6
  • Latest

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

AchyutKumar by AchyutKumar
in ಸ್ಥಳೀಯ

ಮೂಲಭೂತ ಸೌಕರ್ಯ ಕಲ್ಪಿಸುವಂತೆ ಗುಡ್ಡಳ್ಳಿ ಜನ ನೀಡಿದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ  ಲಕ್ಷ್ಮೀಪ್ರಿಯಾ ದಿಢೀರ್ ಆಗಿ ಗುಡ್ಡ ಏರಿ ಆ ಹಳ್ಳಿಗೆ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಆಗಮನದಿಂದ ಸಂತಸಗೊ0ಡ ಊರಿನ ಜನ ಅದ್ಧೂರಿಯಾಗಿ ಅವರನ್ನು ಬರಮಾಡಿಕೊಂಡಿದ್ದು, ಶಾಲು ಹೊದೆಸಿ ಗೌರವಿಸಿದರು.

ADVERTISEMENT

ಕಾರವಾರ ನಗರಸಭೆ ವ್ಯಾಪ್ತಿಗೆ ಒಳಪಡುವ ಗುಡ್ಡಳ್ಳಿಗೆ ಈವರೆಗೂ ಮೂಲಭೂತ ಸೌಕರ್ಯವಿಲ್ಲ. ಅಲ್ಲಿನ ಜನ ಸಮಯಕ್ಕೆ ಸರಿಯಾಗಿ ನಗರಸಭೆಗೆ ತೆರಿಗೆ ಪಾವತಿಸುತ್ತಿದ್ದರೂ ಅವರಿಗೆ ನಗರದ ಯಾವ ಸೌಲಭ್ಯಗಳು ಸಿಗುತ್ತಿಲ್ಲ. ಊರಿಗೆ ತೆರಳಲು ರಸ್ತೆ ಸಂಪರ್ಕ ಸಹ ಸರಿಯಾಗಿಲ್ಲ. ಈ ಹಿನ್ನಲೆ ಕಳೆದ ಹಲವು ವರ್ಷಗಳಿಂದ ಗುಡ್ಡಳ್ಳಿ ಭಾಗದವರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ, ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ.

ಉತ್ತರ ಕನ್ನಡ ಜಿಲ್ಲೆಗೆ ಹೊಸದಾಗಿ ಯಾವ ಅಧಿಕಾರಿ ಬಂದರೂ ಗುಡ್ಡಳ್ಳಿ ಭಾಗದವರಿಗೆ ಹೊಸ ಆಶಾಭಾವನೆ ಮೂಡುತ್ತದೆ. ಹೀಗಾಗಿ `ನಮ್ಮೂರಿನ ಸಮಸ್ಯೆ ಬಗೆಹರಿಸಿ’ ಎಂದು ಆ ಭಾಗದವರು ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತಾರೆ. ಊರಿನ ಸಮಸ್ಯೆಗಳ ಬಗ್ಗೆ ವಿವರಿಸುತ್ತಾರೆ. ಅದರಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರನ್ನು ಗುಡ್ಡಳ್ಳಿಯ ಜನ ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದರು. ಊರಿನವರ ಸಮಸ್ಯೆ ಆಲಿಸಿದ ಲಕ್ಷ್ಮೀಪ್ರಿಯಾ ಶುಕ್ರವಾರ ದಿಢೀರ್ ಆಗಿ ಆ ಊರಿಗೆ ತೆರಳಿದರು!

Advertisement. Scroll to continue reading.

ಕಾರವಾರದಿಂದ 3 ಕಿಮೀ ದೂರದಲ್ಲಿದ್ದರೂ ಇಲ್ಲಿ ನಕುಲ್ ಅವರನ್ನು ಹೊರತುಪಡಸಿ ಯಾವ ಜಿಲ್ಲಾಧಿಕಾರಿಗಳು ಭೇಟಿ ನೀಡಿರಲಿಲ್ಲ. ಪ್ರಸ್ತುತ ಲಕ್ಷ್ಮೀಪ್ರಿಯಾ ಅವರು ಗುಡ್ಡಳ್ಳಿಗೆ ಭೇಟಿ ನೀಡಿದ ಎರಡನೇ ಜಿಲ್ಲಾಧಿಕಾರಿ ಹಾಗೂ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿದ್ದಾರೆ. ಈ ಹಿನ್ನಲೆ ಆ ಭಾಗದ ಜನ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಶಾಲು ಹೊದೆಸಿ ಗೌರವಿಸಿದರು. ಅದಾದ ನಂತರ ಊರಿನ ಮುಖ್ಯ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ, ಪರಿಹಾರ ಒದಗಿಸುವಂತೆ ಕೇಳಿಕೊಂಡರು.

Advertisement. Scroll to continue reading.
Previous Post

ಮಾಜಿ ಸಚಿವೆಯ ಯಕ್ಷ ಪ್ರವೇಶ: ಮರೆಯದಿರಿ.. ಮರೆತು ನಿರಾಶರಾಗದಿರಿ!

Next Post

ಸಿದ್ದರಾಮಯ್ಯ ಅಲ್ಲ.. ಆತ ಸೊಕ್ಕುರಾಮಯ್ಯ!

Next Post

ಸಿದ್ದರಾಮಯ್ಯ ಅಲ್ಲ.. ಆತ ಸೊಕ್ಕುರಾಮಯ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ