6
  • Latest

ಅಪಾಯ ತಡೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಪಾಯ ತಡೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ!

AchyutKumar by AchyutKumar
February 5, 2025
in ದೇಶ - ವಿದೇಶ
advt advt advt
ADVERTISEMENT

`ಶಿರೂರಿನಲ್ಲಿ ಮತ್ತೆ ಗುಡ್ಡ ಕುಸಿಯದಂತೆ ಎಚ್ಚರಿಕೆವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಹೆದ್ದಾರಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ. ಇದರೊಂದಿಗೆ ಯಲ್ಲಾಪುರದ ಅರಬೈಲ್ ಬಳಿ ನಡೆದ ಭೀಕರ ಅಪಘಾತವನ್ನು ನೆನಪಿಸಿಕೊಂಡ ಅವರು `ಹೆದ್ದಾರಿಯ ಉದ್ದಕ್ಕೂ ಮೊಬೈಲ್ ನೆಟ್‌ವರ್ಕ ಸಿಗುವಂತೆಯೂ ನೋಡಿಕೊಳ್ಳಬೇಕು’ ಎಂದು ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ಹೇಳಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. `ಶಿರೂರು ನಲ್ಲಿ ಈ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಕುರಿತಂತೆ ಜಿಎಸ್‌ಐ ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗಧಿಪಡಿಸಿದ ಅವಧಿಯೊಳಗೆ ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಕುರಿತಂತೆ ತಮ್ಮ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಬಾಕಿ ಇರುವ ಅಗತ್ಯ ಅನುಮತಿಗಳನ್ನು ಪಡೆದು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸಬೇಕು’ ಎಂದು ಸೂಚಿಸಿದರು.

ADVERTISEMENT
ADVERTISEMENT

`ಗುರುತಿಸಲಾಗಿರುವ ಬ್ಲಾಕ್‌ಸ್ಪಾಟ್‌ಗಳ ಬಳಿ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಲು ಅನುಕೂಲವಾಗುವಂತೆ ಮೊಬೈಲ್ ಟವರ್‌ಗಳನ್ನು ತಪ್ಪದೇ ಅಳವಡಿಸುವಂತೆ ಬಿ.ಎಸ್.ಎನ್.ಎಲ್. ಅಧಿಕಾರಿಗಳಿಗೆ ಸೂಚಿಸಿದರು. `ಯಲ್ಲಾಪುರ ಬಳಿ ಇತ್ತೀಚೆಗೆ ನಡೆದ ಅಪಘಾತದಲ್ಲಿ ಗಾಯಳುಗಳು ತಕ್ಷಣಕ್ಕೆ ಪೊಲೀಸ್‌ಗೆ ಸಂಪರ್ಕಿಸಲು ಅಥವಾ ಇತರೇ ಯಾರನ್ನೂ ಸಂಪರ್ಕಿಸಲು ಪ್ರಯತ್ನಿಸಿದರೂ ಮೊಬೈಲ್ ಸಿಗ್ನಲ್ ದೊರಕದ ಬಗ್ಗೆ ಪ್ರಸ್ತಾಪಿಸಿದರು. `ಬ್ಲಾಕ್ ಸ್ಪಾಟ್ ಸ್ಥಳಗಳಲ್ಲಿ ಅಪಘಾತ ಮುನ್ನೆಚರಿಕೆ ಕುರಿತಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಪ್ರದೇಶದಲ್ಲಿ ರಾತ್ರಿಯಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಇರಬೇಕು ಮತ್ತು ತುರ್ತು ಸಹಾಯವಾಣಿ ಸಂಖ್ಯೆಗಳ ವಿವರಗಳನ್ನು ನಮೂದಿಸಿದ ಫಲಕಗಳನ್ನು ಅಳವಡಿಸುವಂತೆ ಹಾಗೂ ಆ ಪ್ರದೇಶಗಳನ್ನು ಅಪಘಾತ ರಹಿತವನ್ನಾಗಿ ಮಾಡಲು ಪೊಲೀಸ್ ಇಲಾಖೆ ಸೂಚಿಸುವ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು  ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement. Scroll to continue reading.
Advertisement. Scroll to continue reading.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಮಾತನಾಡಿ `ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸ್ ಇಲಾಖೆ ಸೂಚಿಸುವ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಪೊಲೀಸ್ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಬೇಕು. ಜಿಲ್ಲೆಗೆ ಒಳ ಬರುವ ಮತ್ತು ಜಿಲ್ಲೆಯಿಂದ ಹೊರ ಹೋಗುವ ಎಲ್ಲಾ ಗಡಿ ಪ್ರದೇಶದಲ್ಲಿ ಸಿಸಿ ಟಿವಿ ಅಗತ್ಯವಿದ್ದು, ಅಗತ್ಯ ಸ್ಥಳಗಳಲ್ಲಿ ಹೈಮಾಸ್ಟ್ ದೀಪಗಳನ್ನು ಅಳವಡಿಸಿ’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್ ಹಾಗೂ ಪೊಲೀಸ್, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಜನಪ್ರತಿನಿಧಿಗಳಿಲ್ಲದ ಸಾಮಾನ್ಯ ಸಭೆ: ಬರೀ ಸಪ್ಪೆ ಸಪ್ಪೆ!

Next Post

ಟಾಕ್ಟರ್ ಏರಿದ ಹಿಟಾಚಿ ಪಲ್ಟಿ: ಆಪರೇಟರ್ ಸಾವು!

Next Post

ಟಾಕ್ಟರ್ ಏರಿದ ಹಿಟಾಚಿ ಪಲ್ಟಿ: ಆಪರೇಟರ್ ಸಾವು!

ಆನೆ ದಾಳಿಗೆ ಬಲಿಯಾದ ಗೋಕರ್ಣ ಪ್ರವಾಸಿಗ!

ರಸ್ತೆ ಅಗೆದು ಪೈಪ್ ಅಳವಡಿಸಿದ ಗುತ್ತಿಗೆದಾರ: ಸಾಮಾನ್ಯ ಸಭೆಯ ಚರ್ಚೆಗೆ ಸಿಕ್ಕಿಲ್ಲ ತೃಪ್ತಿಕರ ಉತ್ತರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.