ಕಾರವಾರ: `ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಅನಧಿಕೃತ ಹೋಂ ಸ್ಟೇ ಕುರಿತು ವಾರದ ಒಳಗೆ ಸಮಗ್ರ ವರದಿ ಸಲ್ಲಿಸಿ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಚಟುವಟಿಕೆಗಳ ಕುರಿತ ಸಭೆಯಲ್ಲಿ ಮಾತನಾಡಿದ ಅವರು `ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇ ಕುರಿತು ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತದಿAದ ಮಾಹಿತಿ ಪಡೆಯಬೇಕು. ಅನಧಿಕೃತ ಹೋಂ ಸ್ಟೇ’ಗಳಿಗೆ ಅಧಿಕೃತ ಅನುಮತಿ ಪಡೆಯಲು ಅರಿವು ಮೂಡಿಸಬೇಕು’ ಎಂದು ಸೂಚಿಸಿದರು.
`ಎಲ್ಲಾ ಕಡಲತೀರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಅಗತ್ಯವಿರುವ ಕ್ರಮ ಜರುಗಿಸಬೇಕು. ಅಗತ್ಯ ಕಾಮಗಾರಿ ಮತ್ತು ಸಾಧನ ಖರೀದಿಗೆ ಟೆಂಡರ್ ಕರೆಯಬೇಕು. ಜಿಲ್ಲೆಯ ಪ್ರವಾಸ ತಾಣಗಳ ಕುರಿತಂತೆ ಪ್ರವಾಸಿ ತಾಣಗಳು ಕುರಿತ ಉತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ಒಳಗೊಂಡ ಕಾಫೀ ಟೇಬಲ್ ಬುಕ್ ಮುದ್ರಿಸಬೇಕು’ ಎಂದು ಸೂಚಿಸಿದರು.
ಪ್ರವಾಸಿ ಬೋಟಿಂಗ್ ಗಳಿಗೆ ಅನುಮತಿ ನೀಡಲು ಅನುಸರಿಸÀಬೇಕಾದ ಕ್ರಮಗಳ ಬಗ್ಗೆ ಹಾಗೂ ರವೀಂದ್ರನಾಥ್ ಠಾಗೂರು ಕಡಲ ತೀರದ ಅಭಿವೃಧ್ದಿ ಮತ್ತು ಸ್ವಚ್ಛತೆ ಕಾಪಾಡುವ ಬಗ್ಗೆ ಚರ್ಚೆ ನಡೆಯಿತು. ಕಾರವಾರದ ಬೀಚ್ನಲ್ಲಿರುವ ಟುಪಲೋವ್ ಯುದ್ದ ವಿಮಾನವನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸುವ ಬಗ್ಗೆ ಚರ್ಚಿಸಿದರು. ಈ ತಿಂಗಳ ಅಂತ್ಯದೊಳಗೆ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು.
ಈ ಸಭೆಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ವಿಭಾಗಾಧಿಕಾರಿ ಕನಿಷ್ಕ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್ ಇದ್ದರು.




