6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಕ್ರಮ ಮರಳುಗಾರಿಗೆ ದೂರಿನ ಅನ್ವಯ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂವರು ಅಧಿಕಾರಿಗಳಿಗೆ ಆ ಭಾಗದ ಇಬ್ಬರು ದಿಗ್ಬಂದನ ಹಾಕಿದ್ದಾರೆ. ಚಪ್ಪಲಿಯಿಂದ ಹೊಡೆಯುವುದಾಗಿ ಬೆದರಿಸಿ ಅಧಿಕಾರಿಗಳ ಕೈ-ಬುಜ ಹಿಡಿದು ಎಳೆದಾಡಿದ್ದಾರೆ. ಇದಲ್ಲದೇ, ಅಕ್ರಮ ಮರಳುಗಾರಿಕೆ ದೂರು ನೀಡಿದ ಕಾರಣ ಸಾರ್ವಜನಿಕರೊಬ್ಬರಿಗೆ 30 ಜನ ಥಳಿಸಿದ್ದಾರೆ!

ಕುಮಟಾದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಿರ್ಜಾನ್ ಎತ್ತಿನಬೈಲಿನ ಮೋಹನ ಪಟಗಾರ ಗಣಿ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆ ಕಾರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಮಂಜುನಾಥ ಶನಿಯಾರ ದೇವಾಡಿಗ ಪರಿಶೀಲನೆಗೆ ತೆರಳಿದ್ದರು. ತಮ್ಮೊಂದಿಗೆ ಗಣಿ ಇಲಾಖೆಯ ಕಿರಿಯ ಅಭಿಯಂತರ ಮಂಜುನಾಥ ತಿಮ್ಮಯ್ಯ ದೇವಾಡಿಗ ಹಾಗೂ ದಿವಿಗಿ ಪಿಡಿಓ ಚರಣ ಮರಾಠಿ ಅವರನ್ನು ಕರೆದೊಯ್ದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಜನವರಿ 10ರಂದು ದಿವಿಗಿ ಗ್ರಾಮದ ಮಣಕೋಣದ ಬಳಿ ಅಕ್ರಮ ಮರಳುಗಾರಿಕೆ ನಡೆಯದಂತೆ ಅಧಿಕಾರಿಗಳೆಲ್ಲರೂ ಸೇರಿ ಟ್ರೆಚ್ ನಿರ್ಮಾಣ ಮಾಡುತ್ತಿದ್ದರು. ಆ ವೇಳೆ ಅಲ್ಲಿಗೆ ಬಂದ ಮೂರುರಿನ ಶ್ರೀಧರ ಹೆಗಡೆ ಹಾಗೂ ವಿನಾಯಕ ದೇಶಭಂಡಾರಿ ಅಧಿಕಾರಿಗಳನ್ನು ತಡೆದರು. `ಟ್ರೆಂಚ್ ಕಾಮಗಾರಿ ಮುಂದುವರೆಸಿದರೆ ಚಪ್ಪಲಿಯಿಂದ ಹೊಡೆಯುವೆ’ ಎಂದು ಬೆದರಿಸಿದರು. ಅಧಿಕಾರಿಗಳನ್ನು ಅಡ್ಡಗಟ್ಟಿ ಅವರ ಕೈ ಹಿಡಿದು ಎಳೆದರು. ಆ ಸ್ಥಳದಿಂದ ಬೇರೆ ಕಡೆ ಹೋಗಿ ತಪ್ಪಿಸಿಕೊಳ್ಳಲು ಆಗದಂತೆ ಅಡ್ಡಗಟ್ಟಿ ನಿಂದಿಸಿದರು. ವಿಡಿಯೋ ಮಾಡುತ್ತಿದ್ದವರ ಮೊಬೈಲನ್ನು ಕಿತ್ತುಕೊಂಡರು. ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಕಾರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಮಂಜುನಾಥ ಶನಿಯಾರ ದೇವಾಡಿಗ ಮೇಲಧಿಕಾರಿಗಳಿಗೆ ದೂರು ನೀಡಿ, ಇದೀಗ ಪೊಲೀಸ್ ಪ್ರಕರಣ ದಾಖಲಿಸಿದರು.

Advertisement. Scroll to continue reading.

ದೂರುದಾರನ ಮನೆ ಮೇಲೆ ದುಷ್ಕರ್ಮಿಗಳ ದಾಳಿ!
ಅಕ್ರಮ ಮರಳುಗಾರಿಕೆಯ ಬಗ್ಗೆ ಮಿರ್ಜಾನ್ ಎತ್ತಿನಬೈಲ್ ಮೋಹನ ಪಟಗಾರ ಗಣಿ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆ 30 ಜನ ಅವರ ಮನೆ ಮೇಲೆ ದಾಳಿ ನಡೆಸಿದರು.
ಮೂರುರಿನ ಶ್ರೀಧರ ಹೆಗಡೆ ಹಾಗೂ ವಿನಾಯಕ ದೇಶಬಂಡಾರಿ ಜೊತೆ ತಂಡ್ರಕುಳಿಯ ಗಣಪತಿ ಅಂಬಿಗ, ದುಂಡಕುಳಿಯ ಗೋಪಾಲ ಗೌಡ, ಮಿರ್ಜಾನಿನ ಜಗದೀಶ ಗಿರಿಯನ್, ಪಾಂಡು ಅಂಬಿಗ, ಸಚೀನ್ ದೇಶಭಂಡಾರಿ, ಸಂದೀಪ ದೇಶಭಂಢಾರಿ, ಭಾಸ್ಕರ್ ಅಂಬಿಗ, ಮತಂಡ್ರಕುಳಿ ರಾಜು ಸೋಮಯ್ಯ ಅಂಬಿಗ, ದಿವಗಿಯ ರಮೇಶ ಅಂಬಿಗ, ದಿವಿಗಿಯ ನಿತ್ಯ ಜಾನಪ್ಪ ಅಂಬಿಗ, ಸಂಗೀತ ದೇಶಬಂಢಾರಿ, ತಂಡ್ರಕುಳಿಯ ಮಂಜು ಅಂಬಿಗ ಈ ದಾಳಿಯಲ್ಲಿದ್ದರು.

`ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸುವ ಬಗ್ಗೆ ಮಾಹಿತಿ ನೀಡಿದರೆ ಹುಷಾರ್’ ಎಂದು ಅವರೆಲ್ಲರೂ ಬೆದರಿಕೆ ಹಾಕಿದರು. ಕೈಯಲ್ಲಿದ್ದ ದೊಣ್ಣೆ, ಕೋಲುಗಳಿಂದ ಮೋಹನ ಪಟಗಾರರ ಮೇಲೆ ದಾಳಿ ಮಾಡಿದರು. ಅಲ್ಲಿದ್ದ ನಾಲ್ವರು `ಇಲ್ಲಿಗೆ ನಿನ್ನನ್ನು ಬಿಡುವುದಿಲ್ಲ’ ಎಂದು ಬೆದರಿಸಿ ಅಲ್ಲಿಂದ ಪರಾರಿಯಾದರು. `ಮತ್ತೊಮ್ಮೆ ದೂರು ನೀಡಬೇಡ’ ಎಂದು ಕೆಲವರು ಎಚ್ಚರಿಕೆ ನೀಡಿದರು. ಇದರಿಂದ ಬೆದರಿದ ಮೋಹನ ಪಟಗಾರ ಇದೀಗ ಪೊಲೀಸ್ ದೂರು ನೀಡಿ ರಕ್ಷಣೆ ಕೋರಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ!

Next Post

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

Next Post

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

ಅಪಘಾತ ಸ್ಥಳಕ್ಕೆ ಅಧಿಕಾರಿಗಳ ದೌಡು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.