ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಅಗ್ನಿಸ್ಪರ್ಶವಾಗಿದೆ.
ಮಂಗಳವಾರ ನಸುಕಿನಲ್ಲಿ ಅರಬೈಲ್ ಘಟ್ಟದಲ್ಲಿ ಲಾರಿ ಹೊತ್ತಿ ಉರಿದಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಅಲ್ಲಿಗೆ ತೆರಳಿ ಬೆಂಕಿ ಆರಿಸುವ ಪ್ರಯತ್ನ ಮಾಡಿದರು. ಆದರೆ, ಪ್ರಯೋಜನವಾಗಲಿಲ್ಲ. ಲಾರಿಯಿಂದ ಹಾರಿ ಚಾಲಕ ಹಾಗೂ ಕ್ಲೀನರ್ ಜೀವ ಉಳಿಸಿಕೊಂಡಿದ್ದಾರೆ.
ಈ ಲಾರಿ ಬಾಗಲಕೋಟೆಯಿಂದ ಕೇರಳಕ್ಕೆ ಸಂಚರಿಸುತ್ತಿತ್ತು. ಅಗ್ನಿ ಅನಾಹುತಕ್ಕೆ ಕಾರಣ ಗೊತ್ತಾಗಲಿಲ್ಲ. ಯಲ್ಲಾಪುರ ಪೊಲೀಸರು ಸಹ ಸ್ಥಳಕ್ಕೆ ತೆರಳಿ ಹೆಚ್ಚಿನ ಅನಾಹುತ ಆಗದಂತೆ ಮುನ್ನಚ್ಚರಿಕೆವಹಿಸಿದರು. ಪಿಎಸ್ಐ ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿ ಟ್ರಾಫಿಕ್ ಸಮಸ್ಯೆ ಉಂಟಾಗದ0ತೆ ಎಚ್ಚರಿಕೆವಹಿಸಿದರು. ಪ್ರಸ್ತುತ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಬಂದಿರುವುದರಿoದ ಸಾರ್ವಜನಿಕ ವಾಹನ ಸಂಚಾರಕ್ಕೆ ಸಮಸ್ಯೆ ಇಲ್ಲ.
ಬೆಂಕಿ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಶೇ 70ಕ್ಕೂ ಅಧಿಕ ಪ್ರಮಾಣದಲ್ಲಿನ ಸಕ್ಕರೆ ಭಸ್ಮವಾಗಿದೆ.
ಲಾರಿ ಹೊತ್ತಿ ಉರಿದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..