6
  • Latest

ಕೇಂದ್ರದ ಯೋಜನೆ | ಅನುಷ್ಠಾನ ಅಧಿಕಾರಿಗಳಿಗೆ ಇಲ್ಲ ಆಸಕ್ತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೇಂದ್ರದ ಯೋಜನೆ | ಅನುಷ್ಠಾನ ಅಧಿಕಾರಿಗಳಿಗೆ ಇಲ್ಲ ಆಸಕ್ತಿ!

AchyutKumar by AchyutKumar
January 4, 2025
in ದೇಶ - ವಿದೇಶ
advt advt advt
ADVERTISEMENT

ಕಾರವಾರ: `ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಅತ್ಯಂತ ಸರಳ ಹಾಗೂ ಸ್ಪಷ್ಠವಾಗಿದ್ದು, ಅದನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಎಡವುತ್ತಿದ್ದಾರೆ’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಧಾನ ವ್ಯಕ್ತಪಡಿಸಿದ್ದಾರೆ. `ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಜನಪರ ಕಾರ್ಯಕ್ರಮಗಳ ಪ್ರಯೋಜನಗಳನ್ನು ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಅವರು ಸೂಚಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳಿಗೆ ಯಾವುದೇ ಗೊಂದಲಗಳಿಲ್ಲ. ಆದರೂ ಈ ಯೋಜನೆಗಳನ್ನು ನಿರೀಕ್ಷಿತ ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳಿಗೆ ಏನು ಸಮಸ್ಯೆ?’ ಎಂದು ಪ್ರಶ್ನಿಸಿದರು. `ಕೇಂದ್ರದ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ’ ಎಂದವರು ಹೇಳಿದರು. `ಜಿಲ್ಲೆಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆಯಲ್ಲಿ ಮತ್ತು ಆಯುಷ್ಮಾನ್ ವಯೋ ವಂದನಾ ಕಾರ್ಡ್ ವಿತರಣೆಯಲ್ಲಿ ಇನ್ನು ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ಕಾರ್ಡ್ ನೋಂದಣಿಯಲ್ಲಿ ಇರುವ ತಾಂತ್ರಿಕ ಸಮಸ್ಯೆ ಬಗೆಹರಿಸಿ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ಒದಗಿಸಿ. ಜಿಲ್ಲೆಯಾದ್ಯಂತ ವಿಶೇಷ ಕ್ಯಾಂಪ್‌ಗಳನ್ನು ಆಯೋಜಿಸಿ 6 ತಿಂಗಳ ಒಳಗೆ ಆರೋಗ್ಯ ಕಾರ್ಡ್ಗಳ ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧಿಸಿ’ ಎಂದು ತಾಕೀತು ಮಾಡಿದರು.

ADVERTISEMENT
ADVERTISEMENT

`ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡುವ ಪಿಎಮ್ ಸ್ವನಿಧಿ ಯೋಜನೆಯಲ್ಲಿ ಪ್ರಸ್ತುತ ಗುರುತಿಸಿರುವ ಸಂಖ್ಯೆಗಿoತಲೂ, ಇನ್ನೂ ಹೆಚ್ಚು ಅರ್ಹ ಫಲಾನುಭವಿಗಳನ್ನು ಜಿಲ್ಲೆಯಲ್ಲಿದ್ದು ಅವರೆಲ್ಲರಿಗೂ ಈ ಯೋಜನೆಯ ಪ್ರಯೋಜನ ದೊರಕಿಸಿ’ ಎಂದು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. `ವಿಶ್ವಕರ್ಮ ಯೋಜನೆಯಡಿ ಇದುವರೆಗೆ 16,552 ಅರ್ಜಿಗಳನ್ನು ಸ್ವೀಕರಿಸಿ, 10,000 ಮಂದಿಯನ್ನು ತರಬೇತಿಗೆ ನೊಂದಾಯಿಸಲಾಗಿದೆ. ಇದರಲ್ಲಿ ಕೇವಲ 2,720 ಮಂದಿಗೆ ಮಾತ್ರ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಗಿರುವ ತರಬೇತಿ ಕೆಂದ್ರಗಳೊoದಿಗೆ ಸಮನ್ವಯ ಸಾಧಿಸಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕುಶಲ ಕರ್ಮಿಗಳಿಗೆ ತರಬೇತಿ ನೀಡಿ, ಅವರಿಗೆ ಬ್ಯಾಂಕ್‌ಗಳಿoದ ಆರ್ಥಿಕ ನೆರವು ಒದಗಿಸಿ ಅವರನ್ನು ಉದ್ಯಮಿಗಳನ್ನಾಗಿ ಮಾಡಬೇಕು’ ಎಂದರು.

`ಪಿಮ್ ಸೂರ್ಯ ಘರ್ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 244 ಮಂದಿ ಮಾತ್ರ ನೋಂದಣಿ ಮಾಡಿದ್ದು, ಹೆಸ್ಕಾಂ ವತಿಯಿಂದ ಮನೆ ಮನೆಗಳಿಗೆ ಭೇಟಿ ನೀಡಿ, ಯೋಜನೆಯ ಕುರಿತಂತ ಹೆಚ್ಚಿನ ಜಾಗೃತಿ ಮೂಡಿಸಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೌರ ಮೇಲ್ಚಾವಣಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಬೇಕು’ ಎಂದರು. `ಜಿಲ್ಲೆಯಲ್ಲಿ ಮುದ್ರಾ ಯೋಜನೆಯ ಶಿಶು, ಕಿಶೋರ್ ಮತ್ತು ತರುಣ್ ವಿಭಾಗಗಳಲ್ಲಿ ಇದುವರೆಗೆ ಒಟ್ಟು 19,092 ಮಂದಿಗೆ 312.5 ಕೋಟಿ ರೂ ಗಳ ಸಾಲ ವಿತರಿಸಿದ್ದು, ಈ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸಣ್ಣ ಪುಟ್ಟ ಕಾರಣಗಳಿಗೆ ತಿರಸ್ಕೃತ ಮಾಡದೇ, ಗರಿಷ್ಠ ಸಂಖ್ಯೆಯಲ್ಲಿ ಸಾಲ ವಿತರಿಸಿ, ಇದರಿಂದ ಜಿಲ್ಲೆಯಲ್ಲಿ ಹೊಸ ಉದ್ಯಮಗಳು ಅರಂಭಗೊoಡು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರೆಯಲಿವೆೆ’ ಎಂದರು.

Advertisement. Scroll to continue reading.
Advertisement. Scroll to continue reading.

`ಕೃಷಿ ಮೂಲಭೂತ ಸೌಕರ್ಯ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ 105 ಮಂದಿಗೆ 98 ಕೋಟಿ ರೂ ಗಳನ್ನು ವಿತರಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ಆರಂಭಿಸುವ ಬಗ್ಗೆ ರೈತರನ್ನು ಪ್ರೋತ್ಸಾಹಿಸುವಂತೆ ತಿಳಿಸಿದ ಸಂಸದರು, ಯೋಜನೆಯ ಅನುಷ್ಠಾನದಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಬಗ್ಗೆ ಸಂಬoದಪಟ್ಟ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮತ್ತು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಹಾಗೂ ಈ ವರ್ಷ ನೀಡಿರುವ ಗುರಿಯಲ್ಲಿ ಸಂಪೂರ್ಣ ಪ್ರಗತಿ ಸಾಧಿಸಬೇಕು’ ಎಂದರು. `ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ ಮತ್ತು ಅಂಚೆ ಕಚೇರಿಯಲ್ಲಿರುವ ಗ್ರೂಫ್ ಆಕ್ಷಿಡೆಂಟ್ ಗಾರ್ಡ್ (ಗ್ಯಾಗ್ ) ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಈ ಯೋಜನೆಗಳ ಮೂಲಕ ಅಪಘಾತ ಸಂದರ್ಭದಲ್ಲಿ ಸಂತ್ರಸ್ಥ ಕುಟುಂಬಗಳಿಗೆ ನೆರವು ದೊರೆಯುವಂತೆ ನೋಡಿಕೊಳ್ಳಿ’ ಎಂದರು.

`ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ಅರ್ಹ ರೈತರಿಗೆ ದೊರಕಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ನಡೆಸಿದ್ದು ತಾಂತ್ರಿಕ ಕಾರಣಗಳಿಂದ ವಿಮೆಯ ಮೊತ್ತ ದೊರೆಯಲು ವಿಳಂಬವಾಗಿದೆ. ಈ ತಿಂಗಳೊಳಗೆ ಪರಿಹಾರದ ಮೊತ್ತ ರೈತರಿಗೆ ತಲುಪಲಿದೆ. ಜಿಲ್ಲೆಯಲ್ಲಿ ಪಿ.ಎಂ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 1,56,404 ರೈತರು ಆರ್ಥಿಕ ನೆರವು ಪಡೆಯುತ್ತಿದ್ದು, ಇದುವರೆಗೆ 18 ಕಂತುಗಳ ಹಣ ಬಿಡುಗಡೆಯಾಗಿದ್ದು, ಈ ಮೊತ್ತ ದೊರೆಯುವುದರ ಬಗ್ಗೆ ಯಾವುದೇ ಸಮಸ್ಯೆಯಿದ್ದಲ್ಲಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು’ ಎಂದರು.

ಈ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ, ಜಿ.ಪಂ. ಸಿಇಓ ಈಶ್ವರ ಕಾಂದೂ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

ShareSendTweetShare
ADVERTISEMENT
Previous Post

ಪತ್ನಿ ಜೊತೆ ಮುನಿಸು | ನೇಣಿಗೆ ಶರಣಾದ ಗುಜುರಿ ವ್ಯಾಪಾರಿ!

Next Post

ಒಂಟಿ ಪ್ರತಿಭಟನೆ: ನೀರಿಗಾಗಿ ನಡೆದ ಉಪವಾಸ!

Next Post

ಒಂಟಿ ಪ್ರತಿಭಟನೆ: ನೀರಿಗಾಗಿ ನಡೆದ ಉಪವಾಸ!

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

PSI post competitive exam preparation!

PSI ಹುದ್ದೆ ಕೊಡಿಸಿದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.