6
  • Latest
The young woman who gave a hand: One hundred doubts on the body burnt in the fire!

ಕೈ ಕೊಟ್ಟ ಯುವತಿ: ಬೆಂಕಿಯಲ್ಲಿ ಬೆಂದ ಶವದ ಮೇಲೆ ನೂರು ಅನುಮಾನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೈ ಕೊಟ್ಟ ಯುವತಿ: ಬೆಂಕಿಯಲ್ಲಿ ಬೆಂದ ಶವದ ಮೇಲೆ ನೂರು ಅನುಮಾನ!

AchyutKumar by AchyutKumar
in ಸ್ಥಳೀಯ
The young woman who gave a hand: One hundred doubts on the body burnt in the fire!

ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಸತೀಶನ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನ ಸಾವಿನಲ್ಲಿ ಅನುಮಾನವಿರುವುದಾಗಿ ಕುಟುಂಬದವರು ಪೊಲೀಸರಿಗೆ ಹೇಳಿದ್ದು, ಸಮಗ್ರ ತನಿಖೆಗಾಗಿ ಒತ್ತಾಯಿಸಿದ್ದಾರೆ.

ADVERTISEMENT

ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿಯ ವಡೆಹೊಕ್ಕಳಿಯಲ್ಲಿ ಸತೀಶ ಕರಿಗಾರ (35) ಎಲೆಕ್ಟಿಕಲ್ ಕೆಲಸ ಮಾಡಿಕೊಂಡಿದ್ದರು. ಸತೀಶರನ್ನು ಜನ ನಾಗೇಶ್ ಎಂದು ಸಹ ಕರೆಯುತ್ತಿದ್ದರು. ಸತೀಶ ಕರಿಗಾರ ಕೊಡಸೆ ಗ್ರಾಮದ ಲಾವಣ್ಯ (ಹೆಸರು ಬದಲಿಸಿದೆ) ಎಂಬಾತರನ್ನು ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಅವರಿಬ್ಬರ ನಡುವೆ ವೈಮನಸ್ಸು ಕಾಣಿಸಿಕೊಂಡಿತ್ತು. ಅದಾದ ನಂತರ ಲಾವಣ್ಯ ಸತೀಶರನ್ನು ದೂರ ಮಾಡಿದ್ದು, ಇಬ್ಬರು ಮಾತನಾಡುವುದನ್ನು ಬಿಟ್ಟಿದ್ದರು.

ಹುಡುಗಿ ಕೈ ಕೊಟ್ಟ ಕಾರಣ ಸತೀಶ ಕರಿಗಾರ ಬೇಸರಿಸಿಕೊಂಡಿದ್ದರು. `ಜೀವನದಲ್ಲಿ ಬಯಸಿದ್ದು ಏನು ಸಿಗುತ್ತಿಲ್ಲ’ ಎಂದು ನೊಂದಿದ್ದರು. ಫೆ 24ರ ಬೆಳಗ್ಗೆ 7 ಗಂಟೆಗೆ ಮನೆಯಿಂದ ಹೊರಟ ಸತೀಶ್ ಕರಿಗಾರ್ ಮತ್ತೆ ಮನೆಗೆ ಬಂದಿರಲಿಲ್ಲ. ಸಾಕಷ್ಟು ಹುಡುಕಾಟ ನಡೆಸಿದರೂ ಅವರ ಸುಳಿವು ಸಿಕ್ಕಿರಲಿಲ್ಲ. ಈ ಹಿನ್ನಲೆ ಸತೀಶ ಅವರ ಅಕ್ಕ ಸುನಿತಾ ಕಾಗಲಕರ ಅವರು ಪೊಲೀಸ್ ದೂರು ನೀಡಿದ್ದರು. ಸತೀಶ ಕರಿಗಾರರನ್ನು ಹುಡುಕಿಕೊಡುವಂತೆ ಅವರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದರು.

Advertisement. Scroll to continue reading.

ಈ ನಡುವೆ ಫೆ 28ರ ರಾತ್ರಿ ತೋಟದಲ್ಲಿರುವ ಹಳೆಯ ಮನೆ ಬಳಿ ಶವವೊಂದು ಅರೆಬೆಂದ ಸ್ಥಿತಿಯಲ್ಲಿರುವ ಬಗ್ಗೆ ಸುದ್ದಿ ಸಿಕ್ಕಿತು. ಅಲ್ಲಿ ಹೋಗಿ ಪರಿಶೀಲಿಸಿದ ಕುಟುಂಬದವರಿಗೆ ಅದು ಸತೀಶನ ಶವ ಎಂದು ಖಾತ್ರಿಯಾಯಿತು. ಚಿತ್ರದುರ್ಗದಲ್ಲಿ ನೌಕರಿ ಮಾಡುತ್ತಿರುವ ಸತೀಶರ ಸಹೋದರ ಸಂದೀಪ ಕರಿಗಾರ ಸಹ ಮಾವಿನ ಮರದ ಬುಡದಲ್ಲಿ ಬೆಂಕಿಗೆ ಆಹುತಿಯಾದ ಶವ ನೋಡಿದರು. ಎಲ್ಲರೂ ಇದನ್ನು `ಆತ್ಮಹತ್ಯೆ’ ಎಂದರು. ಆದರೆ, ಸತೀಶ ಅವರ ಮನಸ್ಸು ಅದನ್ನು ಒಪ್ಪಲಿಲ್ಲ.

Advertisement. Scroll to continue reading.

ಹೀಗಾಗಿ ಪೊಲೀಸ್ ಠಾಣೆಗೆ ತೆರಳಿದ ಸಂದೀಪ ಕರಿಗಾರ್ ಅವರು ಸಹೋದರನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಈ ಸಾವಿನ ನೈಜ ಕಾರಣ ಪತ್ತೆ ಮಾಡುವಂತೆ ಕೋರಿ ಪ್ರಕರಣವನ್ನು ದಾಖಲಿಸಿದರು. ಪೊಲೀಸ್ ಸಿಬ್ಬಂದಿ ರೇಣುಕಾ ಬೆಳಕಟ್ಟಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

 

Previous Post

ಸುಸಜ್ಜಿತ ಆಸ್ಪತ್ರೆ: 99 ವರ್ಷದ ಲೀಸ್’ಗೆ 15 ಎಕರೆ ಭೂಮಿಗೆ ಸಚಿವರ ಶಿಫಾರಸ್ಸು!

Next Post

ಬೀದಿ ನಾಯಿ ಕಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು!

Next Post

ಬೀದಿ ನಾಯಿ ಕಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ