ಮುಂಡಗೋಡ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ. ಬಸ್ಸು ಚಲಾಯಿಸುತ್ತಿದ್ದ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಡಿ 19ರಂದು ಉಗ್ಗಿನಕೇರಿ ಕ್ರಾಸಿನ ಬಳಿ ಗುಂಜಾವತಿಯ ಮಾಬುಬಿ ಶೇಖ್ ಎಂಬಾತರು ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಪರಿಣಾಮ ಅವರ ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದ್ದು, ಮೈ-ಕೈಗೆ ಸಹ ಗಾಯವಾಗಿತ್ತು. ಸ್ಥಳೀಯರು ಅವರನ್ನು ಮುಂಡಗೋಡು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ದಿದ್ದರು.
ಆದರೆ, ಅಲ್ಲಿನ ಚಿಕಿತ್ಸೆಗೆ ಮಾಬುಬಿ ಶೇಖ್ ಸ್ಪಂದಿಸಲಿಲ್ಲ. ಗುರುವಾರ ಸಂಜೆ ಅವರು ಸಾವನಪ್ಪಿದರು. ಬಸ್ಸು ಚಲಾಯಿಸುತ್ತಿದ್ದ ಚಾಲಕ ಅಂಜನ ಕರಿಯಪ್ಪ ಗೌಡ್ರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.




