6
  • Latest

ಮಾತು ತಪ್ಪಿದ ಮಂಕಾಳು ವೈದ್ಯ: ಕಡಲ ಮಗುವಿನ ಪ್ರಶ್ನೆಗೆ ಉತ್ತರಿಸುವವರಾರು?

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮಾತು ತಪ್ಪಿದ ಮಂಕಾಳು ವೈದ್ಯ: ಕಡಲ ಮಗುವಿನ ಪ್ರಶ್ನೆಗೆ ಉತ್ತರಿಸುವವರಾರು?

AchyutKumar by AchyutKumar
in ದೇಶ - ವಿದೇಶ, ವಿಡಿಯೋ

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದರು ವಿರೋಧಿ ಹೋರಾಟ ಜೋರಾಗಿದೆ. ಅಂಕೋಲಾದಲ್ಲಿ ಬಂದರು ನಿರ್ಮಾಣ ಕಾಮಗಾರಿಗೆ ಮೀನುಗಾರರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಹೊನ್ನಾವರದಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿದೆ. ಆದರೆ, ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಮಾತ್ರ ಮೌನವಾಗಿದ್ದಾರೆ.

ADVERTISEMENT

`ಚುನಾವಣೆ ದೇವಸ್ಥಾನಕ್ಕೆ ಬಂದು ಮತ ಕೇಳಿದ ಮಂಕಾಳು ವೈದ್ಯ ಈಗ ಎಲ್ಲಿ ಹೋದ?’ ಎನ್ನುವ ಬಗ್ಗೆ ಪುಠಾಣಿ ಅಪೇಕ್ಷಾ ಮಾತನಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಮೀನುಗಾರಿಕಾ ಸಚಿವ ಮಂಕಾಳು ವೈದ್ಯರನ್ನು ಅಪೇಕ್ಷಾ ಅವರು ಏಕವಚನದಲ್ಲಿ ಪ್ರಶ್ನಿಸಿದ್ದು, ಅವರ ನ್ಯಾಯಯುತ ಪ್ರಶ್ನೆಗಳಿಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಉತ್ತರ ಸಿಗುವವರೆಗೂ ಆ ವಿಡಿಯೋ ವೈರಲ್ ಆಗುವ ಸಾಧ್ಯತೆ ಹೆಚ್ಚಾಗಿದೆ.

ಮಂಗಳವಾರ ಹೊನ್ನಾವರದ ಕಾಸರಕೋಡಿನಲ್ಲಿ ಬಂದರು ನಿರ್ಮಾಣ ಸರ್ವೇ ಕಾರ್ಯ ವಿರೋಧಿಸಿ ಸಾವಿರಾರು ಮೀನುಗಾರರು ಪ್ರತಿಭಟನೆ ನಡೆಸಿದರು. ಈ ವೇಳೆ ಮೀನುಗಾರರನ್ನು ಬಂಧಿಸಲಾಗಿದ್ದು, ಈ ಬಂಧನ ವಿರೋಧಿಸಿ ಅಪೇಕ್ಷಾ ಮಾತನಾಡಿದ್ದಾರೆ. ಮೀನುಗಾರರನ್ನು ಬಿಡುಗಡೆ ಮಾಡದೇ ಇದ್ದರೆ ಸಮುದ್ರಕ್ಕೆ ಹಾರಿ ಸಾವನಪ್ಪುವುದಾಗಿಯೂ ಅಪೇಕ್ಷಾ ಹೇಳಿದ್ದಾರೆ. ಇದರೊಂದಿಗೆ `ನ್ಯಾಯ ಕೊಡಲು ಸಾಧ್ಯವಾಗದೇ ಇದ್ದರೆ ಮೀನುಗಾರರೆಲ್ಲರಿಗೂ ದಯಾ ಮರಣ ಕೊಡಿ’ ಎಂದು ಅಪೇಕ್ಷಾ ಹೇಳಿಕೊಂಡು ಕಣ್ಣೀರಾಗಿದ್ದಾರೆ.

Advertisement. Scroll to continue reading.

ಮುನ್ನಚ್ಚರಿಕಾ ಕ್ರಮವಾಗಿ ಈ ದಿನ ಕಡಲ ಭಾಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅದಾಗಿಯೂ ಮೀನುಗಾರರು ಸಮುದ್ರಕ್ಕೆ ಇಳಿದು ಪ್ರತಿಭಟನೆ ನಡೆಸಿದರು. ಹೀಗಾಗಿ 50ಕ್ಕೂ ಅಧಿಕ ಜನರನ್ನು ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಇನ್ನಷ್ಟು ಜನ ದೊಡ್ಡ ಮಟ್ಟದಲ್ಲಿ ಪ್ರತಿಭಟಿಸಿದರು.

Advertisement. Scroll to continue reading.

ಪುಠಾಣಿ ಅಪೇಕ್ಷಾ ಅವರ ವಿಡಿಯೋ ನೋಡಿ.. ಸುದ್ದಿ ಮುಂದೆ ಓದಿ..

ಇನ್ನೂ, ಹೊನ್ನಾವರದಲ್ಲಿ ಪೋರ್ಟ ಪ್ರೆ ಲಿ ಕಂಪನಿ 600 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣಕ್ಕೆ ಆಸಕ್ತಿವಹಿಸಿದೆ. ಕಳೆದ ಮೂರು ವರ್ಷಗಳಿಂದಲೂ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂಗಳವಾರ ಬಂದರು ಕಾರ್ಯಕ್ಕೆ ಸರ್ವೇ ನಡೆದಿದ್ದು, ಈ ವೇಳೆಯೂ ಮೀನುಗಾರರು ಪ್ರತಿಭಟಿಸಿದರು. ಪ್ರತಿಭಟನೆ ವೇಳೆ ನಾಲ್ವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಂದರು ನಿರ್ಮಾಣದ ನಂತರ ಮೀನುಗಾರಿಕೆಗೆ ಸಮಸ್ಯೆಯಾಗಲಿದೆ ಎಂದು ಪ್ರತಿಭಟನಾಕಾರರು ವಿವರಿಸಿದರು.

 

Previous Post

ಗರ್ಭಿಣಿ ಹಸು ಕೊಂದ ದುಷ್ಟವ್ಯಾಘ್ರ!

Next Post

PDO ವರ್ಗಾವಣೆಗಾಗಿ ಮುಖ್ಯಮಂತ್ರಿಗೆ ಮೊರೆ!

Next Post

PDO ವರ್ಗಾವಣೆಗಾಗಿ ಮುಖ್ಯಮಂತ್ರಿಗೆ ಮೊರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ