6
  • Latest

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

AchyutKumar by AchyutKumar
in ರಾಜಕೀಯ

ಗ್ರಾಮ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಸಿಕ್ಕಿದ ಖುಷಿಗೆ ಪಟಾಕಿ ಹೊಡೆದ ಬಿಜೆಪಿಗರು ನಂತರ ಪಟಾಕಿಯಿಂದಾದ ಮಾಲಿನ್ಯವನ್ನು ಗುಡಿಸಿ ಸ್ವಚ್ಛಗೊಳಿಸಿದರು.!

ADVERTISEMENT

ಯಲ್ಲಾಪುರ ತಾಲೂಕಿನ ಮದನೂರು ಗ್ರಾಮ ಪಂಚಾಯತಗೆ ಕೆಲ ದಿನಗಳ ಹಿಂದೆ ಅವಿಶ್ವಾಸ ಮಂಡನೆ ನಡೆದಿತ್ತು. ಶುಕ್ರವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದರು. ಅದರ ಪ್ರಕಾರ ಮದನೂರು ಗ್ರಾ ಪಂ ಅಧ್ಯಕ್ಷರಾಗಿ ವಿಠ್ಠು ಶಳಕೆ ಹಾಗೂ ಉಪಾಧ್ಯಕ್ಷರಾಗಿ ಜನ್ನಬಾಯಿ ಬರಾಗಡೆ ಆಯ್ಕೆಯಾದರು. ಈ ಖುಷಿಯನ್ನು ಹಂಚಿಕೊಳ್ಳುವುದಕ್ಕಾಗಿ ಪೊಲೀಸ್ ಠಾಣೆ ಎದುರು ಬಿಜೆಪಿಗರು ಶುಕ್ರವಾರ ಮಧ್ಯಾಹ್ನ ಪಟಾಕಿ ಹೊಡೆದು ಸಂಭ್ರಮಿಸಿದರು. ಅದಾದ ನಂತರ ಆ ಜಾಗವನ್ನು ಗುಡಿಸಿ ತ್ಯಾಜ್ಯ ಆರಿಸಿದರು.

`ಮದನೂರು ಗ್ರಾಮ ಪಂಚಾಯತ ಹಿಂದುತ್ವದ ನೆಲ. ಸಾಕಷ್ಟು ಆಮೀಷ, ಒತ್ತಡ, ಬೆದರಿಕೆ ಒಡ್ಡಿದರೂ ಇಲ್ಲಿನ ಕಾರ್ಯಕರ್ತರು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿಲ್ಲ’ ಎಂದು ಬಿಜೆಪಿ ರಾಜ್ಯವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು. `ಬಿಜೆಪಿ ಪಕ್ಷದಿಂದ ಆಯ್ಕೆಯಾದವರು ಇದೀಗ ಬಿಜೆಪಿಗರನ್ನು ಕೆಡೆಗಣಿಸಿದ್ದರಿಂದ ಮೂರು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರು ನೋವು ಅನುಭವಿಸಿದ್ದರು. ಮದನೂರು ಗ್ರಾಮ ಪಂಚಾಯತವನ್ನು ತಕ್ಕೆಗೆ ಪಡೆಯುವ ಮೂಲಕ ಪಕ್ಷದ್ರೋಹ ಎಸಗಿದವರಿಗೆ ಕಾರ್ಯಕರ್ತರು ಪಾಠ ಕಲಿಸಿದ್ದಾರೆ’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದರು.

Advertisement. Scroll to continue reading.

`ವಿಠ್ಠು ಶಳಕೆ ಅವರ ಮೇಲೆ ಈ ಹಿಂದೆ ಹಲ್ಲೆ ನಡೆದಿತ್ತು. ಅದನ್ನು ಮೆಟ್ಟಿನಿಂತು ಅವರು ಇದೀಗ ಗ್ರಾ ಪಂ ಅಧ್ಯಕ್ಷರಾಗಿದ್ದಾರೆ. ಗ್ರಾಮ ಪಂಚಾಯತದ ೧೩ ಸದಸ್ಯರಲ್ಲಿ ೧೦ ಸದಸ್ಯರು ಬಿಜೆಪಿಗರಾಗಿದ್ದು, ಎಲ್ಲಾ ಸವಾಲುಗಳನ್ನು ಸ್ವೀಕರಿಸಲು ಸಿದ್ಧ’ ಎಂದು ವಿಠ್ಠಲ ಪಾಂಡ್ರಮೀಸೆ ಹೇಳಿದರು. `ಜಾತಿ ಜಾತಿ ನಡುವೆ ದ್ವೇಷ ತರುವ ಪ್ರಯತ್ನ ನಡೆದರೂ ಅದನ್ನು ಮೀರಿ ಕಾರ್ಯಕರ್ತರು ಬಿಜೆಪಿ ಬೆಂಬಲಿಸಿದ್ದಾರೆ’ ಎಂದವರು ವಿವರಿಸಿದರು. ಪಟಾಕಿ ಹೊಡೆದು ಸಂಭ್ರಮಿಸಿದ ನಂತರ ಹರಿಪ್ರಕಾಶ ಕೋಣೆಮನೆ, ಉಮೇಶ ಭಾಗ್ವತ, ರವಿ ದೇವಾಡಿಗ ಸೇರಿ ಆ ಪ್ರದೇಶ ಗುಡಿಸಿದರು.

Advertisement. Scroll to continue reading.
Previous Post

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

Next Post

ನೆರೆ ಜಿಲ್ಲೆ ಪೊಲೀಸರಿಗೆ ನೆರವಾದ 112!

Next Post

ನೆರೆ ಜಿಲ್ಲೆ ಪೊಲೀಸರಿಗೆ ನೆರವಾದ 112!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ