ಸಿದ್ದಾಪುರ: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿದ ವ್ಯಕ್ತಿಯೊಬ್ಬ ಅಯ್ಯಪ್ಪ ಸ್ವಾಮಿ ಜಾತ್ರೆ ನಡೆಯುವ ಪ್ರದೇಶಕ್ಕೆ ಕಾರು ನುಗ್ಗಿಸಿದ್ದು ಅಲ್ಲಿ ನಡೆದ ಅಪಘಾತದಿಂದ ಮಹಿಳೆಯೊಬ್ಬರು ಸಾವನ್ನಪಿದ್ದಾರೆ. ಇದರ ಜೊತೆ 9 ಭಕ್ತರು ಗಾಯಗೊಂಡಿದ್ದಾರೆ.
ಮಂಗಳವಾರ ಸಿದ್ದಾಪುರದ ರವೀಂದ್ರ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಇಲ್ಲಿ ನೆರೆದಿದ್ದರು. ಈ ವೇಳೆ ಮದ್ಯ ಸೇವಿಸಿ ಕಾರು ಚಲಾಯಿಸಿದ ರೋಷನ್ ಎಂಬಾತ ಜನ ಸೇರಿದ ಪ್ರದೇಶಕ್ಕೆ ಕಾರು ನುಗ್ಗಿಸಿ ಕಂಡ ಕಂಡವರಿಗೆ ಡಿಕ್ಕಿ ಹೊಡೆದಿದ್ದಾನೆ.
ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಈವರೆಗಿನ ಮಾಹಿತಿ ಪ್ರಕಾರ 9 ಜನ ಗಾಯಗೊಂಡಿದ್ದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.




