6
  • Latest

ಸುಸಜ್ಜಿತ ಆಸ್ಪತ್ರೆ ವಿಚಾರ | ಬಿಜೆಪಿಗನ ಪತ್ರಕ್ಕೆ ಉತ್ತರಿಸಿದ ಕಾಂಗ್ರೆಸ್ ಸರ್ಕಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಸುಸಜ್ಜಿತ ಆಸ್ಪತ್ರೆ ವಿಚಾರ | ಬಿಜೆಪಿಗನ ಪತ್ರಕ್ಕೆ ಉತ್ತರಿಸಿದ ಕಾಂಗ್ರೆಸ್ ಸರ್ಕಾರ!

AchyutKumar by AchyutKumar
in ವಿಡಿಯೋ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವೂ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ಸೂಚನೆ ನೀಡಿದೆ. 15 ದಿನಗಳ ಒಳಗೆ ಪತ್ರಕ್ಕೆ ಹಿಂಬರಹ ನೀಡುವುದರ ಜೊತೆ ಹೋರಾಟಗಾರ ಅನಂತಮೂರ್ತಿ ಹೆಗಡೆಯವರಿಗೂ ಪ್ರತಿ ರವಾನಿಸುವಂತೆ ಸೂಚಿಸಿದೆ.

2023ರ ನವೆಂಬರ್ ಅವಧಿಯಲ್ಲಿ ಅನಂತಮೂರ್ತಿ ಹೆಗಡೆ ಅವರು ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಏಳು ದಿನಗಳ ಪಾದಯಾತ್ರೆ ಮಾಡಿದ್ದರು. ಶಿರಸಿಯಿಂದ ಕಾರವಾರದವರೆಗೆ ನಡೆದ ಅವರು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಹಾಗೂ ಮೆಡಿಕಲ್ ಕಾಲೇಜು ಅನಿವಾರ್ಯತೆ ಬಗ್ಗೆ ವಿವರಿಸಿದ್ದರು.

`ಬಿಜೆಪಿ ಸರ್ಕಾರ ಕುಮಟಾದಲ್ಲಿ ಜಾಗ ಗುರುತಿಸಿದ್ದರೂ ನಂತರ ಆಸ್ಪತ್ರೆ ನಿರ್ಮಾಣ ಆಗದ ಬಗ್ಗೆ ಅನಂತಮೂರ್ತಿ ಹೆಗಡೆ ಅವರು ಶಿರಸಿಯಿಂದ ಕಾರವಾರದವರೆಗಿನ ಪಾದಯಾತ್ರೆಯಲ್ಲಿ ಆಕ್ರೋಶ ಹೊರಹಾಕಿದ್ದರು. ನಂತರ ಅನಂತಮೂರ್ತಿ ಹೆಗಡೆ ಚ್ಯಾರಿಟೆಬಲ್ ಟ್ರಸ್ಟಿನ ಮೂಲಕ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದೀಗ ಅದಕ್ಕೆ ಸರ್ಕಾರ ಅದಕ್ಕೆ ಸ್ಪಂದಿಸಿದೆ.

ಆಸ್ಪತ್ರೆ ಮಾತ್ರ ಸಾಲುವುದಿಲ್ಲ!
`ಆಸ್ಪತ್ರೆ ಮಾತ್ರ ನಿರ್ಮಿಸಿದರೆ ಸಾಲುವುದಿಲ್ಲ. ಅದಕ್ಕೆ ತಜ್ಞ ವೈದ್ಯರು ಅಗತ್ಯ. ಹೀಗಾಗಿ ಸುಸಜ್ಜಿತ ಆಸ್ಪತ್ರೆ ಜೊತೆ ಮೆಡಿಕಲ್ ಕಾಲೇಜು ಸಹ ಸ್ಥಾಪಿಸಬೇಕು. ಶಿರಸಿ ಹಾಗೂ ಕುಮಟಾದಲ್ಲಿ ಆರೋಗ್ಯ ಸೇವೆ ದೊರೆಯಬೇಕು’ ಎಂದು ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ.

ಈಗಿರುವ ಕಾಲೇಜು ಉಪಯೋಗಕ್ಕಿಲ್ಲ!
`ಕಾರವಾರದಲ್ಲಿ ಈಗಾಗಲೇ ಮೆಡಿಕಲ್ ಕಾಲೇಜು ಇದೆ. ಆದರೆ, ಅದು ಸೂಕ್ತ ಸ್ಥಳದಲ್ಲಿರದ ಕಾರಣ ಜನರಿಗೆ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಪ್ರತ್ಯೇಕ ಕಾಲೇಜು ಜೊತೆಗೆ ಆಸ್ಪತ್ರೆ ನಿರ್ಮಾಣವಾಗಬೇಕು’ ಎಂದವರು ಪುನರುಚ್ಚರಿಸಿದ್ದಾರೆ.

ಹೋರಾಟ ನಿರಂತರ!
`ಒoದು ವರ್ಷದ ಹಿಂದೆ ನಡೆದ ಹೋರಾಟಕ್ಕೆ ಸರ್ಕಾರ ಇದೀಗ ಪ್ರತಿಕ್ರಿಯೆ ನೀಡಿದೆ. ಇದೊಂದು ಆಶಾದಾಯಕ ಬೆಳವಣಿಗೆಯಾಗಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಪ್ರತಿಕ್ರಿಯಿಸಿದ್ದಾರೆ.
ಆಸ್ಪತ್ರೆ ಹೋರಾಟದ ಬಗ್ಗೆ ಅನಂತಮೂರ್ತಿ ಹೆಗಡೆ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಮಕ್ಕಳ ಆಟಿಕೆ ಹೊತ್ತ ಲಾರಿ ಪಲ್ಟಿ: ಇಬ್ಬರ ಸಾವು.. ಮೂವರಿಗೆ ಗಾಯ!

Next Post

ಅರಣ್ಯವಾಸಿಗಳಿಗೆ ಕಾನೂನು ತರಬೇತಿ!

Next Post

ಅರಣ್ಯವಾಸಿಗಳಿಗೆ ಕಾನೂನು ತರಬೇತಿ!

ಅಕ್ರಮ ಮಣ್ಣು ಸಾಗಾಟ: ಅಧಿಕಾರಿಗಳಿಗೆ ನ್ಯಾಯ.. ಜನರಿಗೆ ಅನ್ಯಾಯ!

ಅಧಿಕಾರಿ-ಜನಪ್ರತಿನಿಧಿ ನಡುವೆ ಚೆಸ್ ಪಂದ್ಯಾವಳಿ: ಈ ಆಟದಲ್ಲಿ ಗೆದ್ದವರಾರು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.