6
  • Latest

ನಿಜವಾದ ಸುಳ್ಳುಗಾರ ಯಾರು?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ನಿಜವಾದ ಸುಳ್ಳುಗಾರ ಯಾರು?

AchyutKumar by AchyutKumar
February 19, 2025
in ರಾಜಕೀಯ
advt advt advt
ADVERTISEMENT

`ರಾಜ್ಯದ 224 ಶಾಸಕರಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅತಿ ಹೆಚ್ಚು ಸುಳ್ಳು ಹೇಳುವ ಶಾಸಕ’ ಎಂದು ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಆದರೆ, ಇದು ಸತ್ಯವಲ್ಲ. ಕಾರಣ, ಭೀಮಣ್ಣ ನಾಯ್ಕರಿಗಿಂತಲೂ ಹೆಚ್ಚು ಸುಳ್ಳು ಹೇಳುವವರು ಬೇರೆಯವರಿದ್ದಾರೆ!

`ಇನ್ನೂ ಎರಡು ವಾರದ ಒಳಗೆ ಅಡಿಕೆ ಬೆಳೆಗಾರರಿಗೆ ವಿಮಾ ಪರಿಹಾರ ಜಮಾ ಆಗಲಿದೆ’ ಎಂದು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದರು. ಆದರೆ, ಆ ಎರಡು ವಾರ ಕಳೆದರೂ ಪರಿಹಾರ ಹಣ ಬಂದಿಲ್ಲ. `ಹಾಲಕ್ಕಿ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸಿದ್ಧ’ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಅವರು ಪದ್ಮಶ್ರೀ ಸುಕ್ರಿ ಗೌಡ ಅವರಿಗೆ ಮಾತು ಕೊಟ್ಟಿದ್ದರು. ಆದರೆ, ಆ ಮಾತು ಈಡೇರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

`ಕುಮಟಾ ಪಟ್ಟಣದಲ್ಲಿನ ಒಳಚರಂಡಿ ವ್ಯವಸ್ಥೆ ಸರಿಪಡಿಸುವೆ’ ಎಂದು ಎರಡನೇ ಬಾರಿ ಶಾಸಕರಾಗುವ ಪೂರ್ವದಲ್ಲಿಯೇ ದಿನಕರ ಶೆಟ್ಟಿ ಭರವಸೆ ನೀಡಿದ್ದರು. ಆದರೆ, ಕೋಟಿ ರೂ ವೆಚ್ಚದ ಯೋಜನೆ ಏನಾಯಿತು? ಎಂದು ಯಾರಿಗೂ ಗೊತ್ತಾಗಲಿಲ್ಲ. `ಕಾರವಾರದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮಾಡುವೆ. ತನ್ನದೇ ಜಾಗವನ್ನು ಸುಸಜ್ಜಿತ ಆಸ್ಪತ್ರೆಗೆ ನೀಡುವೆ’ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದರು. ಆದರೆ, ಈ ಎರಡೂ ಕೆಲಸ ಆಗಲಿಲ್ಲ.

Advertisement. Scroll to continue reading.

ಇನ್ನೂ, `ಮುರುಡೇಶ್ವರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ’ ಎಂದು ಭಟ್ಕಳ ಕ್ಷೇತ್ರದ ಶಾಸಕರೂ ಆದ ಸಚಿವ ಮಂಕಾಳು ವೈದ್ಯ ಹೇಳಿದ್ದರು. ಆದರೆ, ಅಲ್ಲಿ ಮೊದಲಿದ್ದ ಪ್ರವಾಸೋದ್ಯಮ ಚಟುವಟಿಕೆಗಳು ಸಹ ನಿಂತು ಹೋಗಿದ್ದರಿಂದ ಆ ಮಾತು ಸುಳ್ಳಾಗಿದೆ. ಇನ್ನೂ `ಚುನಾವಣೆಯಲ್ಲಿ ಗೆದ್ದು ಬಂದರೆ ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ತಡೆ ಒಡ್ಡುವೆ’ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳಿದ್ದರು. ಆದರೆ, ಅದು ಸಹ ಈವರೆಗೂ ಸಾಧ್ಯವಾಗಲಿಲ್ಲ.

ಒಟ್ಟಾರೆಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೂ ಸುಳ್ಳು ಹೇಳದೇ ಇರುವ ಶಾಸಕರಿಲ್ಲ. ಎಲ್ಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರ ಭರವಸೆಗಳ ಬಗ್ಗೆ ಅಧ್ಯಯನ ನಡೆಸಿದರೂ ಅಲ್ಲಿಯೂ ಸುಳ್ಳು ಹೇಳದಿರುವವರು ಕಾಣುತ್ತಿಲ್ಲ. ಇನ್ನೂ, `ವಿವಿಧ ಕಂಪನಿಗಳ ಸಿಎಸ್‌ಆರ್ ಹಣವನ್ನು ಆಸ್ಪತ್ರೆಗಾಗಿ ತರುವೆ’ ಎಂದು ಸ್ವತಃ ಅನಂತಮೂರ್ತಿ ಹೆಗಡೆ ಹೇಳಿದ್ದರು. ಆದರೆ, ಆ ಮಾತು ಈಡೇರಿಲ್ಲ. ಹೀಗಾಗಿ `ಸುಳ್ಳುಗಾರ ಪ್ರಶಸ್ತಿ’ ಘೋಷಣೆ ಮಾಡಿರುವ ಅನಂತಮೂರ್ತಿ ಹೆಗಡೆ ಅವರ ಮಾತುಗಳೆಲ್ಲವೂ ಸತ್ಯವಲ್ಲ!

ShareSendTweetShare
ADVERTISEMENT
Previous Post

ನೌಕಾನೆಲೆ ರಹಸ್ಯ: ಕಾಸಿನ ಆಸೆಗೆ ದೇಶದ್ರೋಹಿಗಳಾದವರ ಕಥೆ!

Next Post

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

Next Post

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

ಹೊಡೆದಾಟಕ್ಕೆ ಬಾರದವನಿಗೆ ಚೂರಿ ಇರಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.