6
  • Latest

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

AchyutKumar by AchyutKumar
February 17, 2025
in ರಾಜ್ಯ
advt advt advt
ADVERTISEMENT

`ಶಾಲಾ ಮಕ್ಕಳ ಶುಲ್ಕ ಪಾವತಿಯ ನೆಪವೊಡ್ಡಿ ಅವರ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಸತಾಯಿಸುವ ಬಗ್ಗೆ ಸಾಕಷ್ಟು ದೂರುಗಳಿದ್ದು, ಆರ್‌ಟಿಇ ಕಾಯ್ದೆ ಪ್ರಕಾರ ವರ್ಗಾವಣೆ ಪ್ರಮಾಣ ಪತ್ರ ತಡೆಹಿಡಿಯುವುದು ಅಪರಾಧ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ ಟಿ ತಿಪ್ಪೇಸ್ವಾಮಿ ಹೇಳಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ `ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ -2009’ರ ಕುರಿತು ಸಭೆ ನಡೆಸಿದರು. `ಇತ್ತೀಚೆಗೆ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ವರ್ಗಾವಣೆ ಪತ್ರ ನೀಡದೇ ಸತ್ತಾಯಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಆಯೋಗಕ್ಕೆ ಬರುತ್ತಿದೆ. ಇದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ’ ಎಂದರು. `ಅನುದಾನ ಮತ್ತು ಅನುದಾನರಹಿತ ಶಾಲೆಗಳ ಮುಖ್ಯಾಧ್ಯಾಪಕರ ಕೊಠಡಿಯಲ್ಲಿ ಆರ್‌ಟಿಇ ಸೆಲ್‌ನ ಸಂಪೂರ್ಣ ಮಾಹಿತಿಯುಳ್ಳ ಫಲಕವನ್ನು ಕಡ್ದಾಯವಾಗಿ ಅಳವಡಿಸಬೇಕು. ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಪಿಟಿಎ ರಚನೆ ಮಾಡಿ, ಪೋಷಕರು ಮತ್ತು ಆಡಳಿತ ಮಂಡಳಿ ಚರ್ಚಿಸಿ ಶುಲ್ಕ ನಿಗಧಿಪಡಿಸಬೇಕು. ಈ ಸಂಬoಧ ಅಗತ್ಯ ದಾಖಲೆಗಳನ್ನು ಇಡಬೇಕು’ ಎಂದು ಸೂಚಿಸಿದರು.

ADVERTISEMENT
ADVERTISEMENT

`ಮಕ್ಕಳ ರಕ್ಷಣಾ ನೀತಿ-2016 ಅನುಷ್ಠಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನುಷ್ಠಾನಗೊಳಿಸಿರುವುದು ಸಾಧನೆ’ ಎಂದರು. `ಮಕ್ಕಳಿಗೆ ಗುಣಮಟ್ಟದ ಕಲಿಕೆಯ ಜೊತೆ ಮಕ್ಕಳ ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು’ ಎಂದರು. `ಶಾಲೆ ಬಿಟ್ಟ ಮಕ್ಕಳಿಗೆ ಕೇವಲ ಮನವೊಲಿಕೆ ಅಥವಾ ನೋಟಿಸ್ ನೀಡಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಸಾಧ್ಯವಿಲ್ಲ. ಮಕ್ಕಳು ಯಾವ ಕಾರಣಕ್ಕೆ ಶಾಲೆ ಬಿಟ್ಟಿದ್ದಾರೆ ಎಂಬದುರ ಕುರಿತು ನಿರ್ದಿಷ್ಟ ಕಾರಣ ಗುರುತಿಸಿ ರಚನಾತ್ಮಕ ಪರಿಹಾರ ನೀಡಬೇಕು. ಶಾಲೆ ಬಿಟ್ಟ ಮಕ್ಕಳ ತಾಲೂಕುವಾರು ಪಟ್ಟಿ ತಯಾರಿಸಿ ಚರ್ಚಿಸಿ ಸಂಬoಧಪಟ್ಟ ಇಲಾಖೆಯಿಂದ ಸಮಸ್ಯೆ ಮತ್ತು ಸೂಕ್ತ ಪರಿಹಾರ ಒದಗಿಸಲು ಪ್ರಯತ್ನಿಸಿದಾಗ ಶಾಲೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು’ ಎಂದರು.

Advertisement. Scroll to continue reading.
Advertisement. Scroll to continue reading.

`ಪoಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಗಳಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯಿದ್ದು, ಈ ಸಮಿತಿಯಲ್ಲಿ ಮುಖ್ಯೋಪಾಧ್ಯಾಯರು ಸದಸ್ಯರಾಗಿದ್ದಾರೆ. ಮಕ್ಕಳ ರಕ್ಷಣಾ ಕುರಿತಂತೆ, ಶಾಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಜೆಂಡಾ ಮಾಡುವ ಮೂಲಕ ಸಮಸ್ಯೆ ಬಗೆಹರಿಸಬೇಕು. ಶಾಲೆಗಳಲ್ಲಿ ಶಾಲಾ ಸಂಸತ್ತು ಸೃಜನಶೀಲವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು’ ಎಂದರು. `ಶಾಲೆಯಲ್ಲಿ ರಚನೆಗೊಂಡ ಎಸ್‌ಡಿಎಂಸಿ ಸಮಿತಿ ಮಾಡಿದರೇ ಸಾಲದು ಆ ಸಮಿತಿ ನಿಯಮಿತವಾಗಿ ಪ್ರತಿ 3 ತಿಂಗಳಿಗೊಮ್ಮೆ ಸಭೆ ಮಾಡಿ ನಡಾವಳಿ ಮಾಡಿ ಕಡತ ನಿರ್ವಹಣೆ ಮಾಡಬೇಕು. ಮಕ್ಕಳ ಹಕ್ಕು ಗ್ರಾಮ ಸಭೆಯಲ್ಲಿ ಮಕ್ಕಳಿಗೆ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವದ ಜತೆಗೆ ಸ್ಥಳೀಯ ಸರ್ಕಾರದ ಸೌಲಭ್ಯದ ಬಗ್ಗೆ ಮಾಹಿತಿ ತಿಳಿಯುತ್ತದೆ. ತೆರೆದ ಮನೆ ಕಾರ್ಯಕ್ರಮದಲ್ಲಿ ಪೊಲೀಸ್ ಮತ್ತು ಕಾನೂನು ವ್ಯವಸ್ಥೆಯ ಕುರಿತು ಎಲ್ಲಾ ಶಾಲೆಗಳ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಗುಣಮಟ್ಟದ ಆಹಾರ ಒದಗಿಸಬೇಕು’ ಎಂದು ತಿಳಿಸಿದರು.

`ಅತಿಥಿ ಶಿಕ್ಷಕರಿಗೆ ಜೆ.ಜೆ. ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಆರ್.ಟಿ.ಇ ಪೊಕ್ಸೋ ಕಾಯ್ದೆ ಹಾಗೂ ಮಕ್ಕಳ ರಕ್ಷಣಾ ನೀತಿ ಕುರಿತು ಕಡ್ಡಾಯವಾಗಿ ತರಬೇತಿ ನೀಡಬೇಕು. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಪೊಲೀಸ್ ವೆರಿಫಿಕೇಶನ್ ಕಡ್ಡಾಯವಾಗಿ ಮಾಡಬೇಕು. ಅನಧಿಕೃತವಾಗಿ ಕೋಚಿಂಗ್ ಸೆಂಟರ್‌ಗಳಿದ್ದರೆ ನೋಟಿಸ್ ನೀಡಬೇಕು ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಚಿಂಗ್ ಸೆಂಟರ್ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು’ ಎಂದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ, ಎಲ್ಲಾ ತಾಲೂಕು ಶಿಕ್ಷಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಉಸ್ತುವಾರಿ ಅಧಿಕಾರಿಗಳು ಮತ್ತಿತರರು ಇದ್ದರು.

 

ShareSendTweetShare
ADVERTISEMENT
Previous Post

25 ಜನರನ್ನು ರಕ್ಷಿಸಿದ ಮಹಿಳೆಯ ಮೆಸೆಜು!

Next Post

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

Next Post

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

ತಹಶೀಲ್ದಾರ್‌ ಕಚೇರಿ | ಜನರ ಎದುರೇ ಅಧಿಕಾರಿಗಳ ಹೊಡೆದಾಟ!

ಅನಧಿಕೃತ ಆಸ್ತಿಗೂ ಇ-ಖಾತಾ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.