6
  • Latest

ಉತ್ತರ ಕನ್ನಡ | ಇಲ್ಲಿಯೇ ಬದುಕು.. ಇಲ್ಲಿಯೇ ಉದ್ಯೋಗ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ತರ ಕನ್ನಡ | ಇಲ್ಲಿಯೇ ಬದುಕು.. ಇಲ್ಲಿಯೇ ಉದ್ಯೋಗ!

AchyutKumar by AchyutKumar
December 24, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: `ಉತ್ತರ ಕನ್ನಡ ಜಿಲ್ಲೆಯ ಯುವ ಜನತೆಗೆ ಅಗತ್ಯವಿರುವ ಕೌಶಲ್ಯ ತರಬೇತಿ ನೀಡಿ, ಇಲ್ಲಿಯೇ ಉದ್ಯೋಗದ ದಾರಿ ತೋರಬೇಕು. ಅವರಿಗೆ ಉತ್ತಮ ವೇತನವೂ ಸಿಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನಿಸಿ’ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ.

ಜಿಲ್ಲಾ ಕೌಶಲ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು `ಜಿಲ್ಲೆಯ ಐ ಟಿ ಐ ಕಾಲೇಜುಗಳಲ್ಲಿ ಪ್ರಸ್ತುತ ಉದ್ಯೋಗ ವಲಯಗಳಲ್ಲಿ ಬೇಡಿಕೆ ಇರುವ ಕೋರ್ಸ್ಗಳ ಬಗ್ಗೆ ತರಬೇತಿ ನೀಡಬೇಕು. ಸೀಬರ್ಡ ಒಳಗೊಂಡು ಇತರೆ ಕಂಪನಿಗಳಲ್ಲಿ ಇರುವ ಉದ್ಯೋಗಗಳ ಕುರಿತು ಚರ್ಚೆ ನಡೆಸಿ ಸ್ಥಳೀಯರಿಗೆ ಅದಕ್ಕೆ ತಕ್ಕ ತರಬೇತಿ ನೀಡಬೇಕು’ ಎಂದು ಸೂಚಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಉದ್ಯೋಗ ಮೇಳದಲ್ಲಿ ಉದ್ಯೋಗ ಪಡೆದಿರುವ ಯುವಕರ ವಿವರಗಳನ್ನು ನೀಡುವಂತೆ ಸೂಚಿಸಿದರು. `ಮೇಳದಲ್ಲಿ ಉದ್ಯೋಗ ಪಡೆದಿರುವ ಯುವಕರ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕು’ ಎಂದು ಹೇಳಿದರು. `ಜನವರಿ 9ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿ, ಜಿಲ್ಲೆಯ ಯುವ ಜನತೆಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉತ್ತಮ ಉದ್ಯೋಗ ದೊರಕಿಸಲು ಎಲ್ಲಾ ಕ್ರಮ ಜರುಗಿಸಬೇಕು’ ಎಂದರು.

Advertisement. Scroll to continue reading.

ನಿರುದ್ಯೋಗ ಭತ್ಯೆ
`ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ಎಲ್ಲಾ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯುವಂತೆ ಪರಿಶೀಲನೆ ನಡೆಸಬೇಕು. ಯೋಜನೆಗೆ ಅರ್ಜಿ ಸಲ್ಲಿಸಿ, ಪರಿಶೀಲನಾ ಹಂತದಲ್ಲಿರುವ ಅರ್ಜಿಗಳನ್ನು 10 ದಿನದಲ್ಲಿ ಪೂರ್ಣಗೊಳಿಸಿ ಅರ್ಹ ಎಲ್ಲರಿಗೂ ಯೋಜನೆಯ ಪ್ರಯೋಜನ ದೊರೆಕಿಸಬೇಕು. ಯೋಜನೆಯ ನೆರವು ಪಡೆಯಲು ತಾಂತ್ರಿಕ ತೊಂದರೆಯಿರುವ ಅಭ್ಯರ್ಥಿಗಳ ಬಗ್ಗೆ ಪರಿಶೀಲಿಸಿ ಅವುಗಳನ್ನು ಬಗೆಹರಿಸಬೇಕು. ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ವೆಬ್‌ಸೈಟ್’ನಲ್ಲಿ ಅಳವಡಿಸಲು ಸಮಸ್ಯೆಯಿರುವ ಕಾಲೇಜು ಮತ್ತು ವಿಶ್ವ ವಿದ್ಯಾಲಯದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಸೂಚಿಸಿದರು.

ಪಿ ಎಂ ವಿಶ್ವಕರ್ಮ ಯೋಜನೆ, ಪಿ ಎಂ ಸೂರ್ಯಘರ್ ಮುಫ್ತ ಬಿಜಲಿ ಯೋಜನೆ ಅನುಷ್ಠಾನ, ಡೇ-ನಲ್ಮ್ ಅಡಿಯಲ್ಲಿ ಬರುವ ಪಿಎಂ ಸ್ವನಿಧಿ ಯೋಜನೆಗಳ ಕುರಿತು ಚರ್ಚೆ ನಡೆಯಿತು. ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಡಿ ಟಿ ನಾಯ್ಕ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜಯಂತ್ ಇದ್ದರು.

 

ShareSendTweetShare
ADVERTISEMENT
Previous Post

ಆಸ್ಪತ್ರೆ ಮುಂದೆ ಅಪಘಾತ!

Next Post

ಬೀಗ ಒಡೆದು ನುಗ್ಗುವ ಕಳ್ಳರು.. ಹೊಸ ಬೀಗ ಹಾಕಿ ಪರಾರಿ!

Next Post

ಬೀಗ ಒಡೆದು ನುಗ್ಗುವ ಕಳ್ಳರು.. ಹೊಸ ಬೀಗ ಹಾಕಿ ಪರಾರಿ!

ಪಾದಚಾರಿಗೆ ಗುದ್ದಿದ ಕಾರು: ಅರ್ದ ಆಯಸ್ಸಿಗೆ ಅಂತ್ಯಗೊoಡ ಸೋಮು ಗೌಡರ ಬದುಕು!

ಮೂವರಿಗೆ ಗುದ್ದಿದ ಕಾರು: ನೆರವು ನೀಡಿದ ಗೌಡ್ರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.