6
  • Latest

ಶಿರಸಿಗೂ ವ್ಯಾಪಿಸಿದ ಮಂಗನ ಸೊಂಕು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿಗೂ ವ್ಯಾಪಿಸಿದ ಮಂಗನ ಸೊಂಕು!

AchyutKumar by AchyutKumar
in ರಾಜ್ಯ

ತಲೆ ನೋವು, ಸೊಂಟ ನೋವು, ವಿಪರೀತ ಜ್ವರದ ಜೊತೆ ನಿಶಕ್ತಿಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶಿರಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಮಂಗನ ಕಾಯಿಲೆಯ ಲಕ್ಷಣ ಗೋಚರಿಸಿದೆ.

ADVERTISEMENT

ಶಿವಮೊಗ್ಗ ಜಿಲ್ಲೆಯ ಸೊರಬದ ಕ್ಯಾಸನೂರು ಬಳಿ 1956ರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆಗೆ ಈವರೆಗೂ ಔಷಧಿ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಮಂಗನ ಕಾಯಿಲೆ ಬಾರದಂತೆ ಎಚ್ಚರವಹಿಸುವಂತೆ ಆರೋಗ್ಯಾಧಿಕಾರಿಗಳು ಜನ ಜಾಗೃತಿ ನಡೆಸುತ್ತಲೇ ಬಂದಿದ್ದಾರೆ. ಅದಾಗಿಯೂ ಮಂಗನ ಕಾಯಿಲೆ ಪ್ರಸರಿಸುತ್ತಿದ್ದು, ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚಿಗೆ ವರದಿಯಾಗುತ್ತಿದ್ದ ಈ ರೋಗ ಇದೀಗ ಶಿರಸಿಗೂ ವ್ಯಾಪಿಸಿದೆ.

ಸದ್ಯ 51 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಕಾಣಿಸಿದೆ. ಈ ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ಎಂದು ಅದನ್ನು ಗುರುತಿಸಲಾಗಿದೆ. ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಯ ಆರೈಕೆ ಕೆಲಸ ಮುಂದುವರೆದಿದೆ. ತಾಲೂಕಾ ಆರೋಗ್ಯ ಇಲಾಖೆಯವರು ಗ್ರಾಮೀಣ ಭಾಗಗಳಿಗೆ ತೆರಳಿ ಇನ್ನಷ್ಟು ಅರಿವು ಮೂಡಿಸುವ ಸಿದ್ಧತೆ ಮಾಡಿಕೊಂಡಿದ್ದಾರೆ.

Advertisement. Scroll to continue reading.

ಪ್ಲಾವಿ ವೈರಸ್ ಎಂಬ ವೈರಾಣು ಹೊಂದಿದ ಉಣ್ಣೆಗಳು ಕಚ್ಚುವುದರಿಂದ ಈ ರೋಗ ಮನುಷ್ಯನಿಗೆ ಬರುತ್ತದೆ. ಹೀಗಾಗಿ ಉಣ್ಣೆ ಕಚ್ಚಿಸಿಕೊಳ್ಳುವುದರಿಂದ ರಕ್ಷಣೆ ಪಡೆಯುವುದು ಉತ್ತಮ. `ಕಾಡಿಗೆ ಹೋಗುವ ಮುನ್ನ ಡೇಪೋ ತೈಲವನ್ನು ಕೈ-ಕಾಲುಗಳಿಗೆ ಲೇಪಿಸಿಕೊಳ್ಳಬೇಕು. ಮೈ ತುಂಬ ಬಟ್ಟೆ ಧರಿಸಿ ಸಂಚರಿಸಬೇಕು. ಕಾಡಿನಿಂದ ಮರಳಿದ ನಂತರ ಸೋಪು ಬಳಸಿ ಬಿಸಿ ನೀರಿನಿಂದ ಸ್ನಾನ ಮಾಡಬೇಕು. ಬಟ್ಟೆಗಳನ್ನು ಸಹ ಬಿಸಿ ನೀರಿನಿಂದ ತೊಳೆಯಬೇಕು. ಮನೆ ಸುತ್ತಲಿನ ಪ್ರದೇಶ ಸ್ವಚ್ಛವಾಗಿರಿಸಿಕೊಳ್ಳಬೇಕು’ ಎಂದು ವೈದ್ಯರು ಕರೆ ನೀಡಿದ್ದಾರೆ.

Advertisement. Scroll to continue reading.
Previous Post

PDO ವರ್ಗಾವಣೆಗಾಗಿ ಮುಖ್ಯಮಂತ್ರಿಗೆ ಮೊರೆ!

Next Post

ಭಕ್ತಿ ಮಾರ್ಗ: ಕವಳಾ ಗುಹೆಗೆ ಪಣಸೋಲಿಯೇ ದಾರಿ!

Next Post

ಭಕ್ತಿ ಮಾರ್ಗ: ಕವಳಾ ಗುಹೆಗೆ ಪಣಸೋಲಿಯೇ ದಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ