಿತರಿದ್ದರು. 31 ಸಮುದಾಯದ ಅಧ್ಯಕ್ಷರು ಸಮುದಾಯದ ಬೆಂಬಲಿಗರೊoದಿಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




