6
  • Latest

ಕಾರವಾರಕ್ಕೆ ಸುಸಜ್ಜಿತ ಆಸ್ಪತ್ರೆ: ಮುಖ್ಯಮಂತ್ರಿಯೊoದಿಗೆ ಸಚಿವರ ಮಾತುಕಥೆಯ ಭರವಸೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾರವಾರಕ್ಕೆ ಸುಸಜ್ಜಿತ ಆಸ್ಪತ್ರೆ: ಮುಖ್ಯಮಂತ್ರಿಯೊoದಿಗೆ ಸಚಿವರ ಮಾತುಕಥೆಯ ಭರವಸೆ!

AchyutKumar by AchyutKumar
in ರಾಜ್ಯ

`ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿಮಾರ್ಣ ವಿಷಯವಾಗಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಆಸ್ಪತ್ರೆ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.

`ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಬಹು ದಿನದ ಕನಸಾಗಿದೆ. ಇದನ್ನು ನಿರ್ಮಾಣ ಮಾಡಲು ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಜನರ ಒತ್ತಾಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವೆ. ಇನ್ನೂ ಕೆಲವೇ ದಿನಗಳಲ್ಲಿ ಕ್ರಿಮ್ಸ್ನಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಅದಕ್ಕೆ ಬೇಕಾದ ಉಪಕರಣ ಅಳವಡಿಸುವ ಕಾರ್ಯ ನಡೆಯುತ್ತಿದೆ’ ಎಂದರು.

`ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೂ 3.75 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸಲಿದ್ದು, ಮುಂದಿನ ಎರಡು ತಿಂಗಳೊಳಗಾಗಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದರು. `ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಸ್ಥಳೀಯ ಜನರ ಚಿಕಿತ್ಸೆಗೆ ಅನುಕೂಲವಾಗಲಿದ್ದು, ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಚಿಕಿತ್ಸೆ ತೆರಳುವುದು ತಪ್ಪಲಿದೆ’ ಎಂದರು.

`ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಶೀಘ್ರದಲ್ಲಿ ಎಂಆರ್‌ಐ ಯಂತ್ರವನ್ನು ಒದಗಿಸಲಾಗುವುದು. ಈ ಮೂಲಕ ಜಿಲ್ಲಾ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದ್ದು, ರಾಜ್ಯದಲ್ಲಿ ಈಗಾಗಲೇ 71 ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ 24 ಸರ್ಕಾರಿ ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದ ವತಿಯಿಂದ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಮೂಲಕ ಸ್ಥಳೀಯರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ’ ಎಂದರು.

ShareSendTweetShare
Previous Post

ಆರೋಗ್ಯ ಸೇವೆ: ಬರೀ ಭರವಸೆ ಆಗದಿರಲಿ ಈ ಬೇಡಿಕೆ!

Next Post

ಪತಿ ನೆನಪಿನಲ್ಲಿ ಪ್ರಾಣ ತ್ಯಾಗ ಮಾಡಿದ ಪತ್ನಿ!

Next Post
A student died after being attacked by a warden!

ಪತಿ ನೆನಪಿನಲ್ಲಿ ಪ್ರಾಣ ತ್ಯಾಗ ಮಾಡಿದ ಪತ್ನಿ!

ಚಂದ್ಗುಳಿಯ ಚಂದ.. ಕಣ್ತುಂಬಿಕೊoಡ ಭಕ್ತವೃಂದ

A tiger that ambushed a fighter's house Today the leopard got bau bau biryani!

ಹೋರಾಟಗಾರನ ಮನೆಗೆ ಹೊಂಚು ಹಾಕಿದ ವ್ಯಾಘ್ರ: ಈ ದಿನ ಚಿರತೆಗೆ ಸಿಕ್ಕಿದ್ದು ಬೌ ಬೌ ಬಿರಿಯಾನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.