6
  • Latest

ಮಾಜಿ ಸಚಿವೆಯ ಯಕ್ಷ ಪ್ರವೇಶ: ಮರೆಯದಿರಿ.. ಮರೆತು ನಿರಾಶರಾಗದಿರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಮಾಜಿ ಸಚಿವೆಯ ಯಕ್ಷ ಪ್ರವೇಶ: ಮರೆಯದಿರಿ.. ಮರೆತು ನಿರಾಶರಾಗದಿರಿ!

AchyutKumar by AchyutKumar
in ಸಿನೆಮಾ

125ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿರುವ ಮಾಜಿ ಸಚಿವ ಉಮಾಶ್ರಿ ಅವರು ಇದೇ ಮೊದಲ ಬಾರಿಗೆ ಯಕ್ಷಗಾನದಲ್ಲಿ ಪಾತ್ರ ನಿಭಾಯಿಸಲಿದ್ದಾರೆ. ಶುಕ್ರವಾರ ಸಂಜೆ 9.30ಕ್ಕೆ ಹೊನ್ನಾವರದ ಪ್ರಭಾತನಗರದಲ್ಲಿರುವ ಸೆಂಟ್ ಅಂಥೋನಿ ಮೈದಾನದಲ್ಲಿ ಅವರು ಯಕ್ಷನೃತ್ಯ ಪ್ರದರ್ಶಿಸಲಿದ್ದಾರೆ.

ADVERTISEMENT

ಬಾಲ್ಯದಲ್ಲಿಯೇ ರಂಗಭೂಮಿ ಪ್ರವೇಶಿಸಿದ ಉಮಾಶ್ರೀ ಅವರು ಸಾಕಷ್ಟು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರರಂಗದಲ್ಲಿಯೂ ಹಾಸ್ಯ ಕಲಾವಿದರಾಗಿ ಅವರು ಪ್ರಸಿದ್ಧಿ ಪಡೆದಿದ್ದಾರೆ. ಇದರೊಂದಿಗೆ ಪೋಷಕ ಪಾತ್ರಗಳನ್ನು ಸಹ ಅಚ್ಚುಕಟ್ಟಾಗಿ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ. ತಮ್ಮ ಸುದೀರ್ಘ ಕಲಾರಂಗದಲ್ಲಿ ಅವರು ಈವರೆಗೂ ಯಕ್ಷಗಾನದ ವೇಷ ತೊಟ್ಟಿರಲಿಲ್ಲ. ಆದರೆ, ಇದೀಗ ತಮ್ಮ 67ನೇ ವಯಸ್ಸಿನಲ್ಲಿ ಉಮಾಶ್ರೀ ಅವರು ಯಕ್ಷಗಾನ ಪ್ರವೇಶ ಮಾಡುತ್ತಿದ್ದಾರೆ.

ಸ್ವತಃ ಕಲಾವಿದರಾಗಿ ಕಲಾವಿದರ ಬಗ್ಗೆ ಅಪಾರ ಅಭಿಮಾನಹೊಂದಿದ್ದ ಉಮಾಶ್ರೀ ಅವರು ಒಮ್ಮೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದರು. ಆ ಅವಧಿಯಲ್ಲಿ ಕಲಾವಿದರ ಅನೇಕ ಸಮಸ್ಯೆಗಳಿಗೆ ಅವರು ಪರಿಹಾರ ಒದಗಿಸಿದ್ದರು. ಸಚಿವರಾಗಿದ್ದ ಅವಧಿಯಲ್ಲಿ ರಾಜ್ಯದ ಎಲ್ಲಾ ಕಡೆ ಸಂಚರಿಸಿ ಕಲಾವಿದರ ಅಳಲು ಆಲಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕಲಾವಿದರ ಬ್ಯಾಂಕ್ ಖಾತೆಗೆ ನೇರವಾಗಿ ಗೌರವಧನ ವರ್ಗಾವಣೆ ಆಗುವಂತೆ ಮಾಡುವಲ್ಲಿ ಉಮಾಶ್ರೀ ಅವರ ಪಾತ್ರವಿದೆ.

Advertisement. Scroll to continue reading.

ಸಚಿವರಾಗಿ ಅಧಿಕಾರ ಮುಗಿದ ನಂತರ ಉಮಾಶ್ರೀ ಅವರು ರಾಜಕೀಯವಾಗಿ ಸಕ್ರೀಯವಾಗಿರಲಿಲ್ಲ. ಅಭಿನಯ ಚಟುವಟಿಕೆಗಳಲ್ಲಿ ಸಹ ಅವರು ಹೆಚ್ಚಿಗೆ ಭಾಗವಹಿಸುತ್ತಿರಲಿಲ್ಲ. ಪ್ರಸ್ತುತ ಪೆರ್ಡೂರಿನ ಅನಂತಪದ್ಮನಾಭ ಯಕ್ಷಗಾನ ಮಂಡಳಿಯವರು ಉಮಾಶ್ರೀ ಅವರನ್ನು ಯಕ್ಷ ವೇದಿಕೆಗೆ ಆಮಂತ್ರಿಸಿದ್ದಾರೆ. ಇಲ್ಲಿ ನಡೆಯುವ `ರಾಮ ಪಟ್ಟಾಭಿಷೇಕ – ಮಾಯಮೃಗವತಿ’ ಯಕ್ಷಗಾನದಲ್ಲಿ ಉಮಾಶ್ರೀ ಅವರು ಮಂಥರೆಯ ಪಾತ್ರ ನಿಭಾಯಿಸಲಿದ್ದಾರೆ. ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಕಾರ್ತಿಕ್ ಚಿಟ್ಟಾಣಿ, ಉದಯ್ ಹೆಗಡೆ, ಅಪ್ಟಣ್ಣ ಗೌಡ ಮಾಗೋಡು ಇನ್ನಿತರರು ಈ ಯಕ್ಷಗಾನದಲ್ಲಿ ಭಾಗವಹಿಸಲಿದ್ದಾರೆ.

Advertisement. Scroll to continue reading.
Previous Post

ಗಾಂಜಾ ಗಿರಾಕಿ ವಿರುದ್ಧ ಮತ್ತೊಂದು ದೂರು!

Next Post

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

Next Post

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ