6
  • Latest

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, August 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

AchyutKumar by AchyutKumar
in ಸ್ಥಳೀಯ

ಮೂಲಭೂತ ಸೌಕರ್ಯ ಕಲ್ಪಿಸುವಂತೆ ಗುಡ್ಡಳ್ಳಿ ಜನ ನೀಡಿದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ  ಲಕ್ಷ್ಮೀಪ್ರಿಯಾ ದಿಢೀರ್ ಆಗಿ ಗುಡ್ಡ ಏರಿ ಆ ಹಳ್ಳಿಗೆ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಆಗಮನದಿಂದ ಸಂತಸಗೊ0ಡ ಊರಿನ ಜನ ಅದ್ಧೂರಿಯಾಗಿ ಅವರನ್ನು ಬರಮಾಡಿಕೊಂಡಿದ್ದು, ಶಾಲು ಹೊದೆಸಿ ಗೌರವಿಸಿದರು.

ಕಾರವಾರ ನಗರಸಭೆ ವ್ಯಾಪ್ತಿಗೆ ಒಳಪಡುವ ಗುಡ್ಡಳ್ಳಿಗೆ ಈವರೆಗೂ ಮೂಲಭೂತ ಸೌಕರ್ಯವಿಲ್ಲ. ಅಲ್ಲಿನ ಜನ ಸಮಯಕ್ಕೆ ಸರಿಯಾಗಿ ನಗರಸಭೆಗೆ ತೆರಿಗೆ ಪಾವತಿಸುತ್ತಿದ್ದರೂ ಅವರಿಗೆ ನಗರದ ಯಾವ ಸೌಲಭ್ಯಗಳು ಸಿಗುತ್ತಿಲ್ಲ. ಊರಿಗೆ ತೆರಳಲು ರಸ್ತೆ ಸಂಪರ್ಕ ಸಹ ಸರಿಯಾಗಿಲ್ಲ. ಈ ಹಿನ್ನಲೆ ಕಳೆದ ಹಲವು ವರ್ಷಗಳಿಂದ ಗುಡ್ಡಳ್ಳಿ ಭಾಗದವರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ, ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ.

ಉತ್ತರ ಕನ್ನಡ ಜಿಲ್ಲೆಗೆ ಹೊಸದಾಗಿ ಯಾವ ಅಧಿಕಾರಿ ಬಂದರೂ ಗುಡ್ಡಳ್ಳಿ ಭಾಗದವರಿಗೆ ಹೊಸ ಆಶಾಭಾವನೆ ಮೂಡುತ್ತದೆ. ಹೀಗಾಗಿ `ನಮ್ಮೂರಿನ ಸಮಸ್ಯೆ ಬಗೆಹರಿಸಿ’ ಎಂದು ಆ ಭಾಗದವರು ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತಾರೆ. ಊರಿನ ಸಮಸ್ಯೆಗಳ ಬಗ್ಗೆ ವಿವರಿಸುತ್ತಾರೆ. ಅದರಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರನ್ನು ಗುಡ್ಡಳ್ಳಿಯ ಜನ ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದರು. ಊರಿನವರ ಸಮಸ್ಯೆ ಆಲಿಸಿದ ಲಕ್ಷ್ಮೀಪ್ರಿಯಾ ಶುಕ್ರವಾರ ದಿಢೀರ್ ಆಗಿ ಆ ಊರಿಗೆ ತೆರಳಿದರು!

ಕಾರವಾರದಿಂದ 3 ಕಿಮೀ ದೂರದಲ್ಲಿದ್ದರೂ ಇಲ್ಲಿ ನಕುಲ್ ಅವರನ್ನು ಹೊರತುಪಡಸಿ ಯಾವ ಜಿಲ್ಲಾಧಿಕಾರಿಗಳು ಭೇಟಿ ನೀಡಿರಲಿಲ್ಲ. ಪ್ರಸ್ತುತ ಲಕ್ಷ್ಮೀಪ್ರಿಯಾ ಅವರು ಗುಡ್ಡಳ್ಳಿಗೆ ಭೇಟಿ ನೀಡಿದ ಎರಡನೇ ಜಿಲ್ಲಾಧಿಕಾರಿ ಹಾಗೂ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿದ್ದಾರೆ. ಈ ಹಿನ್ನಲೆ ಆ ಭಾಗದ ಜನ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಶಾಲು ಹೊದೆಸಿ ಗೌರವಿಸಿದರು. ಅದಾದ ನಂತರ ಊರಿನ ಮುಖ್ಯ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ, ಪರಿಹಾರ ಒದಗಿಸುವಂತೆ ಕೇಳಿಕೊಂಡರು.

ShareSendTweetShare
Previous Post

ಗಾಂಜಾ ಗಿರಾಕಿ ವಿರುದ್ಧ ಮತ್ತೊಂದು ದೂರು!

Next Post

ಸಿದ್ದರಾಮಯ್ಯ ಅಲ್ಲ.. ಆತ ಸೊಕ್ಕುರಾಮಯ್ಯ!

Next Post

ಸಿದ್ದರಾಮಯ್ಯ ಅಲ್ಲ.. ಆತ ಸೊಕ್ಕುರಾಮಯ್ಯ!

ಅಸ್ತಿತ್ವವಿಲ್ಲದ ಸಮಿತಿಯಿಂದ ಅತಿಕ್ರಮಣದಾರರಿಗೆ ನೋಟಿಸ್: ಜ 23ಕ್ಕೆ ಒಕ್ಕೂರಲಿನಿಂದ ಆಕ್ಷೇಪಣೆ ನಿರ್ಧಾರ

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.