6
  • Latest

ವೃಕ್ಷಮಾತೆ ಸಂದೇಶಕ್ಕೆ ಸಾವಿಲ್ಲ | ಸುವರ್ಣ ಸೌಧದಲ್ಲಿಯೂ ತುಳಸಿ ಧ್ಯಾನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವೃಕ್ಷಮಾತೆ ಸಂದೇಶಕ್ಕೆ ಸಾವಿಲ್ಲ | ಸುವರ್ಣ ಸೌಧದಲ್ಲಿಯೂ ತುಳಸಿ ಧ್ಯಾನ!

AchyutKumar by AchyutKumar
in ರಾಜ್ಯ

ಬೆಳಗಾವಿ ಸುವರ್ಣಸೌಧದ ವಿಧಾನ ಪರಿಷತ್ ಅಧೀವೇಶನದಲ್ಲಿ ಪದ್ಮಶ್ರೀ ಪುರಸ್ಕೃತ ತುಳಸಿಗೌಡ ಅವರ ನಿಧನಕ್ಕೆ ಸಂತಾಪ ಸಭೆ ನಡೆಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಿದರು.

ADVERTISEMENT

ತುಳಸಿ ಗೌಡ ಅವರು 1944ರ ಡಿಸೆಂಬರ್ 16ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದರು. `ಪರಿಸರವೇ ನನ್ನ ಉಸಿರು’ ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ `ವೃಕ್ಷ ಮಾತೆ’ ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಅವರು ಪೋಷಿಸುತ್ತಿದ್ದರು.

ತುಳಸಿ ಗೌಡ ಅವರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನು ಹೆಚ್ಚಾಗಿ ಬೆಳೆಸುತ್ತಿದ್ದ ಅವರು ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ ಮರಗಳ ಅರಿವು ಹೊಂದಿದ್ದರು. ಪರಿಸರದ ಮೇಲಿನ ಅವರ ಪ್ರೀತಿಯನ್ನು ಕಂಡು ಅರಣ್ಯದಲ್ಲಿ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಹಾಗೂ ಪೋಷಿಸುವ ದಿನಗೂಲಿ ನೌಕರಿ ದೊರೆತಿತ್ತು.

Advertisement. Scroll to continue reading.

ತುಳಸಿ ಗೌಡ ಅವರು ಕಾಡಿನಿಂದ ಅಪರೂಪದ ಬೀಜ ಸಂಗ್ರಹಿಸಿ, ಸಸಿಗಳನ್ನು ಬೆಳಸಿ ಅದೇ ಸಸಿಗಳನ್ನು ಅರಣ್ಯದಲ್ಲಿ, ಸರ್ಕಾರಿ ಕಛೇರಿ, ಶಾಲಾ ಆವರಣ, ರಸ್ತೆಯ ಪಕ್ಕದಲ್ಲಿ ಬೆಳೆಸಿದ್ದರು. ಯಾವ ಯಾವ ಮರದಿಂದ ಏನೇನು ಪ್ರಯೋಜನ, ಯಾವ ಜಾತಿಯ ಸಸಿಗಳಿಗೆ ಎಷ್ಟು ನೀರಿನ ಅವಶ್ಯಕತೆ ಇದೆ? ಮುಂತಾದ ಹಲವಾರು ಮಾಹಿತಿಗಳ ಕಣಜವಾಗಿದ್ದ ಅವರು `ಅರಣ್ಯದ ವಿಶ್ವಕೋಶ’ವಾಗಿ ಗುರುತಿಸಿಕೊಂಡಿದ್ದರು. ತುಳಸಿ ಗೌಡ ಅವರ ಪರಿಸರ ಕಾಯಕಕ್ಕೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ, ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಗಳಲ್ಲದೆ ರಾಜ್ಯೋತ್ಸವ ಪ್ರಶಸ್ತಿಗೂ ಸಹ ಭಾಜನರಾಗಿದ್ದರು.

Advertisement. Scroll to continue reading.

`ಅವರ ನಿಧನದಿಂದಾಗಿ ರಾಜ್ಯ ಹಾಗೂ ರಾಷ್ಟ್ರವು ಒಬ್ಬ ಶ್ರೇಷ್ಠ ವೃಕ್ಷ ಮಾತೆಯೊಬ್ಬರನ್ನು ಕಳೆದುಕೊಂಡಿದೆ’ ಎಂದು ಸಭಾಪತಿ ಅವರು ಸಂತಾಪ ಸೂಚನೆಯ ನಿರ್ಣಯವನ್ನು ಸದನಕ್ಕೆ ತಿಳಿಸಿದರು. ಸಭಾ ನಾಯಕರು ಮತ್ತು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದರು. ಮೃತರ ಗೌರವಾರ್ಥ ಮಾನ್ಯ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿದರು.

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
Vrikshmata message is not dead Tulsi meditation even in the golden building!ಉತ್ತರ ಕನ್ನಡ ಜಿಲ್ಲಾಡಳಿತವೂ ಸರ್ಕಾರಿ ಗೌರವದೊಂದಿಗೆ ಪದ್ಮಶ್ರೀ ತುಳಸಿ ಗೌಡ ಅವರ ಅಂತ್ಯಕ್ರಿಯೆ ನಡೆಸಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೇರಿ ಅನೇಕ ಗಣ್ಯರು ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

 

Previous Post

ಶಿರಸಿ | ಕೋಟು-ಕಚೇರಿಗೆ ಬರುವವರಿಗೆ ಶ್ವಾನ ಕಾಟ!

Next Post

ಕಾಳ ಸಂತೆಯಲ್ಲಿ ಮಕ್ಕಳ ಮಾರಾಟ: ಕಾರವಾರದ ವೈದ್ಯೆಯ ಮೇಲೆ ಅನುಮಾನ!

Next Post

ಕಾಳ ಸಂತೆಯಲ್ಲಿ ಮಕ್ಕಳ ಮಾರಾಟ: ಕಾರವಾರದ ವೈದ್ಯೆಯ ಮೇಲೆ ಅನುಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ