6
  • Latest

ಓಬಾಮಾ ಹತ್ಯೆಗೆ ಸಂಚುರೂಪಿಸಿದ್ದ ಭಟ್ಕಳದ ಭಯೋತ್ಪಾದಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಓಬಾಮಾ ಹತ್ಯೆಗೆ ಸಂಚುರೂಪಿಸಿದ್ದ ಭಟ್ಕಳದ ಭಯೋತ್ಪಾದಕ!

AchyutKumar by AchyutKumar
December 18, 2024
in ದೇಶ - ವಿದೇಶ
advt advt advt
ADVERTISEMENT

ಭಟ್ಕಳ: 2015ರಲ್ಲಿ ಅಮೇರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರಿಗೆ ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಭಟ್ಕಳದ ಸೈಯದ್ ಇಸ್ಮಾಯಿಲ್ ಅಫಾಕ್ ಲಂಕಾ (44), ಆತನ ಸೋದರ ಸಂಬoಧಿಯಾದ ಎಂಬಿಎ ವಿದ್ಯಾರ್ಥಿ ಅಬ್ದುಲ್ ಸಬೂರ್ (34) ಮತ್ತು ಸ್ಕ್ರ‍್ಯಾಪ್ ಡೀಲರ್ ಸದ್ದಾಂ ಹುಸೇನ್ (46) ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದು ಸಾಬೀತಾಗಿದೆ. 2015ರ ಜನವರಿ 26ರ ಗಣರಾಜ್ಯೋತ್ಸವದಂದು ಸ್ಫೋಟಗಳನ್ನು ನಡೆಸಲು ಈ ಎಲ್ಲರೂ ಸೇರಿ ಒಬಮಾ ಹತ್ಯೆಗೆ ಸಂಚು ರೂಪಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಭಟ್ಕಳದ ರಿಯಾಜ್ ಅಹ್ಮದ್ ಮತ್ತು ಜೈನುಲ್ಬುದ್ದೀನ್ ಎಂಬಾತರನ್ನು ಸಾಕ್ಷಿ ಕೊರತೆಯಿಂದ ಬಿಡುಗಡೆ ಮಾಡಲಾಗಿದೆ.

ADVERTISEMENT
ADVERTISEMENT

ಭಟ್ಕಳದ ನಿವಾಸಿ ಅಫಾಕ್ ಲಂಕಾನನ್ನು ಯುಎಪಿಎ ಸೆಕ್ಷನ್ 13, 20, 23ಮತ್ತು 38ರ ಅಡಿಯಲ್ಲಿ ಹಾಗೂ ಸ್ಫೋಟಕಗಳ ಕಾಯ್ದೆಯ ಸೆಕ್ಷನ್ 4 ಮತ್ತು 55ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ. ಭಟ್ಕಳದ ಮುಖ್ಯ ರಸ್ತೆಯಲ್ಲಿ ಕ್ಲಿನಿಕ್ ಹೊಂದಿದ್ದ ಹೋಮಿಯೋಪಥಿಕ್ ವೈದ್ಯ ಅಫಾಕ್ ಲಂಕಾ ಪಾಕಿಸ್ತಾನಿ ಪ್ರಜೆಯನ್ನು ಮದುವೆಯಾಗಿದ್ದ. ಪಾಕಿಸ್ತಾನಿ ಭಯೋತ್ಪಾದಕ ಗುಂಪುಗಳೊoದಿಗೆ ಸಂಪರ್ಕವನ್ನು ಇಟ್ಟುಕೊಂಡಿದ್ದ. ತನ್ನ ಪತ್ನಿಯನ್ನು ಭೇಟಿ ಮಾಡುವ ನೆಪದಲ್ಲಿ ಆತ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದಿದ್ದ ಎಂದು ದೂರಲಾಗಿದೆ. ಮುಂಬೈ, ಪುಣೆ ಮತ್ತು ದೆಹಲಿ ಬಾಂಬ್ ಸ್ಫೋಟಗಳಿಗೆ ಸ್ಫೋಟಕಗಳನ್ನು ಪೂರೈಸುವಲ್ಲಿ ಈತ ಭಾಗಿಯಾಗಿದ್ದ ಎಂಬ ಆರೋಪವಿದೆ.

Advertisement. Scroll to continue reading.
Advertisement. Scroll to continue reading.

ಭಟ್ಕಳದ ನಿವಾಸಿ ಅಬ್ದುಲ್ ಸಬೂರ್ ಮತ್ತು ಹುಸೇನ್ ಅವರನ್ನು ಯುಎಪಿಎ ಸೆಕ್ಷನ್ 13 ಮತ್ತು 23 ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 4 ಮತ್ತು 5ರ ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ವಿಶೇಷ ಎನ್‌ಐಎ ನ್ಯಾಯಾಲಯದ ಪ್ರಕಾರ, ಪ್ರಮುಖ ಆರೋಪಿಗಳಾದ ರಿಯಾಜ್ ಭಟ್ಕಳ್ ಮತ್ತು ಇಕ್ಬಾಲ್ ಭಟ್ಕಳ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಾರೆ.

ತಮಿಳುನಾಡಿನ ಚರ್ಚ್ ಸ್ಟ್ರೀಟ್‌ನಲ್ಲಿ 2014ರ ಡಿ.30ರಂದು ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬAಧಿಸಿದAತೆ, ಜನವರಿ 8, 2015ರಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತಂಡವು ಬೆಂಗಳೂರಿನ ಪುಲಕೇಶಿನಗರ ಪ್ರದೇಶದಲ್ಲಿ ಅಫಾಕ್ ಲಂಕಾನನ್ನು ಬಂಧಿಸಿದಾಗ ಒಬಾಮಾ ಭೇಟಿ ಸಂದರ್ಭ ಭಯೋತ್ಪಾದನಾ ಸಂಚು ರೂಪಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಆತನ ವಿಚಾರಣೆಯಿಂದ ಇತರ ಶಂಕಿತ ಭಯೋತ್ಪಾದಕರ ಬಂಧನಕ್ಕೆ ಕಾರಣವಾಯಿತು. ಭಟ್ಕಳದ ಮನೆಯೊಂದರಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದಾಗಿ ಅಫಾಕ್ ಲಂಕಾ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದರು. ನಂತರ ಸಿಸಿಬಿ ತಂಡವು ಸ್ಥಳದಿಂದ ಬಾಂಬ್‌ಗಳು ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು.

ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸಿಸಿಬಿಯ ಎಸಿಪಿ ಓಂಕಾರಯ್ಯ ಮತ್ತು ತಮ್ಮಯ್ಯ ನೇತೃತ್ವದಲ್ಲಿ ನಡೆದಿತ್ತು. ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣವನ್ನು ಕೈಗೆತ್ತಿಕೊಂಡು 2000 ಪುಟಗಳ ಚಾರ್ಜ್ಶೀಟ್ ಸಲ್ಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಆರೋಪಿಗಳು 2015ರಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಭಟ್ಕಳದ ರಿಯಾಜ್ ಅಹ್ಮದ್ ಮತ್ತು ಜೈನುಲ್ಬುದ್ದೀನ್ ಅವರನ್ನು ಯುಎಪಿಎ ಸೆಕ್ಷನ್ 13 ಮತ್ತು 23 ಮತ್ತು ಸ್ಫೋಟಕಗಳ ಕಾಯ್ದೆಯ ಸೆಕ್ಷನ್ 4 ಮತ್ತು 5 ರ ಅಡಿಯಲ್ಲಿ ಖುಲಾಸೆಗೊಳಿಸಲಾಗಿದೆ.

ShareSendTweetShare
ADVERTISEMENT
Previous Post

ರಿಂಗ್ ರೋಡ್ ರವಿಯ ಜೂಜಾಟಕ್ಕೆ ತಡೆ

Next Post

ಶಾಲಾ ಪ್ರವಾಸ | ಬಾವಿಗೆ ಬಿದ್ದ ಬಾಲಕನ ಬದುಕು ಕೊನೆ!

Next Post

ಶಾಲಾ ಪ್ರವಾಸ | ಬಾವಿಗೆ ಬಿದ್ದ ಬಾಲಕನ ಬದುಕು ಕೊನೆ!

ಗೌಡರ ನಡುವೆ ಜಟಾಪಟಿ: ಅನ್ಯರ ಪಾಲಾದ ಆಡುಕುಳದ ಅಡಿಕೆ!

ಜನಸಾಮಾನ್ಯರ ದೂರಿಗೆ ತ್ವರಿತ ಸ್ಪಂದನೆ: ನುಡಿದಂತೆ ನಡೆದ ಗ್ರಾ ಪಂ ಅಧ್ಯಕ್ಷೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.