6
  • Latest

ಅಧಿಕಾರಿ-ಜನಪ್ರತಿನಿಧಿ ನಡುವೆ ಚೆಸ್ ಪಂದ್ಯಾವಳಿ: ಈ ಆಟದಲ್ಲಿ ಗೆದ್ದವರಾರು?

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಧಿಕಾರಿ-ಜನಪ್ರತಿನಿಧಿ ನಡುವೆ ಚೆಸ್ ಪಂದ್ಯಾವಳಿ: ಈ ಆಟದಲ್ಲಿ ಗೆದ್ದವರಾರು?

AchyutKumar by AchyutKumar
in ರಾಜ್ಯ, ಸ್ಥಳೀಯ

ಕಾರವಾರ: ಶಾಸಕ ಸತೀಶ್ ಸೈಲ್ ಹಾಗೂ ಜಿ ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದು ನಡುವೆ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಈ ಪಂದ್ಯಾವಳಿಯಲ್ಲಿ ಯಾರೂ ಗೆಲ್ಲಲಿಲ್ಲ.. ಯಾರೂ ಸೋಲಲಿಲ್ಲ. ಅಸಲಿಗೆ ಅವರಿಬ್ಬರು ಚೆಸ್ ಆಟವನ್ನೇ ಆಡಲಿಲ್ಲ. ಬದಲಾಗಿ ಚೆಸ್ ಆಟ ಆಡಿದಂತೆ ನಟಿಸಿ ಫೋಟೋಶೂಟ್ ನಡೆಸಿದರು!

ADVERTISEMENT

ಸೋಮವಾರ ಚಿತ್ತಾಕುಲದಲ್ಲಿ ಸತೀಶ್ ಸೈಲ್ ಚೆಸ್ ಕ್ಲಬ್ ಉದ್ಘಾಟಿಸಿದರು. ಅದಾದ ನಂತರ ಈಶ್ವರ ಕಾಂದು ಅವರ ಎದುರು ಕೂತು ಚೆಸ್ ಆಡಲು ಶುರು ಮಾಡಿದರು. ಕೆಲ ಕಾಯಿಗಳನ್ನು ಅಡ್ಡಾದಿಡ್ಡಿ ಚಲಿಸಿದ ಇಬ್ಬರಿಗೂ ಚೆಸ್ ಆಟದಲ್ಲಿ ಮನಸ್ಸಿರಲಿಲ್ಲ. ಹೀಗಾಗಿ ಆ ಆಟವನ್ನು ಅಲ್ಲಿಯೇ ಮೊಟಕುಗೊಳಿಸಿ ಚೆಸ್ ಆಟದ ಕುರಿತು ಭಾಷಣ ಮಾಡಿ ಕಾರ್ಯಕ್ರಮ ಮುಗಿಸಿದರು!

`ಬಾಲ್ಯದಿಂದಲೇ ಚೆಸ್ ಆಡುವುದರಿಂದ ಮಕ್ಕಳಲ್ಲಿ ಕಲಿಕೆ, ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಮಕ್ಕಳಿಂದ ವಯೋವೃದ್ಧರವರೆಗೂ ಚೆಸ್ ಪಾರ್ಕ್ನ ಸದುಪಯೋಗವನ್ನು ಪಡೆದುಕೊಳ್ಳಬೇಕು’ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. `ಚೆಸ್ ಕೇವಲ ಆಟವಲ್ಲ. ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಗುರಿ ಸಾಧಿಸುವ ಪಾಠವನ್ನು ಅದು ಕಲಿಸುತ್ತದೆ’ ಎಂದರು.

Advertisement. Scroll to continue reading.

ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ `ಚೆಸ್ ಪಾರ್ಕ್ನ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಚೆಸ್ ಕೇವಲ ಆಟವಲ್ಲ. ಯಾವ ಹಂತದಲ್ಲಿ ಯಾವ ಕಾಯಿ ಮುನ್ನೆಡಸಬೇಕು? ಯಾವ ರೀತಿ ಆಡಬೇಕು ಎನ್ನುವುದರ ಯೋಜನೆ ರೂಪಿಸಿ ಆಡುವ ಆಟವಾಗಿದೆ. ಈ ಆಟ ಜೀವನಕ್ಕೂ ಅನ್ವಯವಾಗುತ್ತದೆ’ ಎಂದರು. `ಜೀವನದಲ್ಲಿ ಯಾವ ಸಮಯದಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಈ ಆಟ ಕಲಿಸುತ್ತದೆ. ಈ ಆಟದಿಂದ ಬುದ್ದಿಮತ್ತೆ ಹೆಚ್ಚಾಗಿ ಜವಾಬ್ದಾರಿಯುತ ಮನುಷ್ಯನಾಗಲು ಸಾಧ್ಯ’ ಎಂದರು.

Advertisement. Scroll to continue reading.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಪಂಚಾಯತದ ನಿವೃತ್ತ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮಶೇಖರ ಮೆಸ್ತಾ, ಕಾರ್ಯನಿರ್ವಹಣಾಧಿಕಾರಿ ವೀರನಗೌಡ, ಚಿತ್ತಾಕುಲ ಗ್ರಾಮ ಪಂಚಾಯತ ಅಧ್ಯಕ್ಷ ನಿತೀನ ಬಾಂದೇಕರ, ಉಪಾಧ್ಯಕ್ಷ ಸೂರಜ ದೇಸಾಯಿ ಇದ್ದರು.

Previous Post

ಅಕ್ರಮ ಮಣ್ಣು ಸಾಗಾಟ: ಅಧಿಕಾರಿಗಳಿಗೆ ನ್ಯಾಯ.. ಜನರಿಗೆ ಅನ್ಯಾಯ!

Next Post

ಭೂಮಿ ಅಭಿವೃದ್ಧಿಗೆ ಅನಗತ್ಯ ಅಡ್ಡಿ: ಪೊಲೀಸ್ ದೂರು!

Next Post

ಭೂಮಿ ಅಭಿವೃದ್ಧಿಗೆ ಅನಗತ್ಯ ಅಡ್ಡಿ: ಪೊಲೀಸ್ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ