6
  • Latest

ಜನಪ್ರತಿನಿಧಿಗಳಿಲ್ಲದ ಸಾಮಾನ್ಯ ಸಭೆ: ಬರೀ ಸಪ್ಪೆ ಸಪ್ಪೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಪ್ರತಿನಿಧಿಗಳಿಲ್ಲದ ಸಾಮಾನ್ಯ ಸಭೆ: ಬರೀ ಸಪ್ಪೆ ಸಪ್ಪೆ!

AchyutKumar by AchyutKumar
in ಸ್ಥಳೀಯ

ತಾಲೂಕು ಪಂಚಾಯತಗೆ ಈವರೆಗೂ ಜನಪ್ರತಿನಿಧಿಗಳ ಆಯ್ಕೆ ನಡೆಯದ ಕಾರಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿಯೇ ಸಾಮಾನ್ಯ ಸಭೆ ನಡೆಯುತ್ತಿದೆ. ಹೀಗಾಗಿ ಈ ಸಭೆಯಲ್ಲಿ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಬುಧವಾರ ಯಲ್ಲಾಪುರ ತಾಲೂಕು ಪಂಚಾಯತ ಸಭಾ ಭವನದಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ ವಿಶೇಷತೆಗಳಿರಲಿಲ್ಲ!

ADVERTISEMENT

ಎಲ್ಲಾ ಇಲಾಖೆಗಳಲ್ಲಿನ ಸಿಬ್ಬಂದಿ ಕೊರತೆ ಬಗ್ಗೆ ಸಭೆಯಲ್ಲಿ ಮುಖ್ಯ ಚರ್ಚೆ ನಡೆಯಿತು. ತಾಲೂಕಾ ಆಸ್ಪತ್ರೆ, ಕೆಎಸ್‌ಆರ್‌ಟಿಸಿ, ಕೃಷಿ ಇಲಾಖೆ, ಪಶು ಸಂಗೋಪನೆ, ಹೆಸ್ಕಾಂ, ಲೋಕೋಪಯೋಗಿ, ಶಿಶು ಅಭಿವೃದ್ಧಿ ಸೇರಿ ಹಲವು ಇಲಾಖೆಯವರು ಸಿಬ್ಬಂದಿ ಕೊರತೆ ಸಮಸ್ಯೆಯನ್ನು ಆಡಳಿತಾಧಿಕಾರಿಗಳ ಮುಂದಿಟ್ಟರು. `ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆಯವರು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಕೊಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ನಟರಾಜ ಟಿ ಎಚ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ ನರೇಂದ್ರ ಪವಾರ ಮಾತನಾಡಿ,`ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ತುರ್ತಾಗಿ 5 ವೈದ್ಯರು ಬೇಕಾಗಿದ್ದಾರೆ. ವಜ್ರಳ್ಳಿ, ಮಲವಳ್ಳಿ, ಮಂಚಿಕೇರಿ, ಕಿರವತ್ತಿ ಮತ್ತು ಹಿತ್ಲಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೇರೆ ಬೇರೆ ಕಾರಣದಿಂದ ವೈದ್ಯರು ಲಭ್ಯವಿಲ್ಲ. ಕೆಲವರು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗಿದ್ದಾರೆ. ಕೆಲವರು ಖಾಸಗಿ ಕಾರಣದ ನಿಮಿತ್ತ ರಜೆ ಹಾಕಿದ್ದಾರೆ’ ಎಂಬ ಮಾಹಿತಿ ನೀಡಿದರು.

Advertisement. Scroll to continue reading.

ಪಶುವೈದ್ಯ ಡಾ. ಸುಬ್ರಾಯ ಭಟ್ಟ ಮಾತನಾಡಿ `ಹಿಂದಿನ ಗಣತಿಗೆ ಹೋಲಿಸಿದರೆ ತಾಲ್ಲೂಕಿನಲ್ಲಿ ಅಂದಾಜು 7 ಸಾವಿರ ಪಶುಗಳ ಸಂಖ್ಯೆ ಕಡಿಮೆ ಇದೆ. ರೈತರಲ್ಲಿ ಜಾನುವಾರು ಸಾಕುವ ಪ್ರವೃತ್ತಿ ಕಡಿಮೆಯಾಗುತ್ತಿದ್ದು, ಶೇಕಡಾ 30ರಷ್ಟು ರೈತರು ದನಕರುಗಳನ್ನು ಸಾಕುತ್ತಿಲ್ಲ’ ಎಂಬ ಸತ್ಯ ಬಿಚ್ಚಿಟ್ಟರು. ಹಾಲಿನ ಡೈರಿಗಳು ಮುಚ್ಚುವ ಹಂತದಲ್ಲಿರುವ ಬಗ್ಗೆ ಆತಂಕವ್ಯಕ್ತಪಡಿಸಿದರು.

Advertisement. Scroll to continue reading.

ಸಹಾಯಕ ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಮಾತನಾಡಿ, `ವಿವಿಧ ಕಾರಣಗಳಿಂದ ಕೃಷಿಯ ಕ್ಷೇತ್ರ ಕಡಿಮೆ ಆಗುತ್ತಿದೆ. ಆನೆ, ಕಾಡುಕೋಣ, ಕಾಡುಹಂದಿಗಳಿAದ 76 ಎಕರೆಯಷ್ಟು ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ’ ಎಂದರು. ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ ಮಾತನಾಡಿ `ಶಾಲಾ ಕೊಠಡಿಗಳ ದುರಸ್ತಿಗೆ ಅನುದಾನದ ಅಗತ್ಯವಿದೆ’ ಎಂದರು. ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಸಂತೋಷ ವೆರ್ಣೇಕರ ಮಾತನಾಡಿ, ಘಟಕದಲ್ಲಿ 20 ಚಾಲಕರ ಕೊರತೆ ಇರುವುದಾಗಿ ತಿಳಿಸಿದರು.

ಸಹಾಯಕ ತೋಟಗಾರಿಕಾ ಅಧಿಕಾರಿ ಕೀರ್ತಿ ಮಾತನಾಡಿ, `ಮುಂದಿನ ವರ್ಷದಿಂದ ಕಡಿಮೆ ವೆಚ್ಚದ ಅಣಬೆ ಘಟಕಗಳಿಗೆ ಸಹಾಯಧನ ವಿತರಣೆ ಯೋಜನೆ ಆರಂಭವಾಗಲಿದೆ’ ಎಂದರು. ತಾಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ, ಲೆಕ್ಕಾಧಿಕಾರಿ ಎಂ ಡಿ ಮೋಹನ ಸಿಡಿಪಿಒ ಶ್ರೀದೇವಿ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಕ್ಷಾಯಣಿ ನಾಯ್ಕ, ಹೆಸ್ಕಾಂ’ನ ರಮಾಕಾಂತ ನಾಯ್ಕ ಇದ್ದರು. ಎಂದಿನoತೆ ಈ ಬಾರಿಯೂ ನಿಗದಿತ ಸಮಯಕ್ಕಿಂತ ಒಂದು ತಾಸು ತಡವಾಗಿ ಸಭೆ ಆರಂಭವಾಯಿತು. ನಿಗದಿತ ಸಮಯಕ್ಕೆ ಬಂದ ಆಡಳಿತಾಧಿಕಾರಿ ಇತರ ಅಧಿಕಾರಿಗಳಿಗಾಗಿ ಮುಕ್ಕಾಲು ತಾಸು ಕಾದರು. ಒಟ್ಟಾರೆಯಾಗಿ ಚರ್ಚೆಯ ವಿಷಯಗಳು ಸಭೆಯಲ್ಲಿ ವಿತರಿಸಿದ ಇಡ್ಲಿ-ವಡೆಗಿಂತಲೂ ಸಪ್ಪೆ ಸಪ್ಪೆಯಾಗಿದ್ದವು!

Previous Post

ಅಭಿಮಾನಿಗಳ ಸಿಟ್ಟಿಗೆ ಅನಂತಮೂರ್ತಿ ಭಸ್ಮ!

Next Post

ಅಪಾಯ ತಡೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ!

Next Post

ಅಪಾಯ ತಡೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ