6
  • Latest

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

AchyutKumar by AchyutKumar
in ದೇಶ - ವಿದೇಶ, ವಿಡಿಯೋ

ಕರ್ನಾಟಕ ಮತ್ತು ಗೋವಾ ರಾಷ್ಟ್ರೀಯ ಹೆದ್ದಾರಿಯ ಅನಮೋಡ – ರಾಮನಗರ ಮಾರ್ಗದ ಕ್ಯಾಸರ್‌ಲಾಕ್ ರಸ್ತೆ 12 ಮೀಟರ್ ಅಗಲವಿದೆ. ಆದರೆ, 71ನೇ ಸಂಖ್ಯೆಯ ಸೇತುವೆಯನ್ನು ಮಾತ್ರ ಏಳು ಮೀಟರ್ ಅಗಲಕ್ಕೆ ನಿರ್ಮಿಸಲಾಗುತ್ತದೆ!

ADVERTISEMENT

ಇದಲ್ಲದೇ, ಸೇತುವೆ ಪ್ರದೇಶ ತಿರುವಿನಿಂದ ಕೂಡಿದ್ದು, 6 ಮೀಟರ್ ಮಾತ್ರ ಬಳಕೆಗೆ ಸಿಗುವ ಸಾಧ್ಯತೆಗಳಿದೆ. ಈ ರಸ್ತೆ ಕಾಮಗಾರಿ ಸಹ ಆಮೆಗತಿಯಲ್ಲಿ ಸಾಗುತ್ತಿದೆ. 2017, 2021, 2023 ಮತ್ತು 2024ರಲ್ಲಿ ರಸ್ತೆ ಕಾಮಗಾರಿಗಾಗಿ ಈ ಸೇತುವೆ ಕೆಲಸ ನಿಲ್ಲಿಸಲಾಗಿದ್ದು, ಈವರೆಗೂ ಸೇತುವೆ ಪೂರ್ಣವಾಗಿಲ್ಲ. `12 ಮೀಟರ್ ರಸ್ತೆಗೆ 12 ಮೀಟರ್ ಸೇತುವೆ ನಿರ್ಮಿಸಿ ಅಪಘಾತ ಪ್ರಮಾಣ ತಡೆಯಬೇಕು’ ಎಂದು ರಾಜ್ಯ ಲಾರಿ ಮಾಲಕರ ಸಂಘದವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಇದರೊಂದಿಗೆ ಲಾರಿ ಚಾಲಕ ಹಾಗೂ ಮಾಲಕರು ಅನುಭವಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಅವರು ಚರ್ಚೆ ನಡೆಸಿದ್ದಾರೆ.

ಭಾನುವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವರ ಮನೆಯಲ್ಲಿದ್ದು, ಲಾರಿ ಮಾಲಕ ಸಂಘದ ಉಪಾಧ್ಯಕ್ಷ ಕೆ ಎಸ್ ಮಣಿ ಅವರು ಮನೆಗೆ ತೆರಳಿ ಸಂಸದರನ್ನು ಗೌರವಿಸಿದರು. ಅದಾದ ನಂತರ ಅನಮೋಡ – ರಾಮನಗರ ಮಾರ್ಗದ ಕ್ಯಾಸರ್‌ಲಾಕ್ ರಸ್ತೆಗೆ 12 ಮೀಟರ್ ಸೇತುವೆ ಮಾಡದೇ ಇದಲ್ಲಿ ಅಪಘಾತವಾಗುವ ಸಾಧ್ಯತೆಗಳಿರುವುದನ್ನು ಮನವರಿಕೆ ಮಾಡಿದರು. `ಈ ಮಾರ್ಗ ರಾ ಹೆದ್ದಾರಿ ಆಗಿರುವುದರಿಂದ ಭಾರೀ ಪ್ರಮಾಣದ ವಾಹನ ಸಂಚಾರ ನಡೆಯಲಿದೆ. 12 ಮೀಟರ್ ರಸ್ತೆಗೆ 12 ಮೀಟರ್ ಸೇತುವೆ ನಿರ್ಮಿಸಿ, ಇಲ್ಲಿ ಸಮಸ್ಯೆ ಎದುರಾಗುವ ಮುನ್ನ ಪರಿಹಾರ ಸೂಚಿಸಿ’ ಎಂದು ಮನವಿ ಮಾಡಿದರು. `ಅರೆಬರೆ ಕಾಮಗಾರಿಯನ್ನು ಸಹ ಶೀಘ್ರದಲ್ಲಿ ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದರು. ಲಾರಿ ಚಾಲಕ ಮಾಲಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಅದೆಲ್ಲವನ್ನು ಬಗೆಹರಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಲ್ಲಿ ಕೋರಿದರು.

Advertisement. Scroll to continue reading.

`ಆನಮೋಡ ತಪಾಸಣಾ ಕೇಂದ್ರದ ಬಳಿ ಸಿಮೆಂಟ್ ಕಾಂಕ್ರೀಟ್ ರಸ್ತೆಯಲ್ಲೂ ಇಕ್ಕೆಲಗಳಲ್ಲಿ ಶೋಲ್ಡರಿಂಗ್ ಮಾಡಿಸಿಲ್ಲ. ಇದು ಸಹ ಅಪಘಾತಗಳಿಗೆ ಆಹ್ವಾನ ನೀಡುತ್ತದೆ’ ಎಂದು ನಿಯೋಗದಲ್ಲಿದ್ದವರು ಸಂಸದರ ಗಮನಕ್ಕೆ ತಂದರು. `ಕಾಮಗಾರಿಗಾಗಿ ಈ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿದರೆ ವಾಣಿಜ್ಯ ದೃಷ್ಟಿಯಿಂದ ಸಾಕಷ್ಟು ನಷ್ಟವಾಗಲಿದೆ. ಹೀಗಾಗಿ ಇಲ್ಲಿ ಬೈಪಾಸ್ ರಸ್ತೆ ನಿರ್ಮಿಸಬೇಕು. ಬೈಪಾಸ್ ಮಾಡಿದರೆ 351 ಮರ ಕಟಾವು ಮಾಡಬೇಕಿದ್ದು, ಅರಣ್ಯ ಇಲಾಖೆಯಿಂದ ಅನುಮತಿ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

Advertisement. Scroll to continue reading.

`ಈ ಎಲ್ಲಾ ವಿಷಯಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ, ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿಕೊಡುವೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು. ಲಾರಿ ಮಾಲಕ ಸಂಘದ ಹುಬ್ಬಳ್ಳಿ- ಧಾರವಾಡ ಜಿಲ್ಲೆಯ ಅಧ್ಯಕ್ಷ ಗಿರೀಶ್ ಮಲೆನಾಡು, ಕಾರವಾರ ನೊಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಹಾಗೂ ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಮಾಧವ ನಾಯಕ, ಯಲ್ಲಾಪುರ ತಾಲೂಕು ಲಾರಿ ಮಾಲಕ ಅಧ್ಯಕ್ಷ ಸುಜಯ ಮರಾಠಿ, ಪ್ರಮುಖರಾದ ಕಿರಣ ನಾಯ್ಕ್, ಅಕ್ಷಯ್, ಮಹೇಶ ನಾಯ್ಕ ಹಾಜರಿದ್ದರು. ಖಾನಾಪುರ, ಬೆಳಗಾವಿ ಹಾಗೂ ಗೋವಾ ಸಂಘಗಳ 50ಕ್ಕೂ ಹೆಚ್ಚು ಮಂದಿ ಪದಾಧಿಕಾರಿಗಳು ಆಗಮಿಸಿ ತಮ್ಮ ಸಮಸ್ಯೆ ವಿವರಿಸಿದರು.

ಲಾರಿ ಮಾಲಕ ಸಂಘದವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಚರ್ಚಿಸಿದ ವಿಡಿಯೋ ಇಲ್ಲಿ ನೋಡಿ..

Previous Post

ಕಳ್ಳಭಟ್ಟಿ ಸಂಗೀತಾ ವಿರುದ್ಧ ಕಠಿಣ ಕ್ರಮ!

Next Post

ಕಲರ್ಸ ಕನ್ನಡದಲ್ಲಿ ಧಾರಾವಾಹಿಗಳ ಧಮಾಕಾ!

Next Post

ಕಲರ್ಸ ಕನ್ನಡದಲ್ಲಿ ಧಾರಾವಾಹಿಗಳ ಧಮಾಕಾ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ