ಭಟ್ಕಳ: ಮುರುಡೇಶ್ವರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಎಲ್ಲಡೆ ತಪಾಸಣೆ ನಡೆಸಿದ್ದಾರೆ.
ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸಮುದ್ರ ತೀರ ಪ್ರವೇಶಕ್ಕೆ ನಿರ್ಬಂಧ ಮುಂದುವರೆಸಲಾಗಿದ್ದು, ಮಂಗಳವಾರ ಸಂಜೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ವಿವಿಧ ಕಡೆ ಪರಿಶೀಲನೆ ನಡೆಸಿದರು.
`ಕಡಲ ತೀರದಲ್ಲಿ ಅನಧಿಕೃತವಾಗಿ ಇರುವ ಅಂಗಡಿ, ದೋಣಿಗಳನ್ನು ಮೊದಲು ತೆರವುಗೊಳಿಸಬೇಕು. ಸ್ವಚ್ಛತೆ ಆದ್ಯತೆಗೆ ನೀಡಬೇಕು’ ಎಂದರು. `ಜೀವ ರಕ್ಷಕ ಸಿಬ್ಬಂದಿಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು. ಸುರಕ್ಷತೆ ಇಲ್ಲದ ಕಡೆ ಪ್ರವಾಸಿಗರಿಗೆ ಪ್ರವೇಶ ನೀಡಲು ಸಾಧ್ಯವಿಲ್ಲ’ ಎಂದವರು ಹೇಳಿದರು. `ನಮಗೆ ವ್ಯಾಪಾರ ವಹಿವಾಟಿಗಿಂತ ಜನರ ಪ್ರಾಣ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಜರುಗಿಸಿ’ ಎಂದು ಸೂಚಿಸಿದರು. ಡಿವಾಯ್ಎಸ್ಪಿ ಮಹೇಶ, ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಸಿಪಿಐ ಸಂತೋಷ ಇದ್ದರು.