6
  • Latest

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಿರಸಿ ಶಾಸಕರಿಗೆ ಸುಳ್ಳುಗಳ ಸರದಾರ ಪ್ರಶಸ್ತಿ!

AchyutKumar by AchyutKumar
in ರಾಜಕೀಯ

`ಶಿರಸಿ ಶಾಸಕ ಭೀಮಣ್ಣ ನಾಯ್ಕ ಪದೇ ಪದೇ ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ದೂರಿದ್ದಾರೆ. `ರಾಜ್ಯದ 224 ಶಾಸಕರ ಪೈಕಿ ಭೀಮಣ್ಣ ನಾಯ್ಕ ಅತಿ ಹೆಚ್ಚು ಸುಳ್ಳು ಹೇಳುವ ಶಾಸಕರಾಗಿದ್ದಾರೆ’ ಎಂದು ಅವರು ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ಇಂದಿರಾ ಕ್ಯಾಂಟೀನ್ ವಿಷಯವಾಗಿ ಅನಂತಮೂರ್ತಿ ಹೆಗಡೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ದಾಖಲೆಪಡೆದು ಪರಿಶೀಲಿಸಿದಾಗ ಭೀಮಣ್ಣ ನಾಯ್ಕ ಅವರು ಹೇಳಿದ ಸುಳ್ಳುಗಳು ಬಹಿರಂಗವಾಗಿರುವುದಾಗಿಯೂ ಅನಂತಮೂರ್ತಿ ಹೆಗಡೆ ಹೇಳಿಕೊಂಡಿದ್ದಾರೆ.

`ಹೈಟೆಕ್ ಆಸ್ಪತ್ರೆಯ ಎಂಆರ್‌ಐ ಹಾಗೂ ಸಿಟಿ ಸ್ಕಾನ್ ಯಂತ್ರ, ಟ್ರಾಮಾ ಸೆಂಟರ್ ಹಾಗೂ ಹೃದಯ ಚಿಕಿತ್ಸೆಯ ಸಾಮಗ್ರಿಗಳ ಉಪಕರಣ ವಿಷಯದಲ್ಲಿಯೂ ಹಗರಣವಾಗಿದೆ. ತಾವು ಸೂಚಿಸಿದ ರೀತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸದ ಆಸ್ಪತ್ರೆ ಆಡಳಿತಾಧಿಕಾರಿಗಳನ್ನು ವರ್ಗಾವಣೆ ಮಾಡಿಸುವಲ್ಲಿ ಶಾಸಕರು ಮುತುವರ್ಜಿವಹಿಸಿದ್ದಾರೆ. ಆಡಳಿತಾಧಿಕಾರಿ ಬದಲಾವಣೆಯಲ್ಲಿ ತೋರಿಸಿದ ಆಸಕ್ತಿಯನ್ನು ಅಭಿವೃದ್ಧಿ ವಿಷಯದಲ್ಲಿ ತೋರಿಸಿಲ್ಲ’ ಎಂದು ಅನಂತಮೂರ್ತಿ ಹೆಗಡೆ ದೂರಿದ್ದಾರೆ.

Advertisement. Scroll to continue reading.

`ಆಸ್ಪತ್ರೆಯ ಆಡಳಿತಾಧಿಕಾರಿ ಬದಲಾವಣೆ ನಂತರ ತಮಗೆ ಬೇಕಾದವರಿಂದ ವೈದ್ಯಕೀಯ ಉಪಕರಣಗಳಿಗಾಗಿ 5.20 ಕೋಟಿ ರೂಪಾಯಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಆಸ್ಪತ್ರೆಯಲ್ಲಿನ ಗೊಂದಲ ಬಗೆಹರಿಸುವಂತೆ ಎರಡು ಬಾರಿ ಒತ್ತಾಯಿಸಿದರೂ ಆ ವೇಳೆ ಶಾಸಕರು ಮಾತನಾಡಿಲ್ಲ. ಸಾಮಗ್ರಿಗಾಗಿ ಸಹ ಈವರೆಗೂ ಟೆಂಡರ್ ಕರೆದಿಲ್ಲ ಎಂಬ ಸತ್ಯ ದಾಖಲೆಗಳಿಂದ ಬಹಿರಂಗವಾಗಿದೆ’ ಎಂದವರು ವಿವರಿಸಿದ್ದಾರೆ. `ಟೆಂಡರ್ ಕರೆಯದೇ ಇರುವುದಕ್ಕೆ ಕಾರಣ, ವೈದ್ಯರ ನೇಮಕಾತಿ ವಿಷಯದಲ್ಲಿನ ಗೊಂದಲ ಬಗೆಹರಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

Advertisement. Scroll to continue reading.

`ಶಾಸಕ ಭೀಮಣ್ಣ ನಾಯ್ಕ ಅವರು ಈಗಲಾದರೂ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಬಳಿ ತೆರಳಿ ಹಿಂದಿನ ಸರ್ಕಾರದ ರೂಪುರೇಷೆ ಪ್ರಕಾರ ಆಸ್ಪತ್ರೆ ನಿರ್ಮಿಸಬೇಕು. ಫೆ 20ರ ಒಳಗೆ ಈ ಕೆಲಸ ಮಾಡದೇ ಇದ್ದರೆ ದೊಡ್ಡ ಮಟ್ಟದ ಹೋರಾಟ ಅನಿವಾರ್ಯ’ ಎಂದು ಅನಂತಮೂರ್ತಿ ಹೆಗಡೆ ಎಚ್ಚರಿಸಿದ್ದಾರೆ.

Previous Post

ASI ಮನೆಯಲ್ಲಿತ್ತು 18 ಲಕ್ಷದ ಚಿನ್ನ: ಕನ್ನ ಹಾಕಿದ ಟೋಪಿವಾಲ ಡುಮ್ಮಣ್ಣ!

Next Post

ಅನಾಥ ಆಶ್ರಮದಲ್ಲಿ ಅರಣ್ಯಾಧಿಕಾರಿ ಪುತ್ರಿಯ ಸಂಭ್ರಮಾಚರಣೆ!

Next Post

ಅನಾಥ ಆಶ್ರಮದಲ್ಲಿ ಅರಣ್ಯಾಧಿಕಾರಿ ಪುತ್ರಿಯ ಸಂಭ್ರಮಾಚರಣೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ