6
  • Latest

ಉತ್ತರ ಕನ್ನಡ | ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಉತ್ತರ ಕನ್ನಡ | ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ!

ಕೃಷಿಕರ ಸಮಸ್ಯೆಗೆ ಧ್ವನಿಯಾದ ರೈತಮೋರ್ಚಾ | ಅಡಿಕೆ ವಿಮೆ ಪರಿಹಾರಕ್ಕೆ ಆಗ್ರಹ

AchyutKumar by AchyutKumar
January 22, 2025
in ರಾಜಕೀಯ
advt advt advt
ADVERTISEMENT

ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬುಧವಾರ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಂಕಾಳು ವೈದ್ಯರ ಫೋಟೋದ ಜೊತೆ `ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ’ ಎಂಬ ನಾಮಫಲಕಗಳು ಕಾಣಿಸಿದವು.

ಬಿಜೆಪಿ ರೈತಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ ಹಾಗೂ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಮುಂದಾಳತ್ವದಲ್ಲಿ ಯಲ್ಲಾಪುರದಲ್ಲಿ ಭಾರೀ ಪ್ರಮಾಣದಲ್ಲಿ ಬಿಜೆಪಿಗರು ಪ್ರತಿಭಟಿಸಿದರು. ಅಡಿಕೆ ಬೆಳೆಗಾರರಿಗೆ ವಿಮಾ ಪರಿಹಾರದಲ್ಲಿನ ಅನ್ಯಾಯ, ರೈತರ ಮೇಲೆ ದಬ್ಬಾಳಿಕೆ, ಕೇಂದ್ರದ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ತಾರತಮ್ಯ, ಕಬ್ಬು, ಜೋಳ, ಹತ್ತಿ ಸೇರಿ ವಿವಿಧ ಬೆಳೆ ಬೆಳೆಯುವವರಿಗೆ ಸೌಲಭ್ಯ ಇಲ್ಲದಿರುವಿಕೆಯನ್ನು ಬಿಜೆಪಿಗರು ಖಂಡಿಸಿದರು.

ADVERTISEMENT
ADVERTISEMENT

ಚಾಪೆ ಹಾಸಿ ಮಲಗಿದ ಪ್ರತಿಭಟನಾಕಾರರು!
ರೈತರ ಸಮಸ್ಯೆಗಳ ಬಗ್ಗೆ ಭಾಷಣ ಮಾಡಿದ ನಾಯಕರು ಸರ್ಕಾರದ ಮನಪರಿವರ್ತನೆಗಾಗಿ ಮನವಿ ಸಲ್ಲಿಸಲು ಮುಂದಾಗಿದ್ದರು. ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರ್ ಕಚೇರಿಗೆ ಬಂದಾಗ ಅಲ್ಲಿ ಮನವಿ ಸ್ವೀಕರಿಸಲು ಅಧಿಕಾರಿಗಳೇ ಇರಲಿಲ್ಲ. ಇದರಿಂದ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು. ಕೊನೆಗೆ ತಹಶೀಲ್ದಾರ್ ಕಚೇರಿ ಎದುರೇ ಚಾಪೆ ಹಾಸಿ ಮಲಗಿದರು. ಅಧಿಕಾರಿಗಳು ಬಂದ ನಂತರ ಅವರಿಗೆ ಮನವಿ ಸಲ್ಲಿಸಿ, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುವಂತೆ ಕೋರಿದರು.

Advertisement. Scroll to continue reading.

ಶಾಸಕ ಹೆಬ್ಬಾರ್ ವಿರುದ್ಧ ಗರಂ
ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಲ್ ಟಿ ಪಾಟೀಲ್ ತಮ್ಮ ಭಾಷಣದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ವಾಗ್ದಾಳಿ ನಡೆಸಿದರು. `ಬಿಜೆಪಿಯಿಂದ ಆಯ್ಕೆಯಾಗಿ ಈಗ ಕಾಂಗ್ರೆಸ್ ಹಾದಿ ಹಿಡಿಯದಿರುವ ಶಾಸಕ ಸ್ಥಳೀಯ ಶಾಸಕ ಶಿವರಾಮ್ ಹೆಬ್ಬಾರ್ ನಡೆ ಅವರಿಗೆ ಶೋಭೆಯಲ್ಲ. ಧೈರ್ಯವಿದ್ದರೆ ಅವರು ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ’ ಎಂದು ಸವಾಲು ಹಾಕಿದರು.

Advertisement. Scroll to continue reading.

ಯಾರು? ಏನಂದರು?
ಬಿಜೆಪಿ ರೈತಮೋರ್ಚಾ ರಾಜ್ಯಪ್ರಧಾನ ಕಾರ್ಯದರ್ಶಿ ನವೀನಕುಮಾರ್ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. `ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ನಿದ್ರಾವಸ್ಥೆಯಲ್ಲಿದೆ. ರೈತರು ಸಂಕಷ್ಟದಲ್ಲಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ’ ಎಂದವರು ದೂರಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಮಾತನಾಡಿ `ಅಡಕೆಗೆ ಕೊಳೆರೋಗ ಸೇರಿದಂತೆ ಇನ್ನಿತರ ರೋಗಗಳು ವ್ಯಾಪಕವಾಗಿ ಹರಡಿದ್ದರೂ ಅಧಿಕಾರಿಗಳು ಸರ್ಕಾರಕ್ಕೆ ವರದಿ ಮಾಡಿಲ್ಲ’ ಎಂದು ದೂರಿದರು. ರಾಜ್ಯ ಬಿಜೆಪಿ ಸಹವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿ `ಕಾಂಗ್ರೆಸ್ ಯಾವತ್ತಿಗೂ ಜನವಿರೋಧಿ ಮತ್ತು ದೇಶವಿರೋಧಿ ಸರಕಾರವಾಗಿದೆ’ ಎಂದರು.

ಬಿಜೆಪಿ ಯಲ್ಲಾಪುರ ತಾಲೂಕು ಅಧ್ಯಕ್ಷ ಪ್ರಸಾದ ಹೆಗಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹರ್ತೆಬೈಲ್, ಪ್ರಮುಖರಾದ ಶಿವಾಜಿ ನರಸಾನಿ, ಭಾರತೀಯ ಕಿಸಾನ್ ಸಂಘದ ಶಿವರಾಮ ಗಾಂವ್ಕರ್, ಕೃಷಿಕ ಸಮಾಜದ ಅಧ್ಯಕ್ಷ ನಾರಾಯಣ ಹೆಗಡೆ ಇತರರು ಇದ್ದರು. ಯಲ್ಲಾಪುರ ಬಸ್ ನಿಲ್ದಾಣದಿಂದ ದೇವಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ತಹಶೀಲ್ದಾರ್ ಕಚೇರಿಗೆ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆಗಮಿಸಿ ಪ್ರತಿಭಟನಾಕಾರರ ಅಳಲು ಆಲಿಸಿದರು.

ShareSendTweetShare
ADVERTISEMENT
Previous Post

ಕಾಸಿನ ಆಸೆಗೆ ಹಸು ಕೊಂದ ಪಾಪಿಗಳು: ಮುಗ್ದುಂ ಕಾಲೋನಿಯ ಅವರು ಮುಗ್ದರಲ್ಲ!

Next Post

ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!

Next Post
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.