6
  • Latest

ಉತ್ತರ ಕನ್ನಡ | ಜಿಲ್ಲೆಯ ಹಿರಿಮೆ ಹೆಚ್ಚಿಸಿದ ಜನಮೆಚ್ಚಿದ ವೈದ್ಯ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ಜಿಲ್ಲೆಯ ಹಿರಿಮೆ ಹೆಚ್ಚಿಸಿದ ಜನಮೆಚ್ಚಿದ ವೈದ್ಯ!

AchyutKumar by AchyutKumar
in ರಾಜ್ಯ

ಸಾಕಷ್ಟು ಜನಪರ ಕೆಲಸ ಮಾಡಿದರೂ ಎಂದಿಗೂ ಮುನ್ನೆಲೆಗೆ ಬಾರದ ಯಲ್ಲಾಪುರ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ ನರೇಂದ್ರ ಪವಾರ್ ಅವರ ಸಾಧನೆ ಗುರುತಿಸಿ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಗೌರವಿಸಿದೆ.

ಡಾ ನರೇಂದ್ರ ಪವಾರ್ ಅವರು ಕಳೆದ ಆರು ವರ್ಷಗಳಿಂದ ಯಲ್ಲಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದಾರೆ. ಜನರ ಸಮಸ್ಯೆಗಳಿಗೆ ತ್ವರೀತವಾಗಿ ಸ್ಪಂದಿಸುವುದು ಅವರ ಹುಟ್ಟು ಗುಣ. ಜೀವನಮಟ್ಟ ಸುಧಾರಣೆ, ಆರೋಗ್ಯ ಕಾಳಜಿಯ ಬಗ್ಗೆ ಅವರು ನಿರಂತರವಾಗಿ ಜನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅಧೀನ ಅಧಿಕಾರಿಗಳಿಗೂ ಸಹ ಅವರು ಕರ್ತವ್ಯ ನಿಷ್ಠೆ ಹಾಗೂ ಜನಪರ ಕೆಲಸ ಮಾಡುವ ಬಗ್ಗೆ ತಿಳಿಹೇಳಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ ಸ್ವಚ್ಚತೆ-ಶಿಸ್ತು ಕಾಪಾಡುವಲ್ಲಿ ಡಾ ನರೇಂದ್ರ ಪವಾರ್ ಅವರ ಶ್ರಮ ಅಪಾರ.

ಇನ್ನೂ ಸಮುದಾಯದಗಳಲ್ಲಿನ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಡಾ ನರೇಂದ್ರ ಪವಾರ್ ವಿಶೇಷ ಕಾಳಜಿವಹಿಸಿದ್ದಾರೆ. ತಾಲೂಕಿನಲ್ಲಿ ನಡೆದ ವಾಂತಿ-ಬೇದಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಂತ್ರಸ್ತರಿಗೆ ಚಿಕಿತ್ಸೆ ನೀಡಿದ್ದಾರೆ. ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವಲ್ಲಿಯೂ ಅವರು ಮುಂಚೂಣಿಯಲ್ಲಿದ್ದಾರೆ. ಸದ್ಯ ವೈದ್ಯರ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ಪ್ರಯತ್ನ ಮಾಡುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಅತಿ ಹೆಚ್ಚು ಸದಸ್ಯರನ್ನು ಸೇರಿಸಿದ ಸಾಧನೆಗಾಗಿ ಡಾ ನರೇಂದ್ರ ಪವಾರ್ ಅವರ ಕೆಲಸವನ್ನು ಸಂಘ ಮೆಚ್ಚಿದೆ. ವಿಜಯಪುರದಲ್ಲಿ ನಡೆದ 31ನೆಯ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಮ್ಮೇಳನದಲ್ಲಿ ಡಾ ನರೇಂದ್ರ ಪವಾರ್ ಅವರ ಸಾಧನೆಯನ್ನು ಗೌರವಿಸಲಾಯಿತು.

ವೈದ್ಯಾಧಿಕಾರಿಯಾಗಿ 21 ವರ್ಷ ಅನುಭವ ಹೊಂದಿರುವ ಡಾ ನರೇಂದ್ರ ಪವಾರ್ ಅವರು ಸಂಘಕ್ಕೆ ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಉತ್ತರ ಕನ್ನಡ ಜಿಲ್ಲೆಗೆ `ಉತ್ತಮ ಶಾಖಾ ಪ್ರಶಸ್ತಿ’ಯನ್ನು ತಂದುಕೊಟ್ಟರು. ವೈದ್ಯಕೀಯ ಶಿಕ್ಷಣದ ಕುರಿತು ವೆಬಿನಾರ್ ಆಯೋಜನೆ, ಜಿಲ್ಲಾ ಮಟ್ಟದಲ್ಲಿ ಎರಡು ಸಮ್ಮೇಳನ ಸಂಘಟನೆ ಸೇರಿ ಡಾ ನರೇಂದ್ರ ಪವಾರ್ ಅವರ ಸೇವೆಯನ್ನು ಈ ವೇಳೆ ಸ್ಮರಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್, ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಡಾ ನರೇಂದ್ರ ಪವಾರ್ ಅವರಿಗೆ ಗೌರವಿಸುವ ಮೂಲಕ `ಉತ್ತರ ಕನ್ನಡ ಜಿಲ್ಲೆಗೆ ಉತ್ತಮ ವೈದ್ಯಕೀಯ ಸಂಘ’ ಪ್ರಶಸ್ತಿ ನೀಡಿ ಗೌರವಿಸಿದರು. `ಜಿಲ್ಲಾ ವೈದ್ಯಾಧಿಕಾರಿ ಡಾ ನೀರಜ್ ಬಿವಿ, ಆರ್‌ಸಿಎಚ್ ಅಧಿಕಾರಿಗಳಾದ ಡಾ ನಟರಾಜ್ ಕೆ ಅವರ ಮಾರ್ಗದರ್ಶನದಿಂದ ಉತ್ತರ ಕನ್ನಡ ಜಿಲ್ಲಾ ಸಂಘ ಮಾದರಿಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಈ ಪ್ರಶಸ್ತಿ ಬರುವಲ್ಲಿ ಜಿಲ್ಲೆಯ ವೈದ್ಯರ ಕೊಡುಗೆಯೂ ಸಾಕಷ್ಟಿದೆ’ ಎಂದು ಡಾ ನರೇಂದ್ರ ಪವಾರ್ ಪ್ರತಿಕ್ರಿಯಿಸಿದರು.

ShareSendTweetShare
Previous Post

ಫಿನೈಲ್ ಕುಡಿದ ಸಾರಿಗೆ ಸಿಬ್ಬಂದಿ!

Next Post

ಗೋಕರ್ಣ: ಈ ಎರಡೂ ದಿನ ಸಿಗಲ್ಲ ಸರಾಯಿ!

Next Post
ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಗೋಕರ್ಣ: ಈ ಎರಡೂ ದಿನ ಸಿಗಲ್ಲ ಸರಾಯಿ!

ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ಹೊನ್ನಾವರ: ಇಲ್ಲಿಯೂ ನಿಷೇಧದ ಗುಮ್ಮ!

ನೆಲಕ್ಕೆ ಬಿದ್ದ ವಿದ್ಯುತ್ ತಂತಿ: ಅಗ್ನಿ ಅನಾಹುತಕ್ಕೆ ನಾಲ್ಕು ಎಕರೆ ತೋಟ ನೆಲಸಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.