6
  • Latest

ಚಿಗಳ್ಳಿ ದೀಪ: ಆರದಿರಲಿ ಬೆಳಕು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಚಿಗಳ್ಳಿ ದೀಪ: ಆರದಿರಲಿ ಬೆಳಕು!

AchyutKumar by AchyutKumar
in ದೇಶ - ವಿದೇಶ

ಕಳೆದ 45 ವರ್ಷಗಳಿಂದ ಎಣ್ಣೆ ಹಾಗೂ ಬತ್ತಿ ಇಲ್ಲದೇ ಉರುಯುವುದಾಗಿ ನಂಬಲಾಗಿದ್ದ ಚಿಗಳ್ಳಿಯ ಬುಧವಾರ ಆರಿದೆ. ದೀಪನಾಥೇಶ್ವರ ದೇವಸ್ಥಾನ ಟ್ರಸ್ಟನ ಶೇಷಾದ್ರಿ ಕೆ ಅವರು ಇದನ್ನು ದೃಢೀಕರಿಸಿದ್ದಾರೆ.

`1979ರಲ್ಲಿ ಚಿಗಳ್ಳಿ ಗ್ರಾಮದ ಶಾರದಮ್ಮ ದೈವಜ್ಞ ಎಂಬ ದೈವ ಭಕ್ತೆ ಸಿಮೇಎಣ್ಣೆ ಹಾಕಿ ಒಂದು ಲಾಟೀನ್ ದೀಪವನ್ನು ಹಚ್ಚಿದಾಗ ಅದು ನಿರಂತರವಾಗಿ ಉರಿಯ ತೋಡಗಿತು. ಅದನ್ನು ಕಂಡು ಆಶ್ಚರ್ಯಗೊಂಡ ಶಾರದಮ್ಮ 1980ರಲ್ಲಿಯೂ ಮತ್ತೊಂದು ದೀಪವನ್ನು ಹಚ್ಚಿಟ್ಟಾಗ ಅದೂ ಸಹ ನಿರಂತರವಾಗಿ ಬೆಳಗಿತು. ನಂತರ 15 ದಿನ ಬಿಟ್ಟು ಮತ್ತೊಂದು ದೀಪವನ್ನು ಹಚ್ಚಿದಾಗ ಅದೂ ಸಹ ನಿರಂತರವಾಗಿ ಬೆಳಗುತ್ತದೆ’ ಎಂಬ ದಂತಕಥೆ ಇಲ್ಲಿದೆ. ಆ ನಂತರ ಚಿಗಳ್ಳಿಯಲ್ಲಿ ಮೂರು ದೀಪಗಳು ನಿರಂತರವಾಗಿ ಉರಿಯುತ್ತಿದ್ದ ಪ್ರತೀತಿಯಿದ್ದು, ಇದನ್ನು ನೋಡಲು ದೇಶ-ವಿದೇಶಗಳಿಂದ ಜನ ಬರುತ್ತಿದ್ದರು. ಇಲ್ಲಿ ಗುಡಿಯೊಂದನ್ನು ನಿರ್ಮಿಸಲಾಗಿತ್ತು.

ಈ ದೀಪಗಳನ್ನು ಹಚ್ಚಿದ ಶಾರದಮ್ಮ ಹಲವು ವರ್ಷಗಳ ನಂತರ ಸಾವನ್ನಪ್ಪಿದರು. ಅವರ ಸಂಬAಧಿಕರು ಈ ದೀಪಗಳನ್ನು ಪೂಜೆ ಮಾಡುತ್ತಾ ಬಂದಿದ್ದರು. ಬುಧವಾರ ಮೂರು ದೀಪಗಳು ಆರಿರುವ ಸುದ್ದಿ ಹರಡಿದ್ದರಿಂದ ಭಕ್ತರ ದಂಡು ಚಿಗಳ್ಳಿಗೆ ಆಗಮಿಸುತ್ತಿದ್ದರು. ಇದೀಗ ಆ ದೀಪಗಳ ಕುರಿತು ದೀಪನಾಥೇಶ್ವರ ದೇವಸ್ಥಾನ ಟ್ರಸ್ಟನ ಶೇಷಾದ್ರಿ ಕೆ ಅವರು ಮಾಹಿತಿ ನೀಡಿದ್ದಾರೆ. `ದೀಪನಾಥೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ಮಾಡುತ್ತಿರುವ ವೆಂಕಟೇಶ ಅವರು ಜನವರಿ 23ರಂದು ನಿಧನರಾಗಿದ್ದಾರೆ. ಅವರ ಸಂಸ್ಕಾರ ಕಾರ್ಯವನ್ನು ಗೋಕರ್ಣದಲ್ಲಿ ಮಾಡಲಾಗಿದೆ. ವೈಕುಂಠ ಸಮಾರಾಧನೆ ಮುಗಿಸಿ ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ತೆರೆದಾಗ ದೀಪಗಳು ಶಾಂತವಾಗಿರುವುದು ಕಾಣಿಸಿದೆ. ಈ ಬಗ್ಗೆ ಇನ್ನಷ್ಟು ವಿಚಾರ ಮಾಡುವ ಅಗತ್ಯಿವೆ’ ಎಂದು ದೀಪನಾಥೇಶ್ವರ ದೇವಸ್ಥಾನ ಟ್ರಸ್ಟನ ಶೇಷಾದ್ರಿ ಕೆ ಅವರು ಹೇಳಿದ್ದಾರೆ.

`ಇಲ್ಲಿನ ಮೂರು ದೀಪಗಳು 45 ವರ್ಷಗಳಿಂದಲೂ ನಿರಂತರವಾಗಿ ಉರಿಯುತ್ತಿದ್ದವು. ಭಕ್ತರಿಗೆ ದರ್ಶನ ನೀಡಿ ಅವರ ಕಷ್ಟಗಳನ್ನು ದೂರ ಮಾಡುತ್ತಿದ್ದವು. ಇದೀಗ ಏಕಾಏಕಿ ದೀಪ ಶಾಂತವಾಗಿರುವುದರಿoದ ಮುಂದಿನ ಪವಾಡವನ್ನು ನಿರೀಕ್ಷಿಸಲಾಗುತ್ತಿದೆ. ಗ್ರಾಮಸ್ಥರಿಂದ ಹೋಮ ನಡೆಸಲು ನಿರ್ಧರಿಸಲಾಗಿದೆ’ ಎಂದವರು ಮಾಹಿತಿ ನೀಡಿದ್ದಾರೆ. `ಈಗಾಗಲೇ ಈ ಸ್ಥಳದಲ್ಲಿ ಈಶ್ವರ, ಬಸವಣ್ಣ, ಮಹಾಗಣಪತಿ, ಜ್ಞಾನೇಶ್ವರಿ, ಐದು ತಲೆ ನಾಗ, ದತ್ತಾತ್ರೇಯ, ಚೌಡೇಶ್ವರಿ, ಭೂತರಾಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿದೆ. ಶಿವಮೊಗ್ಗದ ರಾಘವೇಂದ್ರ ಗುಡಿಗಾರ ಅವರು ಶಿಲೆಗಳನ್ನು ರೂಪಿಸುತ್ತಿದ್ದು, ಸಿದ್ಧಿ ಸ್ಥಳದಲ್ಲಿ ಉತ್ತಮ ದೇಗುಲ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ShareSendTweetShare
Previous Post

ರೈಲು ಬಿಡುವ ಯೋಜನೆ: ಕಡ್ಡಿ ಮಾಡುವವರ ವಿರುದ್ಧ ಕಿಡಿ!

Next Post

ನೀ ಬರೆಸಿದಂತೆ… ಕಾನ್ಸರ್ ರೋಗಿ ಬದುಕಿಗೆ ಬೆಳಕು!

Next Post
As you wrote... a light to the life of a cancer patient!

ನೀ ಬರೆಸಿದಂತೆ... ಕಾನ್ಸರ್ ರೋಗಿ ಬದುಕಿಗೆ ಬೆಳಕು!

ನಿವೃತ್ತ ತಹಶೀಲ್ದಾರ್ ಮನೆಗೆ ದಾರಿ ಯಾವುದಯ್ಯ?

ದಲಿತರ ಮೇಲೆ ನಡೆದ ದೌರ್ಜನ್ಯವೆಷ್ಟು? ಸಂತ್ರಸ್ತರಿಗೆ ಸಿಕ್ಕ ಪರಿಹಾರ ಎಷ್ಟು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.