6
  • Latest

ಯಕ್ಷಶ್ರೀ | ಕಲಾವಿದರ ಸಮಾಗಮ.. ಜೊತೆಗೆ ಸನ್ಮಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಕ್ಷಶ್ರೀ | ಕಲಾವಿದರ ಸಮಾಗಮ.. ಜೊತೆಗೆ ಸನ್ಮಾನ!

AchyutKumar by AchyutKumar
December 26, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಯಕ್ಷಗಾನ ಹಾಗೂ ತಾಳಮದ್ದಲೆ ಕ್ಷೇತ್ರದ ಸಾಧಕರ ಬರಹ ಪ್ರಕಟಿಸಿ ಅವರನ್ನು ಸಮಾಜಕ್ಕೆ ಪರಿಚಯಿಸುತ್ತಿರುವ `ಕರ್ನಾಟಕ ಕಲಾ ಸನ್ನಿಧಿ’ ಇದೀಗ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ. ಯಾವುದೇ ಪ್ರತಿಫಲ ಬಯಸದೇ ಪ್ರಚಾರದ ಹಂಗಿಲ್ಲದೇ ಸೇವೆ ಸಲ್ಲಿಸುತ್ತಿರುವವರಿಗಾಗಿ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ.

ಕಳೆದ 4 ವರ್ಷಗಳಿಂದ `ಕರ್ನಾಟಕ ಕಲಾ ಸನ್ನಿಧಿ’ ಕಲಾವಿದರ ಕುರಿತು ನಿರಂತರ ಲೇಖನ ಪ್ರಕಟಿಸುತ್ತಿದೆ. ವಿವಿಧ ಸಾಮಾಜಿಕ ಜಾಲತಾಣ ಸೇರಿ `S News Digitel’ನಲ್ಲಿ ಸಹ `ಯಕ್ಷಶ್ರಿ’ ಹೆಸರಿನ ಅಡಿ ಲೇಖನಗಳು ಪ್ರಸಾರವಾಗುತ್ತಿವೆ. ಕರ್ನಾಟಕ ಕಲಾ ಸನ್ನಿಧಿಯ ಪದಾಧಿಕಾರಿಗಳು 50 ಕಲಾವಿದರನ್ನು ಸಂದರ್ಶಿಸಿದ ಸನ್ನಿವೇಶದಲ್ಲಿ ಎಲ್ಲರನ್ನು ಒಂದೇ ಕಡೆ ಸೇರಿಸಿ ಗೌರವಿಸಿದ್ದರು. ಆ ವೇಳೆ ಎಲ್ಲಾ ಲೇಖನಗಳನ್ನು ಸಂಗ್ರಹಿಸಿ `ದಿವ್ಯ ದೀವಟಿಕೆ’ ಎಂಬ ಪುಸ್ತಕ ಹೊರತರಲಾಗಿದ್ದು, ಅದರ ಬಿಡುಗಡೆ ಕಾರ್ಯಕ್ರಮ ಸಹ ಇದೀಗ ನಡೆಯಲಿದೆ.

Advertisement. Scroll to continue reading.
ADVERTISEMENT
ADVERTISEMENT

ಯಲ್ಲಾಪುರ ತಾಲೂಕಿನ ಆನಗೋಡಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಿ 29ರ ಮಧ್ಯಾಹ್ನ 3 ಗಂಟೆಯಿ0ದ ಈ ಕಾರ್ಯಕ್ರಮ ಶುರುವಾಗಲಿದೆ. `ನಿಸ್ವಾರ್ಥ ಕಲಾ ಸೇವಕರಿಗೆ ಗೌರವ ಸಮರ್ಪಣೆ, ದಿವ್ಯ ದೀವಟಿಗೆ ಪುಸ್ತಕ ಲೋಕಾರ್ಪಣೆ ಹಾಗೂ ಗಾನ ಸಂಜೆಯನ್ನು ಆಯೋಜಿಸಲಾಗಿದೆ’ ಎಂದು ಕರ್ನಾಟಕ ಕಲಾ ಸನ್ನಿಧಿ ಅಧ್ಯಕ್ಷ ಶ್ರೀಧರ ಭಟ್ಟ ಅಣಲಗಾರ ಸುದ್ದಿಗಾರರಿಗೆ ವಿವರಿಸಿದರು.

Advertisement. Scroll to continue reading.

`ಕಲಾವಿದರನ್ನು ಸಂದರ್ಶಿಸಿ ಲೇಖನ ಪ್ರಕಟಿಸುವ ಸರಣಿ ಮುಂದುವರಿದಿದ್ದು, ಈ ಬಾರಿ 45 ಕಲಾವಿದರನ್ನು ಸಂದರ್ಶಿಸಲಾಗಿದೆ. ಈ 45 ಕಲಾವಿದರು ಆ ದಿನ ಹಾಜರಿರಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ ಎನ್ ಹೆಗಡೆ ಹಿರೇಸರ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಲಾ ಸನ್ನಿಧಿಯ ಕೋಶಾಧ್ಯಕ್ಷ ದಿನೇಶ ಭಟ್ಟ ಯಲ್ಲಾಪುರ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.

`ದಿವ್ಯ ದೀವಟಿಗೆ ಪುಸ್ತಕವನ್ನು ಕಲಾವಿದ ವಿನಾಯಕ ಭಟ್ಟ ಶೇಡಿಮನೆ ಲೋಕಾರ್ಪಣೆಗೊಳಿಸಲಿದ್ದಾರೆ. ಬರಹಗಾರ ದತ್ತಾತ್ರೇಯ ಕಣ್ಣಿಪಾಲ ಪುಸ್ತಕ ಪರಿಚಯಿಸಲಿದ್ದಾರೆ. ದೇವಸ್ಥಾನದ ಅಧ್ಯಕ್ಷ ಗಣಪತಿ ಮಾನಿಗದ್ದೆ, ಗ್ರಾ ಪಂ ಅಧ್ಯಕ್ಷೆ ಮೀನಾಕ್ಷಿ ಭಟ್ಟ, ಟಿಎಂಎಸ್ ನಿರ್ದೇಶಕ ವೆಂಕಟರಮಣ ಭಟ್ಟ ಕಿರಕುಂಭತ್ತಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ಕಲಾವಿದ ಶ್ರೀವತ್ಸ ಗುಡ್ಡೆದಿಂಬ ಅವರಿಗೆ ಕಲಾಸನ್ನಿಧಿ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಅದಾದ ಮೇಲೆ ಸ್ಥಳೀಯ ಕಲಾವಿದರಿಂದ ಗಾನ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ದೀಪಕ ಭಟ್ಟ ಕುಂಕಿ,ಸಹ ಕಾರ್ಯದರ್ಶಿ ದಿನೇಶ ಗೌಡ ಮಾವಿನಮನೆ ವಿವರಿಸಿದರು.

ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

ShareSendTweetShare
ADVERTISEMENT
Previous Post

ಸ್ಯಾಮಸಂಗ್ | ಮನೆಯಲ್ಲಿದ್ದ ಮೊಬೈಲ್ ಸ್ಪೋಟ!

Next Post

ಕೆಲಸಕ್ಕೆ ಹೊರಟ ಚಾಲಕ ಕಾಲುವೆಗೆ ಬಿದ್ದು ಸಾವು!

Next Post

ಕೆಲಸಕ್ಕೆ ಹೊರಟ ಚಾಲಕ ಕಾಲುವೆಗೆ ಬಿದ್ದು ಸಾವು!

ಕೆಳಗಿನ ಗುಡ್ಡ | ಹಾರಿಹೊಯ್ತು ಹಾರಿಸ್ ಪಾಲಿನ ಅಡಿಕೆ!

30 ದಿನದಲ್ಲಿ ಮೊಬೈಲ್ ರಿಪೇರಿ ಕಲಿಯಿರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.