6
  • Latest

ಅಡಿಕೆ ಮಂಡಳಿ ಸ್ಥಾಪನೆ ವಿಚಾರ: ಮೌನ ಮುರಿಯದ ಸರ್ಕಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಡಿಕೆ ಮಂಡಳಿ ಸ್ಥಾಪನೆ ವಿಚಾರ: ಮೌನ ಮುರಿಯದ ಸರ್ಕಾರ!

AchyutKumar by AchyutKumar
February 22, 2025
in ದೇಶ - ವಿದೇಶ
advt advt advt
ADVERTISEMENT

ವರ್ಷದಿಂದ ವರ್ಷಕ್ಕೆ ಅಡಿಕೆ ಬೆಳೆ ವಿಸ್ತಾರವಾಗುತ್ತಿದೆ. ಸಾಂಪ್ರದಾಯಿಕ ಅಡಿಕೆ ಬೆಳೆಗಾರರ ನಡುವೆ ಬಯಲು ಸೀಮೆ ಜನ ವ್ಯಾಪಕ ಪ್ರಮಾಣದಲ್ಲಿ ಅಡಿಕೆ ತೋಟ ನಿರ್ಮಿಸುತ್ತಿದ್ದಾರೆ.

ಕರ್ನಾಟಕ ರಾಜ್ಯದ 10 ಜಿಲ್ಲೆಗಳಲ್ಲಿ 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ವಾರ್ಷಿಕ 11 ಲಕ್ಷ ಟನ್ ಅಡಿಕೆ ಉತ್ಪಾದನೆಯಾಗುತ್ತಿದೆ. ಈ ನಡುವೆ ಎಲೆಚುಕ್ಕಿ ರೋಗ, ಹಳದಿ ರೋಗ ಸೇರಿ ನಾನಾ ರೋಗಗಳು ಅಡಿಕೆ ಮರಗಳನ್ನು ಕಾಡುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅಡಿಕೆಗೆ ವೈಜ್ಞಾನಿಕ ಬೆಲೆ ನಿಗದಿ, ರೋಗ ನಿಯಂತ್ರಣ, ನಷ್ಟ ಪರಿಹಾರಕ್ಕೆ ಈವರೆಗೂ ಸೂಕ್ತ ವೇದಿಕೆ ಸಿಕ್ಕಿಲ್ಲ. ದೊಡ್ಡ ಪ್ರಮಾಣದಲ್ಲಿ ಚರ್ಚೆಯೂ ನಡೆದಿಲ್ಲ.

ADVERTISEMENT
ADVERTISEMENT

ಅಡಿಕೆ ಕೃಷಿ ವಿಸ್ತರಣೆ ಹಾಗೂ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಸುವುದಕ್ಕಾಗಿ ಪ್ರತ್ಯೇಕ ಅಡಿಕೆ ಮಂಡಳಿ ಸ್ಥಾಪಿಸಬೇಕು ಎಂಬ ಕೂಗು ದಶಕಗಳಿಂದಲೂ ಇದೆ. ಆದರೆ, ಯಾವ ಸರ್ಕಾರವೂ ಇದಕ್ಕೆ ಆಸಕ್ತಿವಹಿಸಿಲ್ಲ. ಅಡಿಕೆ ಬೆಳೆಗಾರರ ಹಿತ ಕಾಪಾಡುವ ಮಹತ್ವದ ನಿರ್ಣಯಗಳನ್ನು ಸರ್ಕಾರ ಕೈಗೊಂಡಿಲ್ಲ. ರಾಜ್ಯ ಸರ್ಕಾರದ ಜೊತೆ ಕೇಂದ್ರ ಸರ್ಕಾರ ಸಹ ಅಡಿಕೆ ಬೆಳೆಗಾರರ ಪರವಾಗಿಲ್ಲ ಎಂಬುದು ಸರ್ಕಾರದ ಮೌನ ನಡೆಗಳಿಂದ ಋಜುವಾತಾಗಿದೆ.

Advertisement. Scroll to continue reading.
Advertisement. Scroll to continue reading.

ಅಡಿಕೆ ಬೆಳೆಗಾರರ ಪ್ರದೇಶದ ಯಾವ ಸಂಸದರೂ ಅಡಿಕೆ ಮಂಡಳಿ ಸ್ಥಾಪನೆ ಹಾಗೂ ಅದರಿಂದಾಗುವ ಪ್ರಯೋಜನಗಳ ಬಗ್ಗೆ ಸರ್ಕಾರದ ಮುಂದೆ ಮಾತನಾಡಿಲ್ಲ. ಆದರೆ, ರಾಯಚೂರಿನ ಸಂಸದ ಜಿ ಕುಮಾರ ನಾಯಕ ಅಡಿಕೆ ಮಂಡಳಿ ಸ್ಥಾಪನೆ ವಿಷಯವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ಕೇಂದ್ರ ಸರ್ಕಾರ ಅವರ ಪ್ರಶ್ನೆಗೆ ಯಾವುದೇ ಉತ್ತರ ನೀಡಿಲ್ಲ. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವರಿಗೆ ಅಡಿಕೆ ಮಂಡಳಿ ಕುರಿತು ಅವರು ಪ್ರಶ್ನಿಸಿದ್ದು, ಈ ವೇಳೆ ಅಡಿಕೆ ಬೆಳೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾತ್ರ ಉತ್ತರ ಸಿಕ್ಕಿದೆ. ಅವರ ಮುಖ್ಯ ಪ್ರಶ್ನೆಯಾದ ಮಂಡಳಿ ಸ್ಥಾಪನೆ ಬೇಡಿಕೆ ಬಗ್ಗೆ ಒಂದೇ ಒಂದು ಆಶ್ವಾಸನೆಯೂ ದೊರೆತಿಲ್ಲ.

`2024-25ನೇ ಸಾಲಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆಗೆ ಕೇಂದ್ರ ಕೃಷಿ ಸಚಿವಾಲಯವು ರಾಜ್ಯಕ್ಕೆ 37 ಕೋಟಿ ರೂ ಬಿಡುಗಡೆ ಮಾಡಿದೆ. ಹವಾಮಾನ ಬೆಳೆ ಆಧಾರಿತ ವಿಮಾ ಯೋಜನೆ ಅಡಿಯಲ್ಲಿ ಅಡಿಕೆ ಬೆಳೆಯನ್ನು ಸೇರಿಸಲಾಗಿದೆ’ ಎಂಬ ಉತ್ತರ ಮಾತ್ರ ಸಿಕ್ಕಿದೆ. ಇನ್ನೂ ಈ ವರ್ಷ ವಿಮಾ ಯೋಜನೆಯ ಅಡಿ ಬೆಳೆಗಾರರಿಗೆ ಸಿಕ್ಕ ಪರಿಹಾರದ ಕಥೆ ಎಲ್ಲರಿಗೂ ಗೊತ್ತಿದೆ!

ShareSendTweetShare
ADVERTISEMENT
Previous Post

ಕೂಲಿ ಕಾರ್ಮಿಕರಿಗೆ ಜೂಜಾಟದ ವ್ಯಾಮೋಹ!

Next Post

PUC | ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ: ಕಠಿಣ ಕ್ರಮಕ್ಕೆ ಡಿಡಿಪಿಯು ನಕಾರ!

Next Post

PUC | ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ: ಕಠಿಣ ಕ್ರಮಕ್ಕೆ ಡಿಡಿಪಿಯು ನಕಾರ!

ಆರೋಗ್ಯವಂತ ಮಹಿಳೆ ದಿಢೀರ್ ಸಾವು!

ಮಾವಳ್ಳಿ ಜಾತ್ರೆ: ದೇವರ ಹೆಸರಿನಲ್ಲಿ ಜೂಜಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.