ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ನಿಯಮಗಳ ಪ್ರಕಾರ ಅಚ್ಚುಕಟ್ಟಾದ ಜಾಗೃತ ಸಮಿತಿ ರಚಿಸಲು ಉತ್ತರ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಸಮಿತಿಗೆ ಅರ್ಹ ಸದಸ್ಯರಿಗಾಗಿ ಹುಡುಕಾಟ ನಡೆದಿದೆ.
ಅನುಸೂಚಿತ ಜಾತಿಯ ಮೂರು ಜನ ಹಾಗೂ ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಎರಡು ಜನರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ಅವಕಾಶವಿದೆ. ಸರ್ಕಾರೇತರ ಸಂಸ್ಥೆಗಳೊoದಿಗೆ ಸಂಪರ್ಕ ಹೊಂದಿರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿಲ್ಲದ ಇತರೆ ವರ್ಗದ ಮೂರು ಜನ ಅಧಿಕಾರೇತರ ಸದಸ್ಯರನ್ನು ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
3 ವರ್ಷಗಳ ಕಾಲ ಅವರೆಲ್ಲರೂ ಸಮಿತಿಗೆ ಸದಸ್ಯರಾಗಿರಲಿದ್ದಾರೆ. ಅರ್ಹ ಹಾಗೂ ಆಸಕ್ತರು ನಿಮ್ಮ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾತನಾಡಬಹುದು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರ ಕಚೇರಿಯಲ್ಲಿ ಅರ್ಜಿಗಳು ಸಿಗುತ್ತವೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 10 ಕೊನೆ ದಿನ.




