ಪಂಚ ಗ್ಯಾರಂಟಿಯಲ್ಲಿ ಒಂದಾದ `ಯುವನಿಧಿ’ ಹಣ ಪಡೆಯುವವರಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
2023 ಹಾಗೂ 2024ರಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪಾಸಾದವರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ನಿರುದ್ಯೋಗಿಗಳಾಗಿರಬೇಕು. ಉನ್ನತ ವ್ಯಾಸಂಗ ಮುಂದುವರೆಸದಿರುವ ಕರ್ನಾಟಕದಲ್ಲಿ ಕನಿಷ್ಟ ಆರು ವರ್ಷಗಳಿಂದ ವಾಸವಾಗಿರುವವರು ಮಾಸಿಕ ಹಣ ಪಡೆಯಲು ಅರ್ಹರು.
ಈ ಬಗ್ಗೆ ಇನ್ನಷ್ಟು ಮಾಹಿತಿಗೆ ಇಲ್ಲಿ ಫೋನ್ ಮಾಡಿ: 08382-226386
ಯುವನಿಧಿ ಸಹಾಯವಾಣಿ ಸಂಖ್ಯೆ: 18005997154 & 18005999918




