6
  • Latest

ಸ್ಥಳೀಯ ಸಂಸ್ಥೆಗೆ ಸೋಮಾರಿ ಅಧಿಕಾರಿ: ಅಸಡ್ಡೆಯ ನೀತಿಗೆ ಡೀಸಿ ಗರಂ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಥಳೀಯ ಸಂಸ್ಥೆಗೆ ಸೋಮಾರಿ ಅಧಿಕಾರಿ: ಅಸಡ್ಡೆಯ ನೀತಿಗೆ ಡೀಸಿ ಗರಂ!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ವಿವಿಧ ಪುರಸಭೆ, ಪಟ್ಟಣ ಪಂಚಾಯತ ಹಾಗೂ ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರ ಬಿಲ್ ಬಾಕಿ ಪಾವತಿ, ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗೆ ತಡೆ ಸೇರಿ ವಿವಿಧ ವಿಷಯಗಳ ಕುರಿತು ಗರಂ ಆಗಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಹಲವು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಅನುಮೋದಿತ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

`ಜಿಲ್ಲೆಯಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿವೆ. ಅನುಮೋದನೆ ನೀಡಿದ ನಂತರವು ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದರು. ಫೆಬ್ರವರಿ ಮೊದಲನೇ ವಾರದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಇನ್ನೂ `ಕಾಮಗಾರಿಗಳು ಪೂರ್ಣಗೊಂಡ ಕೂಡಲೇ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಕು’ ಎಂದು ಸೂಚಿಸಿದರು. `ನಗರ ಸ್ಥಳೀಯ ಸಂಸ್ಥೆಗಳು ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡದೇ ಇರುವುದರಿಂದ ಆರ್ಥಿಕ ಪ್ರಗತಿ ಕುಂಠಿತವಾಗಿದೆ’ ಎಂದವರು ಹೇಳಿದರು. 15ನೇ ಹಣಕಾಸು ಯೋಜನೆಯಡಿ ಬಾಕಿ ಉಳಿದಿರುವ 17 ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಶೇ 100ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸುವಂತೆ ಸೂಚಿಸಿದರು. `ಯಾವ ಅಧಿಕಾರಿ ಕೆಲಸ ಮಾಡುತ್ತಿಲ್ಲವೋ ಆ ಅಧಿಕಾರಿಗೆ ನೋಟಿಸ್ ನೀಡಿ’ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್ ಅವರಿಗೆ ನಿರ್ದೇಶನ ನೀಡಿದರು.

`ನಗರಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ 2 ಲಕ್ಷದವರೆಗೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲು ಅವಕಾಶವಿದ್ದು, 2 ಲಕ್ಷದೊಳಗಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಎಲ್ಲಾ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಕಾರ್ಯಪ್ರರ್ವತರಾಗಬೇಕು’ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್ ಹೇಳಿದರು. ಈ ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಕೆ ರವಿಕುಮಾರ, ಸಹಾಯಕ ಕಾರ್ಯಪಾಲಕ ಅಭಿಯಂತರ ಭಾಸ್ಕರ ಗೌಡ ಇತರರು ಇದ್ದರು.

ShareSendTweetShare
Previous Post

ಗುಡ್ಡಕ್ಕೆ ಗುದ್ದಿದ ಕಾರು: ಅಪಾಯದಲ್ಲಿದ್ದವರನ್ನು ಆಸ್ಪತ್ರೆಗೆ ಕಳುಹಿಸಿದ ಯುವಕ!

Next Post

ಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಭಿನ್ನಮತ: ನಾಯಕರ ನಿಲುವಿಗೆ ಕಾರ್ಯಕರ್ತರ ಅಸಮಧಾನ!

Next Post

ಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಭಿನ್ನಮತ: ನಾಯಕರ ನಿಲುವಿಗೆ ಕಾರ್ಯಕರ್ತರ ಅಸಮಧಾನ!

ಸೇವಾಗುಣದ ಆಪತ್ಬಾಂದವನಿಗೆ ಸನ್ಮಾನ!

ಚಲಿಸುವ ರೈಲಿಗೆ ತಲೆ ಕೊಟ್ಟ ಅಪರಿಚಿತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.