6
  • Latest

ವಂಚನೆಯಲ್ಲಿಯೂ ದೊಡ್ಡ ದಾಖಲೆ ಬರೆದ ಪಿಡಿಓ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಂಚನೆಯಲ್ಲಿಯೂ ದೊಡ್ಡ ದಾಖಲೆ ಬರೆದ ಪಿಡಿಓ!

AchyutKumar by AchyutKumar
in ರಾಜ್ಯ

ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಹಾಗೂ ಕಿರವತ್ತಿ ಗ್ರಾಮ ಪಂಚಾಯತದಲ್ಲಿ ಪಿಡಿಓ ಆಗಿ ಕೆಲಸ ಮಾಡಿಕೊಂಡಿದ್ದ ಯೋಗೇಂದ್ರ ಇದೀಗ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ವಿಧಾನಸೌಧದಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಯೋಗ್ರೇಂದ್ರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಣ್ಣಿಗೇರಿ ಗ್ರಾಮ ಪಂಚಾಯತದಲ್ಲಿ ಯೋಗೇಂದ್ರ ಪಿಡಿಓ ಆಗಿದ್ದರು. ನಂತರ ಕಿರವತ್ತಿ ಗ್ರಾಮ ಪಂಚಾಯತಗೆ ತೆರಳಿ ಕರ್ತವ್ಯ ನಿಭಾಯಿಸುತ್ತಿದ್ದರು. ಈ ವೇಳೆ ಅವರ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನ ನಡೆದಿದೆ ಎಂದು ಹೇಳಿ ದೊಡ್ಡ ರಂಪಾಟವನ್ನು ನಡೆಸಿದ್ದರು. ವಿವಿಧ ಕಾರ್ಯಕ್ರಮಗಳ ನಿರ್ವಹಣೆ, ಕಂಪ್ಯುಟರ್ ಕೆಲಸದಲ್ಲಿ ಚುರುಕಾಗಿದ್ದ ಪಿಡಿಓ ತಮ್ಮ ಕುತಂತ್ರ ಬುದ್ದಿ ಉಪಯೋಗಿಸಿ ಒಂದೆರಡು ಪ್ರಶಸ್ತಿಗಳನ್ನು ಸಹ ಅವರು ಪಡೆದಿದ್ದರು.

ಅದಾದ ನಂತರ ಅನೇಕರಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕಾಸು ಪಡೆದು ಪರಾರಿಯಾಗಿದ್ದರು. ಪಿಡಿಓ ಯೋಗೇಂದ್ರ ಎಲ್ಲಿ ಹೋದರು? ಎಂದು ಸರ್ಕಾರಕ್ಕೆ ಸಹ ಅರಿವಾಗಿರಲಿಲ್ಲ. ಮೊದಲು ಅವರನ್ನು ಅಮಾನತು ಮಾಡಲಾಯಿತು. ನಂತರ 2020ರಲ್ಲಿ ಸೇವೆಯಿಂದ ವಜಾ ಮಾಡಲಾಗಿತ್ತು. ಈ ನಡುವೆ 2023ರಲ್ಲಿ ಮತ್ತೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 17 ಲಕ್ಷ ರೂ ಪಡೆದು ವಂಚಿಸಿದ್ದರು. ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಹ ಇನ್ನೊಬ್ಬರಿಂದ 1.20ಕೋಟಿ ರೂ ಹಣ ಪಡೆದು ಯಾಮಾರಿಸಿದ್ದರು.

ಆ ಹಣದಲ್ಲಿ ಶ್ರೀಲಂಕಾ, ದುಬೈ ತೆರಳಿ ಯೋಗೇಂದ್ರ ಮೋಜು-ಮಸ್ತಿ ಮಾಡಿಕೊಂಡಿದ್ದರು. ಇದೀಗ ಅವರು ಭಾರತಕ್ಕೆ ಮರಳುತ್ತಿರುವ ವಿಷಯ ಅರಿತ ಪೊಲೀಸರು ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದರು.

 

ShareSendTweetShare
Previous Post

ಕುಡಿತದ ಚಟ: ಪೆಪರ್ ಮಿಲ್ ಕಾರ್ಮಿಕನ ಕುಟುಂಬ ಇದೀಗ ಅತಂತ್ರ!

Next Post

ಕಾಲಿಗೆ ಬಿದ್ದರೂ ಕರಗದ ಅಧಿಕಾರಿಯ ಮನ!

Next Post

ಕಾಲಿಗೆ ಬಿದ್ದರೂ ಕರಗದ ಅಧಿಕಾರಿಯ ಮನ!

ಇನ್ಸುರೆನ್ಸ ಆಸೆಗೆ ಸುಳ್ಳು ದೂರು ಕೊಡಿಸಿದ DYSP: ಪೊಲೀಸರ ವಿರುದ್ಧವೇ ಮೇಲಧಿಕಾರಿಗೆ ದೂರು!

ಆಸ್ಪತ್ರೆಯಲ್ಲಿ ಹೊಡೆದಾಟ.. ನ್ಯಾಯಕ್ಕಾಗಿ ಉಗ್ರ ಹೋರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.